ಬ್ರೇಕಿಂಗ್ ನ್ಯೂಸ್
07-11-20 12:38 pm Mangalore Correspondent ಕ್ರೈಂ
ಮಂಗಳೂರು, ನವೆಂಬರ್ 07: ಕಿರುಕುಳ ಪ್ರಕರಣದಲ್ಲಿ ದೂರು ಕೊಡಲು ಹೋಗಿದ್ದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆಯೇ ಬಜ್ಪೆ ಠಾಣೆಯ ಪೊಲೀಸರು ಬಾಸುಂಡೆ ಬರುವಂತೆ ಹೊಡೆದು ಹಲ್ಲೆಗೈದಿರುವ ಆರೋಪ ಕೇಳಿಬಂದಿದ್ದು, ಮೂವರು ಪೊಲೀಸ್ ಪೇದೆಗಳ ವಿರುದ್ಧ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮಂಗಳೂರು ಹೊರವಲಯದ ಗಂಜಿಮಠದ ಪರಿಸರದ ಪಿಯುಸಿ ವಿದ್ಯಾರ್ಥಿನಿ ಹಲ್ಲೆಗೊಳಗಾದ ಯುವತಿಯಾಗಿದ್ದು, ಕೈ, ಕಾಲಿಗೆ ತೀವ್ರ ಗಾಯಗೊಂಡು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿದ್ಯಾರ್ಥಿನಿಗೆ ಎಡಪದವು ಬಳಿಯ ಇರುವೈಲು ನಿವಾಸಿ ಶ್ರೀಕಾಂತ್ ನಾಗೇಶ್ ಎಂಬ ಯುವಕನ ಜೊತೆಗೆ ಫೇಸ್ಬುಕ್ ನಲ್ಲಿ ಪರಿಚಯ ಆಗಿತ್ತು ಎನ್ನಲಾಗುತ್ತಿದೆ. ಈ ಬಗ್ಗೆ ಪರಿಚಯ ಪ್ರೇಮಕ್ಕೆ ತಿರುಗಿ, ಯುವಕ ನಾಗೇಶ್ ಯುವತಿಯ ಮನೆಗೆ ಬಂದು ಕಿರುಕುಳ ನೀಡಿದ್ದಾನೆ. ಮದುವೆ ಮಾಡಿಕೊಡುವಂತೆ ಒತ್ತಾಯ ಮಾಡಿದ್ದು, ಯುವತಿ ಅಪ್ರಾಪ್ತಳಾಗಿದ್ದರಿಂದ ಹೆತ್ತವರು ನಿರಾಕರಿಸಿದ್ದರು ಎನ್ನಲಾಗಿದೆ.
ಈ ನಡುವೆ, ಬೇರೆ ಯುವಕರನ್ನು ಕಟ್ಟಿಕೊಂಡು ಯುವತಿಯ ಮನೆಗೆ ಬಂದಿದ್ದ ಯುವಕ ನಾಗೇಶ್, ಮದುವೆ ಮಾಡಿಕೊಡದಿದ್ದರೆ ನಿಮ್ಮ ಮನೆಯನ್ನು ಧ್ವಂಸ ಮಾಡುತ್ತೇನೆಂದು ಬೆದರಿಕೆ ಹಾಕಿದ್ದಾನೆ ಎಂದು ದೂರಲಾಗಿದ್ದು ಯುವತಿಯ ತಂದೆ ಈ ಬಗ್ಗೆ ಬಜ್ಪೆ ಠಾಣೆಗೆ ದೂರು ನೀಡಿದ್ದರು. ಆದರೆ, ನಾಗೇಶ್ ಮರುದಿನ ಬಜ್ಪೆ ಠಾಣೆಗೆ ವಕೀಲರ ಜೊತೆ ತೆರಳಿದ್ದಾನೆ. ಇದರಿಂದ ಯು ಟರ್ನ್ ಹೊಡೆದ ಬಜ್ಪೆ ಪೊಲೀಸರು ಯುವತಿಯನ್ನು ಕರೆಸಿ ಬಾಸುಂಡೆ ಬರುವಂತೆ ಹೊಡೆದಿದ್ದಾರೆ ಎಂದು ದೂರಲಾಗಿದ್ದು, ಈ ಬಗ್ಗೆ ಯುವತಿಯ ತಂದೆ ಜೆರಾಲ್ಡ್ ಮ್ಯಾಕ್ಸಿಂ ಪಿಂಟೋ ಪಾಂಡೇಶ್ವರದ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.




ಅದರಂತೆ, ಮಹಿಳಾ ಠಾಣೆಯಲ್ಲಿ ಬಜ್ಪೆ ಠಾಣೆಯ ಇಬ್ಬರು ಮಹಿಳಾ ಪೇದೆ ಸೇರಿದಂತೆ ಮೂವರು ಪೊಲೀಸರ ವಿರುದ್ಧ ಪ್ರಕರಣ ದಾಖಲಾಗಿದೆ. ಅಲ್ಲದೆ, ಮಂಗಳೂರು ಕೆಥೋಲಿಕ್ ಸಭಾ ಮೂಲಕ ಮಂಗಳೂರು ಪೊಲೀಸ್ ಕಮಿಷನರ್ ಗೆ ದೂರು ನೀಡಲಾಗಿದ್ದು, ತಪ್ಪಿತಸ್ಥ ಪೊಲೀಸರನ್ನು ಸಸ್ಪೆಂಡ್ ಮಾಡುವಂತೆ ಒತ್ತಾಯಿಸಲಾಗಿದೆ.
Video Report:
The Bajpe Police have beaten up a girl mercilessly inside the police station who had come to give a complaint of torture by an unknown Boy. An FIR has been registered against 3 police personals of Bajpe station, Mangalore.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am