ಬ್ರೇಕಿಂಗ್ ನ್ಯೂಸ್
25-08-23 06:34 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 25: ಲೋನ್ ಆ್ಯಪ್ ಮೂಲಕ ಸಾಲ ಪಡೆದ ಮಹಿಳೆಗೆ ಸಾಲ ಮರುಪಾವತಿಸಿದ ಬಳಿಕವೂ ಹೆಚ್ಚಿನ ಹಣಕ್ಕೆ ಒತ್ತಾಯಿಸಿ ನಗ್ನ ಪೊಟೋ ಹರಿಬಿಡುವ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ನೊಂದ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಏಪ್ರಿಲ್ 15ರಂದು ಮಹಿಳೆ ಗೂಗಲ್ ಪ್ಲೇ ಸ್ಟೋರ್ನಿಂದ ಲೋನ್ ಆ್ಯಪ್ವೊಂದನ್ನು ಡೌನ್ಲೋಡ್ ಮಾಡಿ, ಅದರಲ್ಲಿ 10,000 ರೂಪಾಯಿ ಲೋನ್ಗೆ ಅಪ್ಲೈ ಮಾಡಿದ್ದರು. ಕೂಡಲೇ ಅವರ ಖಾತೆಗೆ 7,500 ರೂ. ಕ್ರೆಡಿಟ್ ಆಗಿತ್ತು. ಸ್ವಲ್ಪ ದಿನಗಳ ನಂತರ 10000 ರೂ.ಗಳನ್ನು ಮರು ಪಾವತಿ ಮಾಡಿರುವುದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಸಾಲ ತೀರಿಸಿದ ನಂತರದ ದಿನಗಳಲ್ಲಿಯೂ ವಿವಿಧ ವಾಟ್ಸ್ಆ್ಯಪ್ ನಂಬರ್ಗಳ ಮೂಲಕ ಮಹಿಳೆಗೆ ಪುನಃ ಕಡ್ಡಾಯವಾಗಿ ಮತ್ತೆ ಲೋನ್ ಪಡೆಯಬೇಕು ಎಂದು ಒತ್ತಾಯಿಸಿ ಅವರ ಖಾತೆಗೆ 14,000 ರೂ. ಕ್ರೆಡಿಟ್ ಮಾಡಿದ್ದಾರೆ. ಈ ಹಣವನ್ನು ಮಹಿಳೆ ಮರುಪಾವತಿ ಮಾಡಿದ್ದರು. ಆದರೆ, ಪಡೆದ ಹಣವನ್ನೆಲ್ಲ ಪಾವತಿಸಿದ ಬಳಿಕವೂ ಆ್ಯಪ್ನವರ ಕಿರುಕುಳ ಮುಂದುವರೆದಿದ್ದು, ವಿವಿಧ ಮೊಬೈಲ್ ನಂಬರ್ಗಳಿಂದ ಕರೆ ಮಾಡಿ ಹೆಚ್ಚಿನ ಹಣಕ್ಕೆ ಒತ್ತಾಯಿಸಿದ್ದಾರೆ. ಹೀಗೆ ಹಂತ ಹಂತವಾಗಿ ತನ್ನ ಕಡೆಯಿಂದ ಒಟ್ಟೂ 51,000 ರೂ.ಗಳನ್ನು ಆ್ಯಪ್ನವರು ಹಾಕಿಸಿಕೊಂಡಿದ್ದಾರೆ ಎಂದು ಮಹಿಳೆ ದೂರಿದ್ದಾರೆ.
ನಂತರವೂ ಕೂಡ ಮಹಿಳೆಗೆ ವಿವಿಧ ನಂಬರ್ಗಳಿಂದ ಕರೆ ಮಾಡಿ ಹಣಕ್ಕಾಗಿ ಬೆದರಿಕೆ ಹಾಕಿದ್ದು, ಮಹಿಳೆಯ ಫೋಟೋವನ್ನು ಓರ್ವ ಹುಡುಗನೊಂದಿಗೆ ನಗ್ನವಾಗಿ ಇರುವ ರೀತಿಯಲ್ಲಿ ಎಡಿಟ್ ಮಾಡಿ ಕಳುಹಿಸಿದ್ದಾರೆ. ಹಣ ಕಳಿಸದಿದ್ದರೆ ಫೋಟೋವನ್ನು ಸಂಬಂಧಿಕರು ಹಾಗೂ ಇತರರಿಗೆ ಕಳುಹಿಸಲಾಗುವುದು ಹಾಗೂ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾರೆ ಎಂದು ನೊಂದ ಮಹಿಳೆ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
Loan from mobile app, women black mailed of making nude photo viral in Mangalore.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm