ಬ್ರೇಕಿಂಗ್ ನ್ಯೂಸ್
09-11-20 04:11 pm Udupi Correspondent ಕ್ರೈಂ
ಉಡುಪಿ, ನವೆಂಬರ್ 09 : ಬೆಂಗಳೂರು ಮೂಲದ ಪ್ರವಾಸಿಗರು ಮಲ್ಪೆ ಕಡಲತೀರದಲ್ಲಿ ನೀರಾಟದಲ್ಲಿ ತೊಡಗಿದ್ದಾಗ, ಆ ಪೈಕಿ ಮೂವರು ಅಲೆಗಳ ನಡುವೆ ಕೊಚ್ಚಿ ಹೋಗಿದ್ದು ಅವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಂದು ಬೆಳಗ್ಗೆ ಘಟನೆ ನಡೆದಿದೆ.
ಬೆಂಗಳೂರಿನ 10 ಜನ ಪ್ರವಾಸಿಗರು ಕಡಲತೀರಕ್ಕೆ ಆಗಮಿಸಿದ್ದರು. ಈ ಪೈಕಿ ಐದಾರು ಜನ ನೀರಿಗಿಳಿದು ಮೋಜು ಮಸ್ತಿಯಲ್ಲಿ ತೊಡಗಿದ್ದರು. ಮೊದಲು ಯುವತಿಯೊಬ್ಬಳು ನೀರಿನಲ್ಲಿ ಮುಳುಗಿದ್ದಾಳೆ. ಆಕೆಯ ರಕ್ಷಣೆಗಾಗಿ ಜೊತೆಗಿದ್ದ ಇನ್ನಿಬ್ಬರು ನೀರಿಗೆ ಹಾರಿದ್ದು ಈ ವೇಳೆ ಮೂವರು ಕೂಡ ಅಪಾಯಕ್ಕೆ ಸಿಲುಕಿದ್ದಾರೆ. ದಡದಲ್ಲಿ ಇದ್ದವರು ರಕ್ಷಣೆಗಾಗಿ ಮೊರೆ ಇಟ್ಟಿದ್ದಾರೆ. ಇದನ್ನು ಕೇಳಿ ಸ್ವಲ್ಪ ದೂರದಲ್ಲಿ ಜೆಟ್ ಸ್ಕೀ ನಿರ್ವಹಿಸುತ್ತಿದ್ದವರು ಸ್ಥಳಕ್ಕೆ ಧಾವಿಸಿದ್ದಾರೆ.


ಜೆಟ್ ಸ್ಕೀ ಬೋಟ್ ಮೂಲಕ ಮೊದಲು ರಕ್ಷಣೆ ಮಾಡಿ, ತಕ್ಷಣ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಮಲ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪ್ರತಿದಿನ 11 ಗಂಟೆಯಿಂದ ಮಧ್ಯಾಹ್ನ ಒಂದು ಗಂಟೆಯವರೆಗೆ ಕಡಲು ಪ್ರಕ್ಷುಬ್ಧ ಇರುತ್ತದೆ. ಈ ಸಂದರ್ಭ ಪ್ರವಾಸಿಗರು ಕಡಲಿಗೆ ಇಳಿಯಬಾರದು ಎಂದು ಸೂಚನಾ ಫಲಕ ಹಾಕಲಾಗಿದೆ. ಆದರೆ, ಸೂಚನೆಯನ್ನು ಉಲ್ಲಂಘಿಸಿ ಪ್ರವಾಸಿಗರು ನೀರಿಗಿಳಿದು ಅಪಾಯಕ್ಕೀಡಾಗುತ್ತಾರೆ.
ಸ್ವಿಮ್ಮಿಂಗ್ ಪೂಲ್, ನದಿಯಲ್ಲಿ ಈಜಲು ಕಲಿತವರು ಸಮುದ್ರಕ್ಕೆ ತಿಳಿದು ಈಜುತ್ತೇವೆ ಎಂದು ಅಂದುಕೊಂಡಿದ್ದರೆ ಅದು ಮೂರ್ಖತನ ಎಂದು ಸ್ಥಳೀಯ ಮೀನುಗಾರ ವಿಠಲ ಕಾಂಚನ್ ಹೇಳುತ್ತಾರೆ.
Three youngsters from Bangalore who were drowned in malpe beach were rescued by localities in malpe Beach, Udupi.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am