ಬ್ರೇಕಿಂಗ್ ನ್ಯೂಸ್
25-08-23 09:04 pm Mangalore Correspondent ಕ್ರೈಂ
ಉಳ್ಳಾಲ, ಆ.25: ಹಾಡಹಗಲೇ ಅಪರಿಚಿತ ಮಹಿಳೆಯೊಬ್ಬಳು ಒಂಟಿ ಮನೆಗೆ ನುಗ್ಗಿ ವೃದ್ಧೆಯನ್ನ ದಿಂಬಿನಿಂದ ಅದುಮಿಟ್ಟು ಕುತ್ತಿಗೆಯಲ್ಲಿದ್ದ 22 ಗ್ರಾಮ್ ಚಿನ್ನದ ಸರ ದರೋಡೆಗೈದು ಪರಾರಿಯಾಗಿರುವ ಘಟನೆ ಕುಂಪಲ ಮೂರುಕಟ್ಟೆ ಒಂದನೇ ಅಡ್ಡ ರಸ್ತೆಯ ಮಿತ್ರನಗರ ಎಂಬಲ್ಲಿ ನಡೆದಿದೆ.
ಮಿತ್ರನಗರದ ಒಂಟಿ ಮನೆ ನಿವಾಸಿ ಸುಶೀಲ(76) ಎಂಬವರ ಕತ್ತಿನಲ್ಲಿದ್ದ 22 ಗ್ರಾಮ್ ತೂಕದ ಹವಳ ಪೋಣಿತ ಚಿನ್ನದ ಸರವನ್ನ ದರೋಡೆಗೈಯಲಾಗಿದೆ. ಸುಶೀಲ ಅವರ ಪತಿ ಉಗ್ಗಪ್ಪ ಮೂಲ್ಯ ಅವರು ಕೆಲ ವರುಷಗಳ ಹಿಂದೆ ಸಾವನ್ನಪ್ಪಿದ್ದರು. ದಂಪತಿಗೆ ಮಕ್ಕಳಿರಲಿಲ್ಲ. ಹಾಗಾಗಿ ಸುಶೀಲ ಅವರು ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು.

ಇಂದು ಮಧ್ಯಾಹ್ನ 2.45 ರ ವೇಳೆ ಸುಶೀಲ ಅವರು ಮನೆಯ ಹಾಲ್ ನಲ್ಲಿ ಇದ್ದ ಮಂಚದಲ್ಲಿ ಗೋಡೆ ಕಡೆ ಮುಖ ಹಾಕಿ ಮಲಗಿದ್ದ ಸಂದರ್ಭ ಮಹಿಳೆಯೋರ್ವಳು ನುಗ್ಗಿದ್ದು ಮುಖಕ್ಕೆ ದಿಂಬನ್ನು ಅದುಮಿ ಸರವನ್ನು ದರೋಡೆಗೈದು ಪರಾರಿಯಾಗಿದ್ದಾಳೆ. ದರೋಡೆಗೈದ ಆಗಂತುಕ ಮಹಿಳೆ ಬಾಗಿಲಿನಿಂದ ಹೊರ ಓಡಿದಾಗ ಸುಶೀಲ ಅವರು ಮಹಿಳೆ ಚೂಡಿದಾರ್ ಧರಿಸಿದ್ದನ್ನ ಗಮನಿಸಿದ್ದಾರೆ.
ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕರಾದ ಸಂದೀಪ್, ಉಪ ನಿರೀಕ್ಷಕರಾದ ಶೀತಲ್ ಕುಮಾರ್ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಬಿಜೆಪಿ ಮುಖಂಡ ಸತೀಶ್ ಕುಂಪಲ ಅವರು ಪೊಲೀಸರಲ್ಲಿ ಆರೋಪಿಯ ಶೀಘ್ರ ಬಂಧನಕ್ಕೆ ಆಗ್ರಹಿಸಿದ್ದಾರೆ. ಈ ಹಿಂದೆಯೂ ಸುಶೀಲ ಅವರ ಎರಡು ಚಿನ್ನದ ಬಳೆಗಳು ಕಳವಾಗಿದ್ದು ಪೊಲೀಸ್ ದೂರು ನೀಡಿರಲಿಲ್ಲ. ಸ್ಥಳೀಯ ನಿವಾಸಿ ಆರ್ಥಿಕ ಮುಗ್ಗಟ್ಟಿನಲ್ಲಿರುವ ಮಹಿಳೆಯ ಮೇಲೆಯೇ ಶಂಕೆಯಿದ್ದು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
Elderly lonely woman robbed of 22 pavan gold at Kumpala in Mangalore. Police arrive at spot and are investigating the case.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
24-03-26 12:10 pm
HK News Staffer
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
24-03-26 11:55 am
HK News Staffer
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
ಕಾಸರಗೋಡು ಅಖಾಡ ರೆಡಿ ; ಎಲ್ ಡಿಎಫ್ ನಿಂದ ಶಾನವಾಸ್ ಪ...
23-03-26 05:36 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm