ಬ್ರೇಕಿಂಗ್ ನ್ಯೂಸ್
01-09-23 05:11 pm Mangalore Correspondent ಕ್ರೈಂ
ಉಳ್ಳಾಲ, ಸೆ.1: ನರಿಂಗಾನ ಗ್ರಾಮದ ಮೊಂಟೆಪದವಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಕಿಟಕಿಯ ಸಲಾಕೆ ಮತ್ತು ಬಾಗಿಲು ಮುರಿದು ಕನ್ನ ಹಾಕಿದ ಕಳ್ಳರು 15 ಸಾವಿರ ನಗದು, ಎರಡು ಲ್ಯಾಪ್ ಟಾಪ್ ಮತ್ತು ತನಿಖೆಯ ಜಾಡು ತಪ್ಪಿಸಲು ಸಿಸಿಟಿವಿಯ ಮೂರು ಡಿವಿಆರ್ ಗಳನ್ನೇ ಕದ್ದೊಯ್ದಿದ್ದಾರೆ.
ಕಾಲೇಜು ಹಾಗೂ ಪ್ರೌಢಶಾಲೆ ಕಟ್ಟಡದ ಆವರಣದಲ್ಲಿ ಕಾಲೇಜು ಪ್ರಿನ್ಸಿಪಾಲ್, ಪ್ರೌಢಶಾಲೆ ವೈಸ್ ಪ್ರಿನ್ಸಿಪಾಲ್ ಕಚೇರಿ ಇದ್ದು ಎರಡೂ ಕೊಠಡಿಗಳಿಗೆ ಕಳ್ಳರು ನಿನ್ನೆ ರಾತ್ರಿ ಕನ್ನ ಹಾಕಿದ್ದಾರೆ. ಕಾಲೇಜಿನ ಪ್ರಿನ್ಸಿಪಾಲ್ ಕಚೇರಿಯ ಕಿಟಕಿಯ ಸಲಾಕೆ ಮುರಿಯಲು ಕಳ್ಳರು ವಿಫಲರಾಗಿದ್ದು ಬಾಗಿಲಿನ ಬೀಗ ಮುರಿದು ಒಳ ನುಗ್ಗಿದ್ದಾರೆ. ಒಳಗಿದ್ದ ಮೂರು ಕಪಾಟನ್ನು ಮುರಿದು ದಾಖಲೆ ಪತ್ರಗಳನ್ನ ತಡಕಾಡಿ ಚೆಲ್ಲಾಪಿಲ್ಲಿ ಮಾಡಿದ್ದಾರೆ. ಕಪಾಟಿನಲ್ಲಿದ್ದ 15 ಸಾವಿರ ರೂಪಾಯಿ ನಗದು ಎಗರಿಸಿದ ಚಾಣಾಕ್ಷ ಕಳ್ಳರು ಮೂರು ಸ್ಮಾರ್ಟ್ ಫೋನ್ ಗಳನ್ನ ಅಲ್ಲೇ ಬಿಟ್ಟು ಒಂದು ಡಿವಿಆರ್ ಕದ್ದೊಯ್ದಿದ್ದಾರೆ. ಕಾಲೇಜು ಸ್ಟಾಫ್ ರೂಂಗೂ ಕಳ್ಳರು ನುಗ್ಗಿದ್ದು ಅಲ್ಲಿ ಏನೂ ಸಿಕ್ಕಿಲ್ಲ.
ಹೈಸ್ಕೂಲ್ ವೈಸ್ ಪ್ರಿನ್ಸಿಪಾಲ್ ಕೊಠಡಿಯ ಕಿಟಕಿಯ ಸಲಾಕೆ ಮುರಿದು ಒಳನುಗ್ಗಿದ ಕಳ್ಳರು ಎರಡು ಲ್ಯಾಪ್ ಟ್ಯಾಪ್ ,ಚಿಲ್ಲರೆ ನಗದು ಮತ್ತು ಎರಡು ಡಿವಿಆರ್ ಗಳನ್ನ ಕದ್ದೊಯ್ದಿದ್ದಾರೆ.


ಕಬಾಟುಗಳನ್ನ ತಡಕಾಡಿ ಅಮೂಲ್ಯ ದಾಖಲೆ ಪತ್ರಗಳನ್ನೆಲ್ಲ ನೆಲಕ್ಕೆಸೆದು ಹೋಗಿದ್ದಾರೆ. ಇಂದು ಬೆಳಗ್ಗೆ ಶಾಲೆಗೆ ಬಂದ ಶಿಕ್ಷಕರು, ವಿದ್ಯಾರ್ಥಿಗಳಿಗೆ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದ್ದು ತಕ್ಷಣವೇ ಕೊಣಾಜೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು, ಶ್ವಾನದಳ, ಫೋರೆನ್ಸಿಕ್ ತಜ್ಞರು ಪರಿಶೀಲನೆ ನಡೆಸಿದ್ದು, ಚಾಲಾಕಿ ಕಳ್ಳರು ಡಿವಿಆರ್ ಹೊತ್ತೊಯ್ದಿರುವುದರಿಂದ ಸಮೀಪದ ಅಂಗಡಿಗಳಲ್ಲಿ ಸಿಸಿಟಿವಿ ಫೂಟೇಜ್ ಪರಿಶೀಲಿಸುತ್ತಿದ್ದಾರೆ.
Mangalore Robbers enter Naringana karnataka public school, flee with cash and laptop.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 12:10 pm
HK News Staffer
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
24-03-26 11:55 am
HK News Staffer
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
ಕಾಸರಗೋಡು ಅಖಾಡ ರೆಡಿ ; ಎಲ್ ಡಿಎಫ್ ನಿಂದ ಶಾನವಾಸ್ ಪ...
23-03-26 05:36 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm