ಬ್ರೇಕಿಂಗ್ ನ್ಯೂಸ್
22-10-23 08:26 pm Mangaluru Correspondent ಕ್ರೈಂ
ಮಂಗಳೂರು, ಅ.22: ಲಾಡ್ಜ್ ಒಂದರಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಮಂಗಳೂರಿನ ಕದ್ರಿ ಪೊಲೀಸರು ಬಂಧಿಸಿದ್ದಾರೆ.
ನೈಜೀರಿಯಾ ಮೂಲದ ಅಂಕಿಟೋಲ ಮತ್ತು ಘಾನಾ ದೇಶದ ಸಲಾಮ್ ಕ್ರಿಸ್ತಿಯನ್ ಬಂಧಿತರು. ಕದ್ರಿ ಠಾಣೆ ವ್ಯಾಪ್ತಿಯ ಫ್ಲಾಟ್ ಒಂದರಲ್ಲಿ ಇವರು ಬೆಂಗಳೂರಿನಿಂದ ಬಂದು ಉಳಿದುಕೊಂಡಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಕದ್ರಿ ಠಾಣೆ ಎಸ್ಐ ಉಮೇಶ್ ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.
ವೀಸಾ ಬಗ್ಗೆ ಪರಿಶೀಲನೆ ನಡೆಸಿದಾಗ ಇಬ್ಬರು ಕೂಡ 2018ರ ಬಳಿಕ ಸೂಕ್ತ ವೀಸಾ ಇಲ್ಲದೆ ವಾಸ ಇರುವುದು ಕಂಡುಬಂದಿದೆ. ನೈಜೀರಿಯಾದ ವ್ಯಕ್ತಿ ಬೆಂಗಳೂರಿನ ಬಾಣಸವಾಡಿಯಲ್ಲಿ ಸೆಲೂನ್ ನಡೆಸುತ್ತಿದ್ದು ಮಣಿಪುರದ ಯುವತಿಯನ್ನು ಮದುವೆಯಾಗಿ ಒಂದು ಮಗುವನ್ನು ಹೊಂದಿದ್ದಾನೆ. ಈತನ ಗೆಳೆಯ ಸಲಾಮ್ ಕ್ರಿಸ್ತಿಯನ್ ಬೆಂಗಳೂರಿನಲ್ಲಿ ಫುಟ್ಬಾಲ್ ಆಡುತ್ತಿದ್ದು ಕೊತ್ತನೂರಿನಲ್ಲಿ ವಾಸವಿದ್ದ. ಇಬ್ಬರಿಗೂ ಮಂಗಳೂರು ಮೂಲದ ಅನಿಲ್ ಡಿಸಿಲ್ವ ಸಮಾನ ಸ್ನೇಹಿತರಾಗಿದ್ದು ಅವರೊಂದಿಗೆ ಮಂಗಳೂರಿಗೆ ಬಂದಿದ್ದರು.
ಅನಿಲ್ ಡಿಸಿಲ್ವಾ ಬೆಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದು ಅವರ ಖಾಸಗಿ ಫಂಕ್ಷನ್ ನಲ್ಲಿ ಪಾಲ್ಗೊಳ್ಳಲು ಗೆಳೆಯರು ಬಂದಿದ್ದರು. ಅಕ್ರಮ ನೆಲೆಸಿದ್ದರಿಂದ ಇಬ್ಬರನ್ನೂ ಬಂಧಿಸಿ ಪೊಲೀಸರು ಬೆಂಗಳೂರಿಗೆ ಕಳಿಸಿಕೊಟ್ಟಿದ್ದು ಡಿಟೆನ್ಶನ್ ಸೆಂಟರಿನಲ್ಲಿ ಇರಿಸಲಾಗಿದೆ.
Two foreign nationals living illegally in India on expired visas were detained by police. The two were detained by the city east police station personnel.
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm