ಬ್ರೇಕಿಂಗ್ ನ್ಯೂಸ್
16-10-23 01:24 pm Bengalore Correspondent ಕ್ರೈಂ
ಬೆಂಗಳೂರು, ಅ.16: ''ದಾಂಪತ್ಯದ ರಹಸ್ಯಗಳನ್ನು ತನ್ನ ಸ್ನೇಹಿತರೊಂದಿಗೆ ಚರ್ಚಿಸುತ್ತಾನೆ. ಜೊತೆಗೆ ಸ್ನೇಹಿತರೊಂದಿಗೆ ದೈಹಿಕ ಸಂಬಂಧ ಹೊಂದುವಂತೆ ಗಂಡನೇ ಒತ್ತಾಯಿಸುತ್ತಿದ್ದಾನೆ'' ಎಂದು ಆರೋಪಿಸಿದ ಪೊಲೀಸ್ ಠಾಣಾ ಮೆಟ್ಟಿಲೇರಿದ್ದಾಳೆ. 42 ವರ್ಷದ ಮಹಿಳೆಯೊಬ್ಬರು ನೀಡಿರುವ ದೂರಿನ ಅನ್ವಯ ಆಕೆಯ ಪತಿಯ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರಳು ಹಾಗೂ ಆರೋಪಿಗೆ 2007ರಲ್ಲಿ ಹಿರಿಯರ ನಿಶ್ಚಯದಂತೆ ಮದುವೆಯಾಗಿತ್ತು. ದಂಪತಿಗೆ 11 ವರ್ಷದ ಮಗ ಹಾಗೂ 10 ವರ್ಷದ ಮಗಳಿದ್ದು, ಇಬ್ಬರೂ ಸಹ ಬೆಂಗಳೂರಿನಲ್ಲಿ ವಾಸವಿದ್ದರು. ಆದರೆ, ಅಚಾನಕ್ಕಾಗಿ ಗಂಡನ ಮೆಸೇಜ್ ಚಾಟ್ಸ್ ಪರಿಶೀಲಿಸಿದಾಗ, ಆತ ತಮ್ಮಿಬ್ಬರ ದೈಹಿಕ ಸಂಬಂಧದ ಕುರಿತು ತನ್ನ ಸ್ನೇಹಿತರೊಂದಿಗೆ ಮಾತನಾಡಿರುವುದು, ಲೈಂಗಿಕ ಕಾರ್ಯಕರ್ತೆಯರ ಬಗ್ಗೆ ಚರ್ಚಿಸಿರುವುದು ಪತ್ತೆಯಾಗಿತ್ತು. ಪ್ರಶ್ನಿಸಿದಾಗ ಆರೋಪಿಯು 'ನಿನಗೆ ನಿನ್ನ ಮಕ್ಕಳಿಗೆ ಜೀವನಾಂಶ ಕೊಡುವುದಿಲ್ಲವೆಂದು' ಗಲಾಟೆ ಮಾಡಿ, ಸಾಯಿಸುವುದಾಗಿ ಬೆದರಿಸಿದ್ದಾನೆ ಎಂದು ಮಹಿಳೆ ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ.
''ಇದಾದ ನಂತರವೂ ಸಹ ದೂರುದಾರಳ ಪೋಷಕರು ಹಾಗೂ ಹಿರಿಯರ ಸಮ್ಮುಖದಲ್ಲಿ ಸಂಧಾನ ಮಾಡಲಾಗಿದ್ದು, ದಂಪತಿ ಬಳ್ಳಾರಿ ರಸ್ತೆಯ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದರು. ಆದರೆ, ಕಳೆದ ಕೆಲ ತಿಂಗಳಿಂದ ಗಂಡ ತನ್ನ ಸ್ನೇಹಿತರ ಜೊತೆ ದೈಹಿಕ ಸಂಪರ್ಕ ಹೊಂದುವಂತೆ ಒತ್ತಾಯಿಸುತ್ತಿದ್ದಾನೆ'' ಎಂದು ನೊಂದ ಮಹಿಳೆ ಆರೋಪ ಮಾಡಿದ್ದಾಳೆ.
ಸದ್ಯ ನೊಂದ ಮಹಿಳೆಯ ದೂರಿನ ಅನ್ವಯ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Bangalore Wife files complaint against husband for forcing to have sexual relationship with friends.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
20-06-25 09:54 pm
Dinesh, Mangaluru
Tulu, Panchayat, Mangalore, Taranath Gatti K...
20-06-25 09:02 pm
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm