ಬ್ರೇಕಿಂಗ್ ನ್ಯೂಸ್
17-10-23 04:03 pm Mangalore Correspondent ಕ್ರೈಂ
ಉಳ್ಳಾಲ, ಅ.17: ಬಿಸಿ ರಕ್ತದಲ್ಲಿ ಮದ್ಯ, ಗಾಂಜಾ ಸೇದಿ ರೌಡಿಸಂ ನಡೆಸಿದ್ದ ಉಳ್ಳಾಲ ಪೊಲೀಸ್ ಠಾಣೆಯ ಮಾಜಿ ರೌಡಿ ಶೀಟರ್ ಓರ್ವ ಮನೆಯಲ್ಲಿ ಟಿ.ವಿ ನೋಡುತ್ತಲೇ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.
ಸೇವಂತಿಗುಡ್ಡೆ ನಿವಾಸಿ ಶಮೀರ್ (41)ಆತ್ಮಹತ್ಯೆಗೈದ ವ್ಯಕ್ತಿ. ಶಮೀರ್ ಕ್ಯಾನ್ಸರ್ ನಿಂದ ಮೃತಪಟ್ಟ ನಟೋರಿಯಸ್ ರೌಡಿ ಶಬರಿಯ ಸಹಚರನಾಗಿದ್ದು ಉಳ್ಳಾಲ ಠಾಣೆಯಲ್ಲಿ ಹಳೆಯ ರೌಡಿ ಶೀಟರ್ ಆಗಿದ್ದ. ಗಾಂಜಾ, ಮದ್ಯ ವ್ಯಸನಿಯಾಗಿದ್ದ ಶಮೀರ್ ಜೀವನ ನಿರ್ವಹಣೆಗೆ ಇತ್ತೀಚಿಗೆ ಆಟೋ ರಿಕ್ಷಾ ಚಲಾಯಿಸುತ್ತಿದ್ದು ತೊಕ್ಕೊಟ್ಟಿನ ಒಳಪೇಟೆಯ ರಿಕ್ಷಾ ಪಾರ್ಕಲ್ಲಿ ದುಡಿಯುತ್ತಿದ್ದ.
ನಿನ್ನೆ ಸಂಜೆ ಒಳಪೇಟೆಯ ರಿಕ್ಷಾ ಚಾಲಕರಲ್ಲಿ ಗಲಾಟೆ ನಡೆಸಿದ್ದ ಶಮೀರ್ ಯಾರೊಬ್ಬರಿಗೂ ಪಾರ್ಕಲ್ಲಿ ಆಟೋ ರಿಕ್ಷಾ ಪಾರ್ಕ್ ಮಾಡಲು ಬಿಡುವುದಿಲ್ಲವೆಂದು ಆವಾಝ್ ಹಾಕಿದ್ದನಂತೆ.

ಶಮೀರನ ತಾಯಿ ಒಂದು ತಿಂಗಳ ಹಿಂದಷ್ಟೆ ಮೃತಪಟ್ಟಿದ್ದರಂತೆ. ಮೂರು ದಿನಗಳ ಹಿಂದಷ್ಟೆ ಶಮೀರ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಪಲ್ಟಿ ಹೊಡೆದಿದ್ದು, ರಿಕ್ಷಾದ ಲೋನ್ ಬಾಕಿಯಿದ್ದು ಬ್ಯಾಂಕಿನ ಸೀಝರ್ ಗಳು ದಿನ ನಿತ್ಯವೂ ಶಮೀರ್ ಗೆ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದರಂತೆ. ಮೃತ ಶಮೀರ್ ಗೆ ಎರಡು ಹೆಣ್ಣು, ಒಂದು ಗಂಡು ಮಕ್ಕಳಿದ್ದು ಪತ್ನಿಯೂ ಅನಾರೋಗ್ಯದಲ್ಲಿ ಬಳಲುತ್ತಿದ್ದಾರೆ ಎನ್ನಲಾಗಿದೆ. ನವರಾತ್ರಿ ರಜೆ ಸಿಕ್ಕ ಕಾರಣ ಪತ್ನಿ , ಮಕ್ಕಳು ತವರು ಸೇರಿದ್ದು,ಇಂದು ಬೆಳಗ್ಗೆ ಮನೆಯಲ್ಲಿ ಒಂಟಿಯಾಗಿದ್ದ ಶಮೀರ್ ಟಿ.ವಿ ನೋಡುತ್ತಲೇ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.
ಯೌವನದಲ್ಲಿ ಮದ್ಯ ,ಗಾಂಜಾದ ಅಮಲಿನಲ್ಲಿ ಉಳ್ಳಾಲದಲ್ಲಿ ಪುಡಿ ರೌಡಿಗಳಾಗಿ ಅಟ್ಟಹಾಸ ಮೆರೆದಿದ್ದ ಶಬರಿ, ಶಮೀರ್ ಇಬ್ಬರೂ ಅಕಾಲಿಕ ಸಾವು ಕಂಡಿದ್ದು ವಿಪರ್ಯಾಸ.
Mangalore 41 year old rowdy sheeter Shameer commits suicide at his house in Ullal.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm