ಬ್ರೇಕಿಂಗ್ ನ್ಯೂಸ್
09-11-20 10:46 am Udupi Correspondent ಕ್ರೈಂ
ಉಡುಪಿ, ನವೆಂಬರ್ 09 : ಯುವತಿಯನ್ನ 13 ವರ್ಷ ಪ್ರೀತಿ ನೆಪದಲ್ಲಿ ಸಂಬಂಧ ಬೆಳೆಸಿಕೊಂಡಿದ್ದ ಯುವಕನೊಬ್ಬ ಮದುವೆಯ ದಿನವೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.
ಮಣಿಪಾಲ ಮೂಲದ ಮಮತಾ ಮತ್ತು ಪರ್ಕಳದ ಗಣೇಶ್ ಅವರ ಸುದೀರ್ಘ ಕಾಲದ ಪ್ರೇಮ ಕಥೆಯಿದು. ಹ್ಯಾಂಗ್ಯೋ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರ ನಡುವೆ 13 ವರ್ಷದ ಹಿಂದೆ ಪ್ರೇಮಾಂಕುರವಾಗಿತ್ತು ಈ ಅವಧಿಯಲ್ಲಿ ಇಬ್ಬರ ನಡುವೆ ದೈಹಿಕ ಸಂಪರ್ಕ ಬೆಳೆದಿದ್ದು ಮದುವೆಯಾಗುವುದಾಗಿ ನಂಬಿಸಿ ಯುವಕ 13 ವರ್ಷ ದಿನ ದೂಡಿದ್ದಾನೆ. ಈ ಮಧ್ಯೆ, ಎರಡು ಬಾರಿ ಅಬಾರ್ಷನ್ ಕೂಡ ಮಾಡಿಸಿದ್ದಾನೆ.
ಆದರೆ, ಇತ್ತೀಚೆಗೆ ಬೇರೆ ಹುಡುಗಿಯ ಜೊತೆ ಮದುವೆಯಾಗಲು ಮುಂದಾಗಿದ್ದ ಗಣೇಶ್, ನವೆಂಬರ್ ನಾಲ್ಕಕ್ಕೆ ಮದುವೆ ಮಹೂರ್ತ ಫಿಕ್ಸ್ ಮಾಡಿದ್ದಾನೆ. ಈ ವಿಚಾರ ಪ್ರೀತಿಸಿದ ಮಮತಾಳಿಗೆ ಗೊತ್ತಾಗಿ, ಮಣಿಪಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸುತ್ತಿದ್ದಂತೆ ಗಣೇಶ್, ಪ್ಲೇಟ್ ಚೇಂಜ್ ಮಾಡಿದ್ದು ನವೆಂಬರ್ ಆರಕ್ಕೆ ಪ್ರೀತಿಸಿದ ಮಮತಾಳನ್ನೇ ಮದುವೆಯಾಗುವುದಾಗಿ ಗಣೇಶ್ ಒಪ್ಪಿಕೊಂಡಿದ್ದ.

ಹೀಗಾಗಿ, ಮದುವೆಯ ಸಂಭ್ರಮದಲ್ಲಿ ಯುವತಿ ಮಮತಾ ಕಡೆಯವರು ಎಲ್ಲ ಶಾಸ್ತ್ರಗಳನ್ನು ಮುಗಿಸಿದ್ದರು. ಯುವತಿ, ಮದರಂಗಿ ಮುಗಿಸಿಕೊಂಡು ದಿಬ್ಬಣ ಶಾಸ್ತ್ರದಲ್ಲಿ ಮದುವೆ ಮಂಟಪಕ್ಕೂ ಬಂದಿದ್ದಾಳೆ. ಆದರೆ ಯುವಕ ಗಣೇಶ್ ಆಗಲೀ, ಆತನ ಕಡೆಯವರಾಗಲೀ ಬರಲಿಲ್ಲ. ಯುವಕ ಮತ್ತೆ ಕೈಕೊಟ್ಟಿದ್ದು ಗೊತ್ತಾಗಿ ಯುವತಿಗೆ ಆಕಾಶವೇ ಕುಸಿದು ಬಿದ್ದಂತಾಗಿದೆ. ಬಳಿಕ ಯುವತಿ ಆಕ್ರೋಶಗೊಂಡು ಯುವಕನ ಮನೆ, ಸಂಬಂಧಿಕರ ಮನೆಯನ್ನೆಲ್ಲ ಜಾಲಾಡಿದ್ದಾಳೆ. ಯುವಕ ಒಂದು ದಿನ ಕಳೆದರೂ ಸಿಗದಿದ್ದಾಗ ಆತನ ಮನೆಯ ಮುಂದೆ ಪ್ರತಿಭಟನೆ ಕುಳಿತಿದ್ದಾಳೆ. ಜೀವನದ ನ್ಯಾಯಕ್ಕಾಗಿ ಹೋರಾಟ ಆರಂಭಿಸಿದ್ದಾಳೆ. 13 ವರ್ಷದ ಪ್ರೀತಿಯ ನಾಟಕಕ್ಕೆ ತಿಲಾಂಜಲಿ ಇತ್ತ ಯುವಕ ಗಣೇಶ್ ವಿರುದ್ಧ ಸಾರ್ವಜನಿಕರಲ್ಲಿ ಆಕ್ರೋಶ ವ್ಯಕ್ತವಾಗಿದೆ.
A Udupi couple were involved in a love affair for 13 years. But the groom has escaped on the day of the wedding after making the girl pregnant. Now the girl's family is searching for the missing groom.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am