ಬ್ರೇಕಿಂಗ್ ನ್ಯೂಸ್
01-09-23 05:11 pm Mangalore Correspondent ಕ್ರೈಂ
ಉಳ್ಳಾಲ, ಸೆ.1: ನರಿಂಗಾನ ಗ್ರಾಮದ ಮೊಂಟೆಪದವಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಕಿಟಕಿಯ ಸಲಾಕೆ ಮತ್ತು ಬಾಗಿಲು ಮುರಿದು ಕನ್ನ ಹಾಕಿದ ಕಳ್ಳರು 15 ಸಾವಿರ ನಗದು, ಎರಡು ಲ್ಯಾಪ್ ಟಾಪ್ ಮತ್ತು ತನಿಖೆಯ ಜಾಡು ತಪ್ಪಿಸಲು ಸಿಸಿಟಿವಿಯ ಮೂರು ಡಿವಿಆರ್ ಗಳನ್ನೇ ಕದ್ದೊಯ್ದಿದ್ದಾರೆ.
ಕಾಲೇಜು ಹಾಗೂ ಪ್ರೌಢಶಾಲೆ ಕಟ್ಟಡದ ಆವರಣದಲ್ಲಿ ಕಾಲೇಜು ಪ್ರಿನ್ಸಿಪಾಲ್, ಪ್ರೌಢಶಾಲೆ ವೈಸ್ ಪ್ರಿನ್ಸಿಪಾಲ್ ಕಚೇರಿ ಇದ್ದು ಎರಡೂ ಕೊಠಡಿಗಳಿಗೆ ಕಳ್ಳರು ನಿನ್ನೆ ರಾತ್ರಿ ಕನ್ನ ಹಾಕಿದ್ದಾರೆ. ಕಾಲೇಜಿನ ಪ್ರಿನ್ಸಿಪಾಲ್ ಕಚೇರಿಯ ಕಿಟಕಿಯ ಸಲಾಕೆ ಮುರಿಯಲು ಕಳ್ಳರು ವಿಫಲರಾಗಿದ್ದು ಬಾಗಿಲಿನ ಬೀಗ ಮುರಿದು ಒಳ ನುಗ್ಗಿದ್ದಾರೆ. ಒಳಗಿದ್ದ ಮೂರು ಕಪಾಟನ್ನು ಮುರಿದು ದಾಖಲೆ ಪತ್ರಗಳನ್ನ ತಡಕಾಡಿ ಚೆಲ್ಲಾಪಿಲ್ಲಿ ಮಾಡಿದ್ದಾರೆ. ಕಪಾಟಿನಲ್ಲಿದ್ದ 15 ಸಾವಿರ ರೂಪಾಯಿ ನಗದು ಎಗರಿಸಿದ ಚಾಣಾಕ್ಷ ಕಳ್ಳರು ಮೂರು ಸ್ಮಾರ್ಟ್ ಫೋನ್ ಗಳನ್ನ ಅಲ್ಲೇ ಬಿಟ್ಟು ಒಂದು ಡಿವಿಆರ್ ಕದ್ದೊಯ್ದಿದ್ದಾರೆ. ಕಾಲೇಜು ಸ್ಟಾಫ್ ರೂಂಗೂ ಕಳ್ಳರು ನುಗ್ಗಿದ್ದು ಅಲ್ಲಿ ಏನೂ ಸಿಕ್ಕಿಲ್ಲ.
ಹೈಸ್ಕೂಲ್ ವೈಸ್ ಪ್ರಿನ್ಸಿಪಾಲ್ ಕೊಠಡಿಯ ಕಿಟಕಿಯ ಸಲಾಕೆ ಮುರಿದು ಒಳನುಗ್ಗಿದ ಕಳ್ಳರು ಎರಡು ಲ್ಯಾಪ್ ಟ್ಯಾಪ್ ,ಚಿಲ್ಲರೆ ನಗದು ಮತ್ತು ಎರಡು ಡಿವಿಆರ್ ಗಳನ್ನ ಕದ್ದೊಯ್ದಿದ್ದಾರೆ.


ಕಬಾಟುಗಳನ್ನ ತಡಕಾಡಿ ಅಮೂಲ್ಯ ದಾಖಲೆ ಪತ್ರಗಳನ್ನೆಲ್ಲ ನೆಲಕ್ಕೆಸೆದು ಹೋಗಿದ್ದಾರೆ. ಇಂದು ಬೆಳಗ್ಗೆ ಶಾಲೆಗೆ ಬಂದ ಶಿಕ್ಷಕರು, ವಿದ್ಯಾರ್ಥಿಗಳಿಗೆ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದ್ದು ತಕ್ಷಣವೇ ಕೊಣಾಜೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು, ಶ್ವಾನದಳ, ಫೋರೆನ್ಸಿಕ್ ತಜ್ಞರು ಪರಿಶೀಲನೆ ನಡೆಸಿದ್ದು, ಚಾಲಾಕಿ ಕಳ್ಳರು ಡಿವಿಆರ್ ಹೊತ್ತೊಯ್ದಿರುವುದರಿಂದ ಸಮೀಪದ ಅಂಗಡಿಗಳಲ್ಲಿ ಸಿಸಿಟಿವಿ ಫೂಟೇಜ್ ಪರಿಶೀಲಿಸುತ್ತಿದ್ದಾರೆ.
Mangalore Robbers enter Naringana karnataka public school, flee with cash and laptop.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm