ಬ್ರೇಕಿಂಗ್ ನ್ಯೂಸ್
16-10-23 01:24 pm Bengalore Correspondent ಕ್ರೈಂ
ಬೆಂಗಳೂರು, ಅ.16: ''ದಾಂಪತ್ಯದ ರಹಸ್ಯಗಳನ್ನು ತನ್ನ ಸ್ನೇಹಿತರೊಂದಿಗೆ ಚರ್ಚಿಸುತ್ತಾನೆ. ಜೊತೆಗೆ ಸ್ನೇಹಿತರೊಂದಿಗೆ ದೈಹಿಕ ಸಂಬಂಧ ಹೊಂದುವಂತೆ ಗಂಡನೇ ಒತ್ತಾಯಿಸುತ್ತಿದ್ದಾನೆ'' ಎಂದು ಆರೋಪಿಸಿದ ಪೊಲೀಸ್ ಠಾಣಾ ಮೆಟ್ಟಿಲೇರಿದ್ದಾಳೆ. 42 ವರ್ಷದ ಮಹಿಳೆಯೊಬ್ಬರು ನೀಡಿರುವ ದೂರಿನ ಅನ್ವಯ ಆಕೆಯ ಪತಿಯ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರಳು ಹಾಗೂ ಆರೋಪಿಗೆ 2007ರಲ್ಲಿ ಹಿರಿಯರ ನಿಶ್ಚಯದಂತೆ ಮದುವೆಯಾಗಿತ್ತು. ದಂಪತಿಗೆ 11 ವರ್ಷದ ಮಗ ಹಾಗೂ 10 ವರ್ಷದ ಮಗಳಿದ್ದು, ಇಬ್ಬರೂ ಸಹ ಬೆಂಗಳೂರಿನಲ್ಲಿ ವಾಸವಿದ್ದರು. ಆದರೆ, ಅಚಾನಕ್ಕಾಗಿ ಗಂಡನ ಮೆಸೇಜ್ ಚಾಟ್ಸ್ ಪರಿಶೀಲಿಸಿದಾಗ, ಆತ ತಮ್ಮಿಬ್ಬರ ದೈಹಿಕ ಸಂಬಂಧದ ಕುರಿತು ತನ್ನ ಸ್ನೇಹಿತರೊಂದಿಗೆ ಮಾತನಾಡಿರುವುದು, ಲೈಂಗಿಕ ಕಾರ್ಯಕರ್ತೆಯರ ಬಗ್ಗೆ ಚರ್ಚಿಸಿರುವುದು ಪತ್ತೆಯಾಗಿತ್ತು. ಪ್ರಶ್ನಿಸಿದಾಗ ಆರೋಪಿಯು 'ನಿನಗೆ ನಿನ್ನ ಮಕ್ಕಳಿಗೆ ಜೀವನಾಂಶ ಕೊಡುವುದಿಲ್ಲವೆಂದು' ಗಲಾಟೆ ಮಾಡಿ, ಸಾಯಿಸುವುದಾಗಿ ಬೆದರಿಸಿದ್ದಾನೆ ಎಂದು ಮಹಿಳೆ ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ.
''ಇದಾದ ನಂತರವೂ ಸಹ ದೂರುದಾರಳ ಪೋಷಕರು ಹಾಗೂ ಹಿರಿಯರ ಸಮ್ಮುಖದಲ್ಲಿ ಸಂಧಾನ ಮಾಡಲಾಗಿದ್ದು, ದಂಪತಿ ಬಳ್ಳಾರಿ ರಸ್ತೆಯ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದರು. ಆದರೆ, ಕಳೆದ ಕೆಲ ತಿಂಗಳಿಂದ ಗಂಡ ತನ್ನ ಸ್ನೇಹಿತರ ಜೊತೆ ದೈಹಿಕ ಸಂಪರ್ಕ ಹೊಂದುವಂತೆ ಒತ್ತಾಯಿಸುತ್ತಿದ್ದಾನೆ'' ಎಂದು ನೊಂದ ಮಹಿಳೆ ಆರೋಪ ಮಾಡಿದ್ದಾಳೆ.
ಸದ್ಯ ನೊಂದ ಮಹಿಳೆಯ ದೂರಿನ ಅನ್ವಯ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Bangalore Wife files complaint against husband for forcing to have sexual relationship with friends.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm