ಬ್ರೇಕಿಂಗ್ ನ್ಯೂಸ್
04-09-23 11:18 am Mangalore Correspondent ಕ್ರೈಂ
ಮಂಗಳೂರು, ಸೆ.4: ಯುವಕನಿಗೆ ಚೂರಿ ಇರಿದು ಪರಾರಿಯಾಗಿದ್ದ ಪ್ರಕರಣದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿದ ಸುರತ್ಕಲ್ ಪೊಲೀಸರು ಕೆಲವೇ ಗಂಟೆಗಳಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಸುರತ್ಕಲ್ ಠಾಣೆ ವ್ಯಾಪ್ತಿಯ ಕಳವಾರಿನಲ್ಲಿ ನಿನ್ನೆ ರಾತ್ರಿ ಶಾಂತಿಗುಡ್ಡೆ ನಿವಾಸಿ ಅಬ್ದುಲ್ ಸಫ್ವಾನ್ (23) ಎಂಬಾತನಿಗೆ ಚೂರಿ ಇರಿತ ಆಗಿತ್ತು. ಪ್ರಕರಣ ಸಂಬಂಧಿಸಿ ಕಳವಾರು ನಿವಾಸಿಗಳಾದ ಪ್ರಶಾಂತ್ (28), ಧನರಾಜ್ (23) ಮತ್ತು ಯಜ್ಞೆಶ್ (22) ಎಂಬವರನ್ನು ಬಂಧಿಸಲಾಗಿದೆ.

ಆಗಸ್ಟ್ 31ರಂದು ನಡೆದ ಗಲಾಟೆ ಬಗ್ಗೆ ಮಾತುಕತೆಗೆಂದು ಇಬ್ಬರನ್ನು ಕರೆದಿದ್ದು ಅಬ್ದುಲ್ ಸಫ್ವಾನ್ ಮತ್ತು ಮೊಹಮ್ಮದ್ ಸಫ್ವಾನ್ ಬೈಕಿನಲ್ಲಿ ಬರುತ್ತಿದ್ದಾಗಲೇ ಎರಡು ಬೈಕ್ ಗಳಲ್ಲಿ ಬಂದಿದ್ದ ಐದಾರು ಮಂದಿ ತಡೆದು ಹಲ್ಲೆ ನಡೆಸಿದ್ದರು. ಅಬ್ದುಲ್ ಸಫ್ವಾನ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು ಬಳಿಕ ಸ್ಥಳದಲ್ಲಿ ಜನ ಸೇರುತ್ತಿದ್ದಾಗ ಆರೋಪಿಗಳು ಪರಾರಿಯಾಗಿದ್ದರು. ಸಫ್ವಾನ್ ಅವರ ಕೈ , ತೋಳು ಹಾಗೂ ಬೆನ್ನಿಗೆ ಚೂರಿಯಿಂದ ಇರಿದ ಗಾಯಗಳಾಗಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಯಿಂದಾಗಿ ಅಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ತೆರಳಿ ತನಿಖೆ ನಡೆಸಿದ್ದ ಸುರತ್ಕಲ್ ಠಾಣೆ ಪೊಲೀಸರು ರಾತ್ರಿಯೇ ಕಾರ್ಯಾಚರಣೆ ನಡೆಸಿದ್ದಾರೆ. ಹಲವರನ್ನು ವಶಕ್ಕೆ ಪಡೆದಿದ್ದು ಮೂವರನ್ನು ಬಂಧಿಸಿದ್ದಾಗಿ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ತಿಳಿಸಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ಪುನೀತ್, ಬಬ್ಬು ಗಣೇಶ್ ಸೇರಿದಂತೆ ಹಲವರ ವಿರುದ್ಧ ಕೊಲೆಯತ್ನ, ಜೀವ ಬೆದರಿಕೆ ಬಗ್ಗೆ ಪ್ರಕರಣ ದಾಖಲಾಗಿದೆ.
Surathkal stabbing case, three arrested in a quick action by Mangalore Police. The arrested are Prashanth, Dhanraj and Yajnesh. A swift action taken by Mangalore Police commissioner Kuldeep Kumar Jain.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm