ಬ್ರೇಕಿಂಗ್ ನ್ಯೂಸ್
02-09-23 08:43 pm Mangalore Correspondent ಕ್ರೈಂ
ಮಂಗಳೂರು, ಸೆ.2: "ಡ್ರಗ್ಸ್ ಫ್ರೀ ಮಂಗಳೂರು" ಎಂಬ ಗುರಿ ಇಟ್ಟುಕೊಂಡು ಮಂಗಳೂರು ಸಿಸಿಬಿ ಪೊಲೀಸರು ಡ್ರಗ್ಸ್ ಮತ್ತು ಗಾಂಜಾ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದೀಗ ಡ್ರಗ್ಸ್ ಜಾಲದ ಪ್ರಮುಖ ಸೂತ್ರಧಾರಿ ಎನ್ನಲಾದ ನೈಜೀರಿಯಾ ದೇಶದ ಮಹಿಳೆಯೋರ್ವಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಡ್ರಗ್ ದಂಧೆಯ ಕಿಂಗ್ ಪಿನ್ ಯಾರಿದ್ದಾರೆಂದು ಪತ್ತೆ ಮಾಡಲು ಮಂಗಳೂರು ಸಿಸಿಬಿ ಪೊಲೀಸರು ಕಳೆದ ಮೂರು ತಿಂಗಳಿನಿಂದ ತನಿಖೆ ಕೈಗೊಂಡಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಬಂಧಿತರಾಗಿರುವ ಹೆಚ್ಚಿನ ಆರೋಪಿಗಳಿಗೆ ನೈಜಿರಿಯಾ ಮೂಲದವರಿಂದಲೇ ಡ್ರಗ್ಸ್ ಪೂರೈಕೆ ಆಗುತ್ತಿರುವುದು ತಿಳಿದುಬಂದಿತ್ತು. ನಿರಂತರ ಕಾರ್ಯಾಚರಣೆ ಬಳಿಕ ನೈಜೀರಿಯಾ ಮೂಲದ ಮಹಿಳೆಯೊಬ್ಬಳು ತನ್ನ ನಿಜ ವಿಚಾರ ಮುಚ್ಚಿಟ್ಟು ಬೆಂಗಳೂರಿನ ಯಲಹಂಕದಲ್ಲಿ ವಾಸ್ತವ್ಯ ಇರುವುದು ಪತ್ತೆಯಾಗಿತ್ತು.
ಪೊಲೀಸರು ಇದೀಗ ನೈಜೀರಿಯಾ ಮೂಲದ ಅಡೆವೊಲೆ ಅಡೆಟುಟು ಆನು @ ರೆಜಿನಾ ಜರಾ @ ಆಯಿಶಾ(33) ಎಂಬಾಕೆಯನ್ನು ಬಂಧಿಸಿದ್ದಾರೆ. ಈಕೆ ಮೂಲತಃ ನೈಜೀರಿಯಾ ದೇಶದ ಒಂಡೋ ರಾಜ್ಯದ ಅಕುರೆ ನಗರದ ನಿವಾಸಿಯಾಗಿದ್ದು ಪ್ರಸಕ್ತ ಯಲಹಂಕ ಹೋಬಳಿಯ ಜಕ್ಕೂರಿನ ಜಿಪಿ ನಾರ್ತ್ ಅವೆನ್ಯೂ ಅಪಾರ್ಟ್ಮೆಂಟ್ ನಲ್ಲಿ ನೆಲೆಸಿದ್ದಳು.
ಆರೋಪಿ ವಶದಿಂದ ಒಟ್ಟು 400 ಗ್ರಾಂ ತೂಕದ ರೂ. 20 ಲಕ್ಷ ಮೌಲ್ಯದ ಎಂಡಿಎಂಎ ಮಾದಕ ವಸ್ತು, ಐಫೋನ್-1, ನಗದು ರೂ. 2910 ವಶಪಡಿಸಲಾಗಿದೆ. ವಶಕ್ಕೆ ಪಡೆದ ಸೊತ್ತುಗಳ ಒಟ್ಟು ಮೌಲ್ಯ ರೂ 20,52,910 ಆಗಬಹುದೆಂದು ಪೊಲೀಸರು ತಿಳಿಸಿದ್ದಾರೆ. ಶಿಕ್ಷಣದ ಉದ್ದೇಶದಲ್ಲಿ ಭಾರತದ ವೀಸಾ ಪಡೆದು ಬೆಂಗಳೂರಿಗೆ ಬಂದಿದ್ದ ಈಕೆ, ಬಳಿಕ ಇಲ್ಲಿಯೇ ಉಳಿದುಕೊಂಡಿದ್ದಳು. ಸ್ವಲ್ಪ ಸಮಯ ನರ್ಸಿಂಗ್ ಕೆಲಸ ಮಾಡಿಕೊಂಡಿದ್ದು ಆನಂತರ ನರ್ಸಿಂಗ್ ಕೆಲಸ ಬಿಟ್ಟು ಮಾದಕ ವಸ್ತುಗಳ ಮಾರಾಟ ದಂಧೆ ನಡೆಸುತ್ತಿದ್ದಳು. ಮಂಗಳೂರು ನಗರದ ಉಳ್ಳಾಲ, ಸೆನ್ ಪೊಲೀಸ್ ಠಾಣೆ, ಮಂಗಳೂರು ಉತ್ತರ, ಕಂಕನಾಡಿ ನಗರ, ಕೊಣಾಜೆ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಈಕೆ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣಗಳಲ್ಲಿ ಬಂಧಿತ ಆರೋಪಿಗಳು ಈಕೆಯಿಂದಲೇ ಮಾದಕ ವಸ್ತು ಖರೀದಿಸಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ.ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ರಾಜೇಂದ್ರ ಬಿ, ಶರಣಪ್ಪ ಭಂಡಾರಿ, ಸುದೀಪ್ ಎಂ.ವಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.
Nigeria women main Prime drug dealer in several drug cases arrested by Mangalore police in Bangalore. the arrest was made by Mangalore CCB police
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm