ಬ್ರೇಕಿಂಗ್ ನ್ಯೂಸ್
07-11-20 12:38 pm Mangalore Correspondent ಕ್ರೈಂ
ಮಂಗಳೂರು, ನವೆಂಬರ್ 07: ಕಿರುಕುಳ ಪ್ರಕರಣದಲ್ಲಿ ದೂರು ಕೊಡಲು ಹೋಗಿದ್ದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆಯೇ ಬಜ್ಪೆ ಠಾಣೆಯ ಪೊಲೀಸರು ಬಾಸುಂಡೆ ಬರುವಂತೆ ಹೊಡೆದು ಹಲ್ಲೆಗೈದಿರುವ ಆರೋಪ ಕೇಳಿಬಂದಿದ್ದು, ಮೂವರು ಪೊಲೀಸ್ ಪೇದೆಗಳ ವಿರುದ್ಧ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮಂಗಳೂರು ಹೊರವಲಯದ ಗಂಜಿಮಠದ ಪರಿಸರದ ಪಿಯುಸಿ ವಿದ್ಯಾರ್ಥಿನಿ ಹಲ್ಲೆಗೊಳಗಾದ ಯುವತಿಯಾಗಿದ್ದು, ಕೈ, ಕಾಲಿಗೆ ತೀವ್ರ ಗಾಯಗೊಂಡು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿದ್ಯಾರ್ಥಿನಿಗೆ ಎಡಪದವು ಬಳಿಯ ಇರುವೈಲು ನಿವಾಸಿ ಶ್ರೀಕಾಂತ್ ನಾಗೇಶ್ ಎಂಬ ಯುವಕನ ಜೊತೆಗೆ ಫೇಸ್ಬುಕ್ ನಲ್ಲಿ ಪರಿಚಯ ಆಗಿತ್ತು ಎನ್ನಲಾಗುತ್ತಿದೆ. ಈ ಬಗ್ಗೆ ಪರಿಚಯ ಪ್ರೇಮಕ್ಕೆ ತಿರುಗಿ, ಯುವಕ ನಾಗೇಶ್ ಯುವತಿಯ ಮನೆಗೆ ಬಂದು ಕಿರುಕುಳ ನೀಡಿದ್ದಾನೆ. ಮದುವೆ ಮಾಡಿಕೊಡುವಂತೆ ಒತ್ತಾಯ ಮಾಡಿದ್ದು, ಯುವತಿ ಅಪ್ರಾಪ್ತಳಾಗಿದ್ದರಿಂದ ಹೆತ್ತವರು ನಿರಾಕರಿಸಿದ್ದರು ಎನ್ನಲಾಗಿದೆ.
ಈ ನಡುವೆ, ಬೇರೆ ಯುವಕರನ್ನು ಕಟ್ಟಿಕೊಂಡು ಯುವತಿಯ ಮನೆಗೆ ಬಂದಿದ್ದ ಯುವಕ ನಾಗೇಶ್, ಮದುವೆ ಮಾಡಿಕೊಡದಿದ್ದರೆ ನಿಮ್ಮ ಮನೆಯನ್ನು ಧ್ವಂಸ ಮಾಡುತ್ತೇನೆಂದು ಬೆದರಿಕೆ ಹಾಕಿದ್ದಾನೆ ಎಂದು ದೂರಲಾಗಿದ್ದು ಯುವತಿಯ ತಂದೆ ಈ ಬಗ್ಗೆ ಬಜ್ಪೆ ಠಾಣೆಗೆ ದೂರು ನೀಡಿದ್ದರು. ಆದರೆ, ನಾಗೇಶ್ ಮರುದಿನ ಬಜ್ಪೆ ಠಾಣೆಗೆ ವಕೀಲರ ಜೊತೆ ತೆರಳಿದ್ದಾನೆ. ಇದರಿಂದ ಯು ಟರ್ನ್ ಹೊಡೆದ ಬಜ್ಪೆ ಪೊಲೀಸರು ಯುವತಿಯನ್ನು ಕರೆಸಿ ಬಾಸುಂಡೆ ಬರುವಂತೆ ಹೊಡೆದಿದ್ದಾರೆ ಎಂದು ದೂರಲಾಗಿದ್ದು, ಈ ಬಗ್ಗೆ ಯುವತಿಯ ತಂದೆ ಜೆರಾಲ್ಡ್ ಮ್ಯಾಕ್ಸಿಂ ಪಿಂಟೋ ಪಾಂಡೇಶ್ವರದ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.




ಅದರಂತೆ, ಮಹಿಳಾ ಠಾಣೆಯಲ್ಲಿ ಬಜ್ಪೆ ಠಾಣೆಯ ಇಬ್ಬರು ಮಹಿಳಾ ಪೇದೆ ಸೇರಿದಂತೆ ಮೂವರು ಪೊಲೀಸರ ವಿರುದ್ಧ ಪ್ರಕರಣ ದಾಖಲಾಗಿದೆ. ಅಲ್ಲದೆ, ಮಂಗಳೂರು ಕೆಥೋಲಿಕ್ ಸಭಾ ಮೂಲಕ ಮಂಗಳೂರು ಪೊಲೀಸ್ ಕಮಿಷನರ್ ಗೆ ದೂರು ನೀಡಲಾಗಿದ್ದು, ತಪ್ಪಿತಸ್ಥ ಪೊಲೀಸರನ್ನು ಸಸ್ಪೆಂಡ್ ಮಾಡುವಂತೆ ಒತ್ತಾಯಿಸಲಾಗಿದೆ.
Video Report:
The Bajpe Police have beaten up a girl mercilessly inside the police station who had come to give a complaint of torture by an unknown Boy. An FIR has been registered against 3 police personals of Bajpe station, Mangalore.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm