ಬ್ರೇಕಿಂಗ್ ನ್ಯೂಸ್
29-09-23 07:00 pm Mangalore Correspondent ಕ್ರೈಂ
ಪುತ್ತೂರು, ಸೆ.29: ವಿವಾಹಿತ ಮಹಿಳೆಯ ಜೊತೆ ಸಲುಗೆ ಬೆಳೆಸಿಕೊಂಡಿದ್ದಲ್ಲದೆ, ಆಕೆಯ ಜೊತೆಗೆ ಫೋಟೊ ತೆಗೆದು ಬ್ಲಾಕ್ಮೇಲ್ ನಡೆಸಿರುವ ಘಟನೆ ನಡೆದಿದ್ದು, ಪ್ರಕರಣದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಮಾಜಿ ಸದಸ್ಯರೊಬ್ಬರನ್ನು ಕಾರವಾರ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಆರ್ಲಪದವು ನಿವಾಸಿ ಪ್ರಶಾಂತ ಭಟ್ ಮಾಣಿಲ(35) ಬಂಧಿತ ಆರೋಪಿ. ಸುಬ್ರಹ್ಮಣ್ಯದಲ್ಲಿ ಸಾಮಾಜಿಕ ಹಾಗೂ ರಾಜಕೀಯವಾಗಿ ತೊಡಗಿಸಿಕೊಂಡಿದ್ದ ಪ್ರಶಾಂತ ಭಟ್ ವಿರುದ್ಧ ಕಾರವಾರ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮೂಲದ ವಿವಾಹಿತ ಮಹಿಳೆಯೊಬ್ಬರಿಗೆ ಜಾಲತಾಣದಲ್ಲಿ ಪರಿಚಯ ಆಗಿದ್ದ ಪ್ರಶಾಂತ ಭಟ್, ಬಳಿಕ ಆರ್ಕೆಸ್ಟ್ರಾದಲ್ಲಿ ಹಾಡಲು ಅವಕಾಶ ಕೊಡಿಸುವುದಾಗಿ ಹೇಳಿ ನಂಬಿಸಿ ಸಲುಗೆ ಬೆಳೆಸಿಕೊಂಡಿದ್ದ.

ಕಳೆದ ಜನವರಿ ತಿಂಗಳಲ್ಲಿ ಶಿರಸಿಗೆ ತೆರಳಿದ್ದ ಪ್ರಶಾಂತ, ಅಲ್ಲಿ ಯುವತಿಯನ್ನು ಲಾಡ್ಜ್ ಗೆ ಕರೆಸಿಕೊಂಡಿದ್ದ. ಅಲ್ಲದೆ, ಸುತ್ತಾಟವನ್ನೂ ಮಾಡಿದ್ದರು. ಈ ವೇಳೆ, ಯುವತಿ ಜೊತೆಗೆ ಫೋಟೊ ತೆಗೆಸಿಕೊಂಡಿದ್ದು ಆನಂತರ ಅದನ್ನು ಮುಂದಿಟ್ಟು ಬ್ಲಾಕ್ಮೇಲ್ ಮಾಡಿದ್ದಾನೆ. ಲಾಡ್ಜ್ ನಲ್ಲಿ ತೆಗೆದಿರುವ ಫೋಟೊವನ್ನು ಗಂಡನಿಗೆ ತೋರಿಸುತ್ತೇನೆ, ತಾಯಿಗೆ ಕಳಿಸುತ್ತೇನೆಂದು ಹೇಳಿ ಹಣಕ್ಕಾಗಿ ಬ್ಲಾಕ್ಮೇಲ್ ಆರಂಭಿಸಿದ್ದ. ಮೊಬೈಲಿನಲ್ಲಿ ನಗ್ನವಾಗಿ ದೇಹ ತೋರಿಸುವಂತೆ ಒತ್ತಡ ಹಾಕುತ್ತಿದ್ದ. ಈ ನಡುವೆ, ಪ್ರಶಾಂತ ಭಟ್ ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗುತ್ತಿದ್ದು ಹಣ ನೀಡದೇ ಇದ್ದಾಗ ಫೋಟೊಗಳನ್ನು ಯುವತಿಯ ತಾಯಿಗೆ ಕಳಿಸಿದ್ದ.
ಇದರಿಂದ ಬೇಸತ್ತ ಯುವತಿ ಕಾರವಾರ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಪೊಲೀಸರು ಆರೋಪಿ ಪ್ರಶಾಂತ ಭಟ್ ನನ್ನು ಬಂಧಿಸಿ ಕರೆದೊಯ್ದಿದ್ದಾರೆ. ಪ್ರಶಾಂತ್ ಭಟ್ ಈ ಹಿಂದೆ ಸುಬ್ರಹ್ಮಣ್ಯದಲ್ಲಿ ಮಠದ ವಿರುದ್ಧ ಹೋರಾಟ ನಡೆಸಿದ್ದವರಲ್ಲಿ ಪ್ರಮುಖನಾಗಿದ್ದ.
Mangalore Case filed against former Subramanya gram panchyath member Prashanth Bhat for blackmailing married woman. The accused is identified as Prashant Bhat Manila. The complainant woman was interested in music and used to sing in Clubhouse, an app. She got acquainted with the accused through the app.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm