ಬ್ರೇಕಿಂಗ್ ನ್ಯೂಸ್
25-08-23 09:04 pm Mangalore Correspondent ಕ್ರೈಂ
ಉಳ್ಳಾಲ, ಆ.25: ಹಾಡಹಗಲೇ ಅಪರಿಚಿತ ಮಹಿಳೆಯೊಬ್ಬಳು ಒಂಟಿ ಮನೆಗೆ ನುಗ್ಗಿ ವೃದ್ಧೆಯನ್ನ ದಿಂಬಿನಿಂದ ಅದುಮಿಟ್ಟು ಕುತ್ತಿಗೆಯಲ್ಲಿದ್ದ 22 ಗ್ರಾಮ್ ಚಿನ್ನದ ಸರ ದರೋಡೆಗೈದು ಪರಾರಿಯಾಗಿರುವ ಘಟನೆ ಕುಂಪಲ ಮೂರುಕಟ್ಟೆ ಒಂದನೇ ಅಡ್ಡ ರಸ್ತೆಯ ಮಿತ್ರನಗರ ಎಂಬಲ್ಲಿ ನಡೆದಿದೆ.
ಮಿತ್ರನಗರದ ಒಂಟಿ ಮನೆ ನಿವಾಸಿ ಸುಶೀಲ(76) ಎಂಬವರ ಕತ್ತಿನಲ್ಲಿದ್ದ 22 ಗ್ರಾಮ್ ತೂಕದ ಹವಳ ಪೋಣಿತ ಚಿನ್ನದ ಸರವನ್ನ ದರೋಡೆಗೈಯಲಾಗಿದೆ. ಸುಶೀಲ ಅವರ ಪತಿ ಉಗ್ಗಪ್ಪ ಮೂಲ್ಯ ಅವರು ಕೆಲ ವರುಷಗಳ ಹಿಂದೆ ಸಾವನ್ನಪ್ಪಿದ್ದರು. ದಂಪತಿಗೆ ಮಕ್ಕಳಿರಲಿಲ್ಲ. ಹಾಗಾಗಿ ಸುಶೀಲ ಅವರು ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು.

ಇಂದು ಮಧ್ಯಾಹ್ನ 2.45 ರ ವೇಳೆ ಸುಶೀಲ ಅವರು ಮನೆಯ ಹಾಲ್ ನಲ್ಲಿ ಇದ್ದ ಮಂಚದಲ್ಲಿ ಗೋಡೆ ಕಡೆ ಮುಖ ಹಾಕಿ ಮಲಗಿದ್ದ ಸಂದರ್ಭ ಮಹಿಳೆಯೋರ್ವಳು ನುಗ್ಗಿದ್ದು ಮುಖಕ್ಕೆ ದಿಂಬನ್ನು ಅದುಮಿ ಸರವನ್ನು ದರೋಡೆಗೈದು ಪರಾರಿಯಾಗಿದ್ದಾಳೆ. ದರೋಡೆಗೈದ ಆಗಂತುಕ ಮಹಿಳೆ ಬಾಗಿಲಿನಿಂದ ಹೊರ ಓಡಿದಾಗ ಸುಶೀಲ ಅವರು ಮಹಿಳೆ ಚೂಡಿದಾರ್ ಧರಿಸಿದ್ದನ್ನ ಗಮನಿಸಿದ್ದಾರೆ.
ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕರಾದ ಸಂದೀಪ್, ಉಪ ನಿರೀಕ್ಷಕರಾದ ಶೀತಲ್ ಕುಮಾರ್ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಬಿಜೆಪಿ ಮುಖಂಡ ಸತೀಶ್ ಕುಂಪಲ ಅವರು ಪೊಲೀಸರಲ್ಲಿ ಆರೋಪಿಯ ಶೀಘ್ರ ಬಂಧನಕ್ಕೆ ಆಗ್ರಹಿಸಿದ್ದಾರೆ. ಈ ಹಿಂದೆಯೂ ಸುಶೀಲ ಅವರ ಎರಡು ಚಿನ್ನದ ಬಳೆಗಳು ಕಳವಾಗಿದ್ದು ಪೊಲೀಸ್ ದೂರು ನೀಡಿರಲಿಲ್ಲ. ಸ್ಥಳೀಯ ನಿವಾಸಿ ಆರ್ಥಿಕ ಮುಗ್ಗಟ್ಟಿನಲ್ಲಿರುವ ಮಹಿಳೆಯ ಮೇಲೆಯೇ ಶಂಕೆಯಿದ್ದು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
Elderly lonely woman robbed of 22 pavan gold at Kumpala in Mangalore. Police arrive at spot and are investigating the case.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm