ಬ್ರೇಕಿಂಗ್ ನ್ಯೂಸ್
09-11-20 09:25 pm Mangaluru Correspondent ಕ್ರೈಂ
ಮಂಗಳೂರು, ನವೆಂಬರ್ 9: ಕಾವೂರಿನ ಮಲ್ಲಿ ಲೇಔಟ್ ನಲ್ಲಿ ನ.3ರಂದು ಹಾಡಹಗಲೇ ನಡೆದಿದ್ದ ಕೇರಳ ಮೂಲದ ವ್ಯಕ್ತಿಯ ಬರ್ಬರ ಕೊಲೆ ಪ್ರಕರಣವನ್ನು ಕಾವೂರು ಪೊಲೀಸರು ಭೇದಿಸಿದ್ದಾರೆ.
ಪ್ರಕರಣ ಸಂಬಂಧಿಸಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕೋಡಿಕಲ್ ನಿವಾಸಿ ಸಂತೋಷ್ (43) ಮತ್ತು ಗದಗ ಮೂಲದ ಬೈಕಂಪಾಡಿಯ ಅಂಗಾರಗುಂಡಿ ನಿವಾಸಿ ಸಿದ್ದಪ್ಪ (36) ಬಂಧಿತರು.
ಆರೋಪಿ ಸಂತೋಷ್, ಈ ಹಿಂದೆ ಮೃತ ಸುರೇಂದ್ರನ್ ಮನೆಯಲ್ಲಿ ಅಲ್ಯುಮಿನಿಯಮ್ ಫ್ಯಾಬ್ರಿಕೇಶನ್ ಕೆಲಸ ಮಾಡಿದ್ದು ಅದರಲ್ಲಿ ಹಣ ಪಡೆಯಲು ಬಾಕಿ ಇತ್ತು. ಹಣ ನೀಡದ ದ್ವೇಷ ಇದ್ದುದರಿಂದ ಸಂತೋಷ್, ಸಿದ್ದಪ್ಪನ ಜೊತೆ ಸೇರಿ ನ.3ರಂದು ಕೆಲಸ ಕೇಳುವ ನೆಪದಲ್ಲಿ ಸುರೇಂದ್ರನ್ ಮನೆಗೆ ಬಂದಿದ್ದ. ಸುರೇಂದ್ರನ್ ಮನೆಯಲ್ಲಿ ಹಣ, ಚಿನ್ನ ಸಿಗಬಹುದೆಂದು ಒಬ್ಬಂಟಿಯಾಗಿದ್ದ ಅವರನ್ನು ಬ್ಲೇಡ್ ಕಟರ್ ಮೂಲಕ ಕುತ್ತಿಗೆ ಕೊಯ್ದು ಕೊಲೆ ಮಾಡಿದ್ದರು. ಆಬಳಿಕ ಮನೆಯಲ್ಲಿ ಸಿಕ್ಕಿದ್ದ ಸ್ವಲ್ಪ ಹಣದೊಂದಿಗೆ ಮನೆಯಿಂದ ಪರಾರಿಯಾಗಿದ್ದರು.
ಕೊಲೆ ಘಟನೆ ಸಂಜೆ ಹೊತ್ತಿಗೆ ಸುರೇಂದ್ರನ್ ಪತ್ನಿ ಮನೆಗೆ ಆಗಮಿಸಿದಾಗ, ಬಯಲಾಗಿತ್ತು. ಮನೆಯ ಒಳಗೆ ರಕ್ತದ ಮಡುವಲ್ಲಿ ಸುರೇಂದ್ರನ್ ಕೊಲೆಯಾಗಿ ಬಿದ್ದಿದ್ದರು. ಪ್ರಕರಣದ ತನಿಖೆಗಾಗಿ ಕಾವೂರು ಠಾಣೆ ಪೊಲೀಸರ ಜೊತೆ ಸಿಸಿಬಿ ಘಟಕ ಮತ್ತು ತಾಂತ್ರಿಕ ತಜ್ಞರ ಜೊತೆ ಮೂರು ತಂಡಗಳಲ್ಲಾಗಿ ಕಾರ್ಯಾಚರಣೆ ನಡೆಸಿದ್ದರು. ಪೊಲೀಸರು ಸಾಂದರ್ಭಿಕ ಸಾಕ್ಷ್ಯಗಳನ್ನು ಕಲೆಹಾಕಿ ಶಂಕೆ ಮೇಲೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಪ್ರಕರಣ ಬೆಳಕಿಗೆ ಬಂದಿದೆ.
ಸುರೇಂದ್ರನ್ ಸಾಕಷ್ಟು ಸ್ಥಿತಿವಂತರಾಗಿದ್ದು ಕೇರಳ ಮತ್ತು ಮಂಗಳೂರಿನಲ್ಲಿ ವಹಿವಾಟು ಹೊಂದಿದ್ದರು. ಪ್ರಕರಣದಲ್ಲಿ ಬೇರೇನಾದ್ರೂ ಕೈವಾಡ ಇದೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸಬೇಕಿದೆ.
ಇದನ್ನೂ ಓದಿ: ಕಾವೂರು ; ಕೇರಳ ಮೂಲದ ಉದ್ಯಮಿಯ ಮನೆಯಲ್ಲೇ ಇರಿದು ಕೊಲೆ !!
In connection to the murder of Kerala Businessman in Kavoor, the police have succeeded in arresting two persons. A Kerala native operating his business in the city here was hacked to death in broad daylight. The incident happened in Kavoor on Tuesday, November 3.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm