ಬ್ರೇಕಿಂಗ್ ನ್ಯೂಸ್
06-08-20 08:51 am Headline Karnataka News Network ಕ್ರೈಂ
ಮುಂಬೈ: ಬಾಲಿವುಡ್ ಕಿರುತೆರೆಯ ಪ್ರತಿಭಾನ್ವಿತ ನಟ ಸಮೀರ್ ಶರ್ಮಾ (44) ತಮ್ಮ ಮನೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಸಮೀರ್ ಶರ್ಮಾ ಮುಂಬೈನ ಪಶ್ಚಿಮ ಮಲಾಡ್ನ ರಸ್ತೆಯಲ್ಲಿರುವ ನೇಹಾ ಸಿಹೆಚ್ಎಸ್ ಬಿಲ್ಡಿಂಗ್ನ ಫ್ಲ್ಯಾಟ್ ನಲ್ಲಿ ವಾಸವಾಗಿದ್ದರು. ಆದರೆ ಬುಧವಾರ ರಾತ್ರಿ ಫ್ಲ್ಯಾಟ್ನ ಅಡುಗೆ ಮನೆಯಲ್ಲಿ ನೇಣು ಬಿಗಿದ ಸೀತಿಯಲ್ಲಿ ಪತ್ತೆಯಾಗಿದ್ದಾರೆ.
ಸಮೀರ್ ಮನೆಯಿಂದ ದುರ್ವಾಸನೆ ಬಂದ ಹಿನ್ನೆಲೆ ನಿವಾಸಿಗಳು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಬಾಗಿಲು ಒಡೆದು ನೋಡಿದಾಗ ಸಮೀರ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸಾವನ್ನಪ್ಪಿದ ಎರಡು ದಿನ ಮೇಲಾಗಿದ್ದರಿಂದ ಶವ ಕೊಳೆಯಲಾರಂಭಿಸಿತ್ತು.
ಕಳೆದ ಫೆಬ್ರವರಿಯಲ್ಲಿ ಅವರು ಈ ಅಪಾರ್ಟ್ಮೆಂಟ್ಅನ್ನು ಬಾಡಿಗೆಗೆ ಪಡೆದಿದ್ದರು. ಸಮೀರ್ ದೇಹದ ಸ್ಥಿತಿಯನ್ನು ನೋಡಿದರೆ ಅವರು ಎರಡು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದು, ಸಮೀರ್ ಮನೆಯಲ್ಲಿ ಯಾವುದೇ ಡೆತ್ ನೋಟ್ ಲಭ್ಯವಾಗಿಲ್ಲ. ನೆರೆಹೊರೆಯವರ ಪ್ರಕಾರ ಸಮೀರ್ ಕಳೆದ ಕೆಲ ದಿನಗಳಿಂದ ಒಂಟಿಯಾಗಿರುತ್ತಿದ್ದರು. ಹೊರಗಡೆ ಹೆಚ್ಚು ಕಾಣಿಸಿಕೊಳ್ಳುತ್ತಿರಲಿಲ್ಲ ಎಂದು ಹೇಳಿದ್ದಾರೆ.
ಸದ್ಯಕ್ಕೆ ಪೊಲೀಸರು ಈ ಕುರಿತು ಪ್ರಕರಣ ದಾಖಲಿಕೊಂಡು ತನಿಖೆ ಮುಂದುವರಿಸಿದ್ದಾರೆ. ಸಮೀರ್ ಸೂಪರ್ ಹಿಟ್ ಧಾರಾವಾಹಿಗಳಾದ ‘ದಿಲ್ ಕ್ಯಾ ಚಾಹ್ತಾ’, ‘ಕಹಾನಿ ಘರ್ ಘರ್ ಕೀ’, ‘ಸಾಸ್ ಕಭೀ ಬಹು ಥೀ’ ಗಳಲ್ಲಿ ನಟಿಸಿದ್ದರು. ‘ಯೇ ರಿಶ್ತೆ ಹೈ ಪ್ಯಾರ್ ಕೇ’ ಧಾರಾವಾಹಿಯ ಶೌರ್ಯ ಪಾತ್ರ ಸಮೀರ್ ಗೆ ಹೆಚ್ಚು ಜನಪ್ರಿಯತೆ ತಂದು ಕೊಟ್ಟಿತ್ತು.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am