ಬ್ರೇಕಿಂಗ್ ನ್ಯೂಸ್
23-10-23 05:47 pm Mangalore Correspondent ಕ್ರೈಂ
ಉಳ್ಳಾಲ, ಅ.23: ಭೂಗತ ಪಾತಕಿ ರವಿ ಪೂಜಾರಿ ಮತ್ತು ಕಲಿ ಯೋಗೇಶನ ಸಹಚರ, ಜಿಲ್ಲೆಯ ಹಲವು ಠಾಣೆಗಳಲ್ಲಿ ಬಂಧನ ವಾರಂಟ್ ಎದುರಿಸುತ್ತಿದ್ದ ನಟೋರಿಯಸ್ ಶಾರ್ಪ್ ಶೂಟರ್ ಕೇರಳದ ಮಂಜೇಶ್ವರ, ಪೈವಳಿಕೆ ನಿವಾಸಿ ಮೊಹಮ್ಮದ್ ಹನೀಫ್ ಯಾನೆ ಅಲಿ ಮುನ್ನಾನನ್ನು ಮಂಗಳೂರು ದಕ್ಷಿಣ ಉಪವಿಭಾಗ ಎಸಿಪಿ ಧನ್ಯಾ ನಾಯಕ್ ನೇತೃತ್ವದ ತಂಡ ಬಂಧಿಸಿದೆ.
ನಟೋರಿಯಸ್ ಶಾರ್ಪ್ ಶೂಟರ್ ಹನೀಫ್ ಯಾನೆ ಅಲಿ ಮುನ್ನಾ ಭೂಗತ ಪಾತಕಿ ರವಿ ಪೂಜಾರಿಯ ಕುಕೃತ್ಯಗಳಿಗೆ ಕರಾವಳಿಯ ಪ್ರತಿನಿಧಿಯಾಗಿದ್ದು ಹಲವು ಶೂಟೌಟ್, ದರೋಡೆ, ಬೆದರಿಕೆ ಪ್ರಕರಣದಲ್ಲಿ ರಾಜ್ಯದ ಅನೇಕ ಠಾಣೆಗಳಿಂದ ಬಂಧನ ವಾರಂಟ್ ಎದುರಿಸುತ್ತಿದ್ದ. ಈತನ ವಿರುದ್ಧ ಕೊಣಾಜೆ, ಮಂಗಳೂರು ಉತ್ತರ, ಪುತ್ತೂರು, ಬರ್ಕೆ, ವಿಟ್ಲ, ಉಳ್ಳಾಲ, ಬೆಂಗಳೂರು ವಿಮಾನ ನಿಲ್ದಾಣ ಠಾಣೆಯಲ್ಲಿ ಪ್ರಕರಣಗಳಿವೆ.
2010 ಮತ್ತು 2013ರಲ್ಲಿ ಕಾಸರಗೋಡು ಜಿಲ್ಲೆಯ ಬೇವಿಂಜ ಪಿಡಬ್ಲ್ಯುಡಿ ಗುತ್ತಿಗೆದಾರರ ಶೂಟೌಟ್ ಪ್ರಕರಣ, ಮಂಜೇಶ್ವರದಲ್ಲಿ ಕಳ್ಳತನ,
ಕುಂಬಳೆ ಹಾಗೂ ವಿದ್ಯಾನಗರ ಠಾಣೆಯಲ್ಲೂ ಪ್ರಕರಣ ದಾಖಲಾಗಿತ್ತು. ಮಂಗಳೂರು ಉತ್ತರ ಠಾಣಾ ವ್ಯಾಪ್ತಿಯ ಸಂಜೀವ ಶೆಟ್ಟಿ ಸಿಲ್ಕ್ಸ್ ಮಳಿಗೆ ಮತ್ತು ಪುತ್ತೂರು ರಾಜಧಾನಿ ಜ್ಯುವೆಲ್ಲರ್ಸ್ ನಲ್ಲಿ ಈತ ನಡೆಸಿದ ಶೂಟೌಟ್ ಪ್ರಕರಣ ಜಿಲ್ಲೆಯಲ್ಲಿ ಸದ್ದು ಮಾಡಿತ್ತು.
ಕರ್ನಾಟಕದಲ್ಲಿ ರವಿ ಪೂಜಾರಿಯ ಅಂಡರ್ ವರ್ಲ್ಡ್ ಮಾಫಿಯಾವನ್ನು ಅಲಿ ಮುನ್ನಾ ಮತ್ತು ಮನೀಷ್ ಕಂಟ್ರೋಲ್ ಮಾಡುತ್ತಿದ್ದರು. ಕರಾವಳಿಯ ಭೂಗತ ವ್ಯವಹಾರವನ್ನು ಅಲಿ ಮುನ್ನಾನೇ ನಿರ್ವಹಿಸುತ್ತಿದ್ದ. ಕಾರ್ಕಳದ ಕಿಶನ್ ಹೆಗ್ಡೆ ಕೊಲೆಗೆ ಪ್ರತೀಕಾರವಾಗಿ ಕೋಡಿಕೆರೆ ಮನೋಜ್ ಗ್ಯಾಂಗಿನಿಂದ ಬೆಂಗಳೂರಲ್ಲಿ ಮನೀಷ್ ಕೊಲೆಯಾಗಿದ್ದ. ಆಪ್ತ ಸಹಚರ ಮನೀಷ್ ಕೊಲೆಯಾದ ನಂತರ ಅಲಿ ಮುನ್ನಾ ಕಂಗಾಲಾಗಿ ಮುಂಬೈ, ಬೆಂಗಳೂರಲ್ಲೇ ತಲೆಮರೆಸಿಕೊಂಡಿದ್ದ. ಆನಂತರವೂ ಹಫ್ತಾ ವಸೂಲಿಯಲ್ಲಿ ತೊಡಗಿಸಿದ್ದ ಅಲಿ ಮುನ್ನಾನನ್ನು ಎಸಿಪಿ ಧನ್ಯ ನಾಯಕ್ ನೇತೃತ್ವದ ತಂಡ ಮತ್ತು ಕೊಣಾಜೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಕೇರಳದಲ್ಲಿ ಬಂಧಿಸಿದ್ದಾರೆ.
Mangalore Underworld don Ravi Pujari Kali Yogesh close aide Mohammed Hannif arrested
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm