ಬ್ರೇಕಿಂಗ್ ನ್ಯೂಸ್
07-11-20 04:18 pm Headline Karnataka News Network ಕ್ರೈಂ
ಕಾಸರಗೋಡು, ನವೆಂಬರ್ 7: ಮಂಜೇಶ್ವರ ಶಾಸಕ ಎಂ.ಕೆ. ಕಮರುದ್ದೀನ್ ಅವರನ್ನು ಕೊನೆಗೂ ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಹಣಕಾಸು ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಂದು ಬೆಳಗ್ಗೆ ಶಾಸಕ ಕಮರುದ್ದೀನ್ ಅವರನ್ನು ವಿಚಾರಣೆಗೆ ಕರೆಸಿಕೊಂಡಿದ್ದರು. ಬೆಳಗ್ಗಿನಿಂದ ವಿಚಾರಣೆ ನಡೆಸಿದ ಪೊಲೀಸರು ಈಗ ಬಂಧಿಸಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
ಫ್ಯಾಷನ್ ಗೋಲ್ಡ್ ಹೆಸರಲ್ಲಿ ನೂರಾರು ಮಂದಿಯಿಂದ ಕೋಟ್ಯಂತರ ಹಣ ಪಡೆದು ವಂಚನೆ ನಡೆಸಿದ ಬಗ್ಗೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ನೇಮಕ ಮಾಡಲಾಗಿತ್ತು. ತನಿಖಾ ತಂಡದ ಮುಖ್ಯಸ್ಥ ಪಿ.ವಿವೇಕ್ ಕುಮಾರ್ ಕಾಸರಗೋಡು ಎಸ್ ಪಿ ಕಚೇರಿಯಲ್ಲಿ ವಿಚಾರಣೆ ನಡೆಸಿದ್ದು, ಪ್ರಕರಣದಲ್ಲಿ ಶಾಸಕರ ಶಾಮೀಲಾತಿ ಮತ್ತು ವಂಚನೆ ಎಸಗಿರುವುದು ಕಂಡುಬಂದಿದ್ದರಿಂದ ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಬಂಧಿಸಿದ್ದಾರೆ.
ಫ್ಯಾಶನ್ ಗೋಲ್ಡ್ ಹೆಸರಲ್ಲಿ ಹಣ ದ್ವಿಗುಣಗೊಳಿಸುವ ಭರವಸೆಯಿಂದ 700ಕ್ಕೂ ಹೆಚ್ಚು ಮಂದಿ ಹಣ ಹೂಡಿಕೆ ಮಾಡಿದ್ದರು. 130 ಕೋಟಿಗೂ ಹೆಚ್ಚು ಮೊತ್ತದ ಹಗರಣ ಇದಾಗಿದ್ದು, ಇತ್ತೀಚೆಗೆ ಹಣ ಸಿಗದೆ ವಂಚನೆಗೊಳಗಾದ ಮಂದಿ ಪೊಲೀಸ್ ದೂರು ದಾಖಲಿಸಿದ್ದರು. ಕಾಸರಗೋಡಿನ ವಿವಿಧ ಠಾಣೆಗಳಲ್ಲಿ ಈವರೆಗೆ 107 ಪ್ರಕರಣಗಳು ದಾಖಲಾಗಿವೆ. ಪೊಲೀಸರು ಒತ್ತಡಕ್ಕೊಳಗಾಗಿ ಶಾಸಕರನ್ನು ತನಿಖೆಗೆ ಒಳಪಡಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಪ್ರಕರಣದಲ್ಲಿ ಫ್ಯಾಶನ್ ಗೋಲ್ಡ್ ಡೈರೆಕ್ಟರ್ ಪೂಕೋಯ ತಂಗಳ್ ಕೂಡ ಆರೋಪಿಯಾಗಿದ್ದಾರೆ.
Manjeshwar MLA M C Qamaruddin arrested in connection with the fraud case of Fashion Gold International Company. Special Investigation Team led by P Vivek Kumar who was interrogating MLA Qamaruddin in SP's office has arrested the MLA.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm