ಬ್ರೇಕಿಂಗ್ ನ್ಯೂಸ್
09-11-20 04:11 pm Udupi Correspondent ಕ್ರೈಂ
ಉಡುಪಿ, ನವೆಂಬರ್ 09 : ಬೆಂಗಳೂರು ಮೂಲದ ಪ್ರವಾಸಿಗರು ಮಲ್ಪೆ ಕಡಲತೀರದಲ್ಲಿ ನೀರಾಟದಲ್ಲಿ ತೊಡಗಿದ್ದಾಗ, ಆ ಪೈಕಿ ಮೂವರು ಅಲೆಗಳ ನಡುವೆ ಕೊಚ್ಚಿ ಹೋಗಿದ್ದು ಅವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಂದು ಬೆಳಗ್ಗೆ ಘಟನೆ ನಡೆದಿದೆ.
ಬೆಂಗಳೂರಿನ 10 ಜನ ಪ್ರವಾಸಿಗರು ಕಡಲತೀರಕ್ಕೆ ಆಗಮಿಸಿದ್ದರು. ಈ ಪೈಕಿ ಐದಾರು ಜನ ನೀರಿಗಿಳಿದು ಮೋಜು ಮಸ್ತಿಯಲ್ಲಿ ತೊಡಗಿದ್ದರು. ಮೊದಲು ಯುವತಿಯೊಬ್ಬಳು ನೀರಿನಲ್ಲಿ ಮುಳುಗಿದ್ದಾಳೆ. ಆಕೆಯ ರಕ್ಷಣೆಗಾಗಿ ಜೊತೆಗಿದ್ದ ಇನ್ನಿಬ್ಬರು ನೀರಿಗೆ ಹಾರಿದ್ದು ಈ ವೇಳೆ ಮೂವರು ಕೂಡ ಅಪಾಯಕ್ಕೆ ಸಿಲುಕಿದ್ದಾರೆ. ದಡದಲ್ಲಿ ಇದ್ದವರು ರಕ್ಷಣೆಗಾಗಿ ಮೊರೆ ಇಟ್ಟಿದ್ದಾರೆ. ಇದನ್ನು ಕೇಳಿ ಸ್ವಲ್ಪ ದೂರದಲ್ಲಿ ಜೆಟ್ ಸ್ಕೀ ನಿರ್ವಹಿಸುತ್ತಿದ್ದವರು ಸ್ಥಳಕ್ಕೆ ಧಾವಿಸಿದ್ದಾರೆ.


ಜೆಟ್ ಸ್ಕೀ ಬೋಟ್ ಮೂಲಕ ಮೊದಲು ರಕ್ಷಣೆ ಮಾಡಿ, ತಕ್ಷಣ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಮಲ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪ್ರತಿದಿನ 11 ಗಂಟೆಯಿಂದ ಮಧ್ಯಾಹ್ನ ಒಂದು ಗಂಟೆಯವರೆಗೆ ಕಡಲು ಪ್ರಕ್ಷುಬ್ಧ ಇರುತ್ತದೆ. ಈ ಸಂದರ್ಭ ಪ್ರವಾಸಿಗರು ಕಡಲಿಗೆ ಇಳಿಯಬಾರದು ಎಂದು ಸೂಚನಾ ಫಲಕ ಹಾಕಲಾಗಿದೆ. ಆದರೆ, ಸೂಚನೆಯನ್ನು ಉಲ್ಲಂಘಿಸಿ ಪ್ರವಾಸಿಗರು ನೀರಿಗಿಳಿದು ಅಪಾಯಕ್ಕೀಡಾಗುತ್ತಾರೆ.
ಸ್ವಿಮ್ಮಿಂಗ್ ಪೂಲ್, ನದಿಯಲ್ಲಿ ಈಜಲು ಕಲಿತವರು ಸಮುದ್ರಕ್ಕೆ ತಿಳಿದು ಈಜುತ್ತೇವೆ ಎಂದು ಅಂದುಕೊಂಡಿದ್ದರೆ ಅದು ಮೂರ್ಖತನ ಎಂದು ಸ್ಥಳೀಯ ಮೀನುಗಾರ ವಿಠಲ ಕಾಂಚನ್ ಹೇಳುತ್ತಾರೆ.
Three youngsters from Bangalore who were drowned in malpe beach were rescued by localities in malpe Beach, Udupi.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm