ಬ್ರೇಕಿಂಗ್ ನ್ಯೂಸ್
27-09-23 11:26 am Mangalore Correspondent ಕ್ರೈಂ
ಮಂಗಳೂರು, ಸೆ.27: ಗಂಡ-ಹೆಂಡತಿಯ ಗಲಾಟೆಯಲ್ಲಿ ಕೂಸು ಬಡವಾಯ್ತು ಎನ್ನುವಂತೆ ಪಾನಮತ್ತ ತಂದೆಯೊಬ್ಬ ಪೊಲೀಸ್ ಠಾಣೆಯಲ್ಲಿ ಪೊಲೀಸರೆದುರೇ ಇಬ್ಬರು ಮಕ್ಕಳನ್ನು ಗೋಡೆಗೆ ತಳ್ಳಿ ಕೊಲೆಗೆ ಯತ್ನಿಸಿದ ಘಟನೆ ಕದ್ರಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಕದ್ರಿ ವ್ಯಾಸನಗರ ನಿವಾಸಿ ಮಹೇಶ್ ಕೃತ್ಯವೆಸಗಿದ ಆರೋಪಿ. ವಿಪರೀತ ಮದ್ಯಸೇವನೆ ಚಟ ಹೊಂದಿದ್ದ ಆರೋಪಿ, ಪ್ರತಿನಿತ್ಯ ಪತ್ನಿ ಮತ್ತು ಮಕ್ಕಳಿಗೆ ಕಿರುಕುಳ ನೀಡುತ್ತಿದ್ದ. ಸೆಪ್ಟೆಂಬರ್ 24ರಂದು ರಾತ್ರಿ ಕ್ಷುಲ್ಲಕ ಕಾರಣಕ್ಕೆ ಪತ್ನಿ ಜೊತೆ ಜಗಳ ಮಾಡಿ ಪತ್ನಿ ಮತ್ತು ಮಕ್ಕಳನ್ನು ಬೆಂಕಿ ಹಚ್ಚಿ ಕೊಲ್ಲುತ್ತೇನೆ ಎಂದು ಬೆದರಿಸಿ, ಹಲ್ಲೆ ನಡೆಸಲು ಮುಂದಾಗಿದ್ದ. ಈ ಸಂದರ್ಭ ಆತನ ಪತ್ನಿ ತಪ್ಪಿಸಿಕೊಂಡು ಕದ್ರಿ ಠಾಣೆಗೆ ಬಂದಿದ್ದು, ಆದಷ್ಟು ಬೇಗ ನಮ್ಮ ಮನೆಗೆ ಬಂದು ಗಂಡನಿಂದ ಮಕ್ಕಳನ್ನು ರಕ್ಷಿಸಿ ಎಂದಿದ್ದಾರೆ.
ಈ ವೇಳೆ ಆರೋಪಿ ಮಹೇಶ ತನ್ನ 6 ವರ್ಷದ ಗಂಡು ಮಗು ಮತ್ತು ಒಂದೂವರೆ ವರ್ಷದ ಹೆಣ್ಣು ಮಗುವನ್ನು ಕರೆದುಕೊಂಡು ಠಾಣೆಗೆ ಬಂದಿದ್ದಾನೆ. ಪೊಲೀಸರು ಆತನನ್ನು ವಿಚಾರಿಸಿದಾಗ ಪತ್ನಿಯೇ ತನಗೆ ಹೊಡೆದಿರುವುದಾಗಿ ಹೇಳಿದ್ದಾನೆ. ದೂರು ನೀಡಲು ಹೇಳಿದಾಗ ಆತ ಕಿರುಚಾಡಿ, ನಿಮ್ಮನ್ನು ಯಾರನ್ನೂ ಬಿಡುವುದಿಲ್ಲ ಎಂದು ತನ್ನ ಇಬ್ಬರು ಮಕ್ಕಳನ್ನು ಎಳೆದುಕೊಂಡು ಠಾಣೆಯಿಂದ ಹೊರಗೆ ಬಂದಿದ್ದ.
ಠಾಣೆಯೊಳಗಿದ್ದ ಆತನ ಪತ್ನಿ ಹೊರಗೆ ಬಂದಾಗ ಮಹೇಶ ಮತ್ತಷ್ಟು ಜೋರಾಗಿ ಕಿರುಚಿದ್ದಾನೆ. ಹತ್ತಿರ ಬಂದಲ್ಲಿ ತನ್ನ ಕೈಯಲ್ಲಿದ್ದ ಮಗಳನ್ನು ಗೋಡೆಗೆ ಚಚ್ಚಿ ಕೊಲ್ಲುತ್ತೇನೆಂದು ಬೆದರಿಸಿದ್ದಾನೆ. ಪೊಲೀಸರು ಮಗುವನ್ನು ಬಿಟ್ಟು ಬಿಡುವಂತೆ ಹೇಳಿದಾಗ, ಮಗುವಿನ ಕುತ್ತಿಗೆಯನ್ನು ಹಿಡಿದು ಎಳೆದಾಡಿ ಮಗುವನ್ನು ಎತ್ತಿ ನೆಲಕ್ಕೆ ಎಸೆಯಲು ಪ್ರಯತ್ನಿಸಿದ್ದಾನೆ.
ಮಗುವಿನ ಕುತ್ತಿಗೆ ಹಾಗೂ ತಲೆಗೆ ಗುದ್ದಿದ ಗಾಯವಾಗಿ ಮಗು ಜೋರಾಗಿ ಕೂಗಲಾರಂಭಿಸಿದೆ. ಈ ವೇಳೆ, ರಾತ್ರಿ ಕರ್ತವ್ಯದಲ್ಲಿದ್ದ ಪಿಎಸ್ಐ ಪ್ರತಿಭಾ ಕೂಡಲೇ ಮಗುವನ್ನು ಎತ್ತಿಕೊಂಡಿದ್ದು ಆರೋಪಿಯನ್ನು ಹಿಡಿದು ಕೂಡಿ ಹಾಕುವಂತೆ ಸಿಬಂದಿಗೆ ಸೂಚಿಸಿದ್ದಾರೆ. ಅಲ್ಲದೆ, ಮಗುವಿನ ತಾಯಿ ಹಾಗೂ ಬಾಲಕನನ್ನು ಕರೆದುಕೊಂಡು ಇಲಾಖಾ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಹೆಡ್ ಕಾನ್ಸ್ಟೇಬಲ್ ಶರತ್ ಕುಮಾರ್ ಅವರು ಆರೋಪಿ ಮಹೇಶ್ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದಾನೆ ಎಂದು ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
Father attempts to kill daughter inside kadri police station in Mangalore.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm