ಬ್ರೇಕಿಂಗ್ ನ್ಯೂಸ್
04-09-23 11:18 am Mangalore Correspondent ಕ್ರೈಂ
ಮಂಗಳೂರು, ಸೆ.4: ಯುವಕನಿಗೆ ಚೂರಿ ಇರಿದು ಪರಾರಿಯಾಗಿದ್ದ ಪ್ರಕರಣದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿದ ಸುರತ್ಕಲ್ ಪೊಲೀಸರು ಕೆಲವೇ ಗಂಟೆಗಳಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಸುರತ್ಕಲ್ ಠಾಣೆ ವ್ಯಾಪ್ತಿಯ ಕಳವಾರಿನಲ್ಲಿ ನಿನ್ನೆ ರಾತ್ರಿ ಶಾಂತಿಗುಡ್ಡೆ ನಿವಾಸಿ ಅಬ್ದುಲ್ ಸಫ್ವಾನ್ (23) ಎಂಬಾತನಿಗೆ ಚೂರಿ ಇರಿತ ಆಗಿತ್ತು. ಪ್ರಕರಣ ಸಂಬಂಧಿಸಿ ಕಳವಾರು ನಿವಾಸಿಗಳಾದ ಪ್ರಶಾಂತ್ (28), ಧನರಾಜ್ (23) ಮತ್ತು ಯಜ್ಞೆಶ್ (22) ಎಂಬವರನ್ನು ಬಂಧಿಸಲಾಗಿದೆ.

ಆಗಸ್ಟ್ 31ರಂದು ನಡೆದ ಗಲಾಟೆ ಬಗ್ಗೆ ಮಾತುಕತೆಗೆಂದು ಇಬ್ಬರನ್ನು ಕರೆದಿದ್ದು ಅಬ್ದುಲ್ ಸಫ್ವಾನ್ ಮತ್ತು ಮೊಹಮ್ಮದ್ ಸಫ್ವಾನ್ ಬೈಕಿನಲ್ಲಿ ಬರುತ್ತಿದ್ದಾಗಲೇ ಎರಡು ಬೈಕ್ ಗಳಲ್ಲಿ ಬಂದಿದ್ದ ಐದಾರು ಮಂದಿ ತಡೆದು ಹಲ್ಲೆ ನಡೆಸಿದ್ದರು. ಅಬ್ದುಲ್ ಸಫ್ವಾನ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು ಬಳಿಕ ಸ್ಥಳದಲ್ಲಿ ಜನ ಸೇರುತ್ತಿದ್ದಾಗ ಆರೋಪಿಗಳು ಪರಾರಿಯಾಗಿದ್ದರು. ಸಫ್ವಾನ್ ಅವರ ಕೈ , ತೋಳು ಹಾಗೂ ಬೆನ್ನಿಗೆ ಚೂರಿಯಿಂದ ಇರಿದ ಗಾಯಗಳಾಗಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಯಿಂದಾಗಿ ಅಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ತೆರಳಿ ತನಿಖೆ ನಡೆಸಿದ್ದ ಸುರತ್ಕಲ್ ಠಾಣೆ ಪೊಲೀಸರು ರಾತ್ರಿಯೇ ಕಾರ್ಯಾಚರಣೆ ನಡೆಸಿದ್ದಾರೆ. ಹಲವರನ್ನು ವಶಕ್ಕೆ ಪಡೆದಿದ್ದು ಮೂವರನ್ನು ಬಂಧಿಸಿದ್ದಾಗಿ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ತಿಳಿಸಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ಪುನೀತ್, ಬಬ್ಬು ಗಣೇಶ್ ಸೇರಿದಂತೆ ಹಲವರ ವಿರುದ್ಧ ಕೊಲೆಯತ್ನ, ಜೀವ ಬೆದರಿಕೆ ಬಗ್ಗೆ ಪ್ರಕರಣ ದಾಖಲಾಗಿದೆ.
Surathkal stabbing case, three arrested in a quick action by Mangalore Police. The arrested are Prashanth, Dhanraj and Yajnesh. A swift action taken by Mangalore Police commissioner Kuldeep Kumar Jain.
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm