ಬ್ರೇಕಿಂಗ್ ನ್ಯೂಸ್
            
                        07-11-20 12:38 pm Mangalore Correspondent ಕ್ರೈಂ
            ಮಂಗಳೂರು, ನವೆಂಬರ್ 07: ಕಿರುಕುಳ ಪ್ರಕರಣದಲ್ಲಿ ದೂರು ಕೊಡಲು ಹೋಗಿದ್ದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆಯೇ ಬಜ್ಪೆ ಠಾಣೆಯ ಪೊಲೀಸರು ಬಾಸುಂಡೆ ಬರುವಂತೆ ಹೊಡೆದು ಹಲ್ಲೆಗೈದಿರುವ ಆರೋಪ ಕೇಳಿಬಂದಿದ್ದು, ಮೂವರು ಪೊಲೀಸ್ ಪೇದೆಗಳ ವಿರುದ್ಧ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮಂಗಳೂರು ಹೊರವಲಯದ ಗಂಜಿಮಠದ ಪರಿಸರದ ಪಿಯುಸಿ ವಿದ್ಯಾರ್ಥಿನಿ ಹಲ್ಲೆಗೊಳಗಾದ ಯುವತಿಯಾಗಿದ್ದು, ಕೈ, ಕಾಲಿಗೆ ತೀವ್ರ ಗಾಯಗೊಂಡು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿದ್ಯಾರ್ಥಿನಿಗೆ ಎಡಪದವು ಬಳಿಯ ಇರುವೈಲು ನಿವಾಸಿ ಶ್ರೀಕಾಂತ್ ನಾಗೇಶ್ ಎಂಬ ಯುವಕನ ಜೊತೆಗೆ ಫೇಸ್ಬುಕ್ ನಲ್ಲಿ ಪರಿಚಯ ಆಗಿತ್ತು ಎನ್ನಲಾಗುತ್ತಿದೆ. ಈ ಬಗ್ಗೆ ಪರಿಚಯ ಪ್ರೇಮಕ್ಕೆ ತಿರುಗಿ, ಯುವಕ ನಾಗೇಶ್ ಯುವತಿಯ ಮನೆಗೆ ಬಂದು ಕಿರುಕುಳ ನೀಡಿದ್ದಾನೆ. ಮದುವೆ ಮಾಡಿಕೊಡುವಂತೆ ಒತ್ತಾಯ ಮಾಡಿದ್ದು, ಯುವತಿ ಅಪ್ರಾಪ್ತಳಾಗಿದ್ದರಿಂದ ಹೆತ್ತವರು ನಿರಾಕರಿಸಿದ್ದರು ಎನ್ನಲಾಗಿದೆ.
ಈ ನಡುವೆ, ಬೇರೆ ಯುವಕರನ್ನು ಕಟ್ಟಿಕೊಂಡು ಯುವತಿಯ ಮನೆಗೆ ಬಂದಿದ್ದ ಯುವಕ ನಾಗೇಶ್, ಮದುವೆ ಮಾಡಿಕೊಡದಿದ್ದರೆ ನಿಮ್ಮ ಮನೆಯನ್ನು ಧ್ವಂಸ ಮಾಡುತ್ತೇನೆಂದು ಬೆದರಿಕೆ ಹಾಕಿದ್ದಾನೆ ಎಂದು ದೂರಲಾಗಿದ್ದು ಯುವತಿಯ ತಂದೆ ಈ ಬಗ್ಗೆ ಬಜ್ಪೆ ಠಾಣೆಗೆ ದೂರು ನೀಡಿದ್ದರು. ಆದರೆ, ನಾಗೇಶ್ ಮರುದಿನ ಬಜ್ಪೆ ಠಾಣೆಗೆ ವಕೀಲರ ಜೊತೆ ತೆರಳಿದ್ದಾನೆ. ಇದರಿಂದ ಯು ಟರ್ನ್ ಹೊಡೆದ ಬಜ್ಪೆ ಪೊಲೀಸರು ಯುವತಿಯನ್ನು ಕರೆಸಿ ಬಾಸುಂಡೆ ಬರುವಂತೆ ಹೊಡೆದಿದ್ದಾರೆ ಎಂದು ದೂರಲಾಗಿದ್ದು, ಈ ಬಗ್ಗೆ ಯುವತಿಯ ತಂದೆ ಜೆರಾಲ್ಡ್ ಮ್ಯಾಕ್ಸಿಂ ಪಿಂಟೋ ಪಾಂಡೇಶ್ವರದ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.




ಅದರಂತೆ, ಮಹಿಳಾ ಠಾಣೆಯಲ್ಲಿ ಬಜ್ಪೆ ಠಾಣೆಯ ಇಬ್ಬರು ಮಹಿಳಾ ಪೇದೆ ಸೇರಿದಂತೆ ಮೂವರು ಪೊಲೀಸರ ವಿರುದ್ಧ ಪ್ರಕರಣ ದಾಖಲಾಗಿದೆ. ಅಲ್ಲದೆ, ಮಂಗಳೂರು ಕೆಥೋಲಿಕ್ ಸಭಾ ಮೂಲಕ ಮಂಗಳೂರು ಪೊಲೀಸ್ ಕಮಿಷನರ್ ಗೆ ದೂರು ನೀಡಲಾಗಿದ್ದು, ತಪ್ಪಿತಸ್ಥ ಪೊಲೀಸರನ್ನು ಸಸ್ಪೆಂಡ್ ಮಾಡುವಂತೆ ಒತ್ತಾಯಿಸಲಾಗಿದೆ.
Video Report:
            
            
            The Bajpe Police have beaten up a girl mercilessly inside the police station who had come to give a complaint of torture by an unknown Boy. An FIR has been registered against 3 police personals of Bajpe station, Mangalore.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 08:37 pm
                        
            
                  
                Mangalore Correspondent    
            
                    
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm