ಬ್ರೇಕಿಂಗ್ ನ್ಯೂಸ್
25-08-23 09:04 pm Mangalore Correspondent ಕ್ರೈಂ
ಉಳ್ಳಾಲ, ಆ.25: ಹಾಡಹಗಲೇ ಅಪರಿಚಿತ ಮಹಿಳೆಯೊಬ್ಬಳು ಒಂಟಿ ಮನೆಗೆ ನುಗ್ಗಿ ವೃದ್ಧೆಯನ್ನ ದಿಂಬಿನಿಂದ ಅದುಮಿಟ್ಟು ಕುತ್ತಿಗೆಯಲ್ಲಿದ್ದ 22 ಗ್ರಾಮ್ ಚಿನ್ನದ ಸರ ದರೋಡೆಗೈದು ಪರಾರಿಯಾಗಿರುವ ಘಟನೆ ಕುಂಪಲ ಮೂರುಕಟ್ಟೆ ಒಂದನೇ ಅಡ್ಡ ರಸ್ತೆಯ ಮಿತ್ರನಗರ ಎಂಬಲ್ಲಿ ನಡೆದಿದೆ.
ಮಿತ್ರನಗರದ ಒಂಟಿ ಮನೆ ನಿವಾಸಿ ಸುಶೀಲ(76) ಎಂಬವರ ಕತ್ತಿನಲ್ಲಿದ್ದ 22 ಗ್ರಾಮ್ ತೂಕದ ಹವಳ ಪೋಣಿತ ಚಿನ್ನದ ಸರವನ್ನ ದರೋಡೆಗೈಯಲಾಗಿದೆ. ಸುಶೀಲ ಅವರ ಪತಿ ಉಗ್ಗಪ್ಪ ಮೂಲ್ಯ ಅವರು ಕೆಲ ವರುಷಗಳ ಹಿಂದೆ ಸಾವನ್ನಪ್ಪಿದ್ದರು. ದಂಪತಿಗೆ ಮಕ್ಕಳಿರಲಿಲ್ಲ. ಹಾಗಾಗಿ ಸುಶೀಲ ಅವರು ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು.

ಇಂದು ಮಧ್ಯಾಹ್ನ 2.45 ರ ವೇಳೆ ಸುಶೀಲ ಅವರು ಮನೆಯ ಹಾಲ್ ನಲ್ಲಿ ಇದ್ದ ಮಂಚದಲ್ಲಿ ಗೋಡೆ ಕಡೆ ಮುಖ ಹಾಕಿ ಮಲಗಿದ್ದ ಸಂದರ್ಭ ಮಹಿಳೆಯೋರ್ವಳು ನುಗ್ಗಿದ್ದು ಮುಖಕ್ಕೆ ದಿಂಬನ್ನು ಅದುಮಿ ಸರವನ್ನು ದರೋಡೆಗೈದು ಪರಾರಿಯಾಗಿದ್ದಾಳೆ. ದರೋಡೆಗೈದ ಆಗಂತುಕ ಮಹಿಳೆ ಬಾಗಿಲಿನಿಂದ ಹೊರ ಓಡಿದಾಗ ಸುಶೀಲ ಅವರು ಮಹಿಳೆ ಚೂಡಿದಾರ್ ಧರಿಸಿದ್ದನ್ನ ಗಮನಿಸಿದ್ದಾರೆ.
ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕರಾದ ಸಂದೀಪ್, ಉಪ ನಿರೀಕ್ಷಕರಾದ ಶೀತಲ್ ಕುಮಾರ್ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಬಿಜೆಪಿ ಮುಖಂಡ ಸತೀಶ್ ಕುಂಪಲ ಅವರು ಪೊಲೀಸರಲ್ಲಿ ಆರೋಪಿಯ ಶೀಘ್ರ ಬಂಧನಕ್ಕೆ ಆಗ್ರಹಿಸಿದ್ದಾರೆ. ಈ ಹಿಂದೆಯೂ ಸುಶೀಲ ಅವರ ಎರಡು ಚಿನ್ನದ ಬಳೆಗಳು ಕಳವಾಗಿದ್ದು ಪೊಲೀಸ್ ದೂರು ನೀಡಿರಲಿಲ್ಲ. ಸ್ಥಳೀಯ ನಿವಾಸಿ ಆರ್ಥಿಕ ಮುಗ್ಗಟ್ಟಿನಲ್ಲಿರುವ ಮಹಿಳೆಯ ಮೇಲೆಯೇ ಶಂಕೆಯಿದ್ದು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
Elderly lonely woman robbed of 22 pavan gold at Kumpala in Mangalore. Police arrive at spot and are investigating the case.
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 03:22 pm
HK News Staffer
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm