ಬ್ರೇಕಿಂಗ್ ನ್ಯೂಸ್
30-10-23 01:54 pm Mangalore Correspondent ಕ್ರೈಂ
ಮಂಗಳೂರು, ಅ.30: ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಟೀಲು ಗಿಡಿಗೆರೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹಿಳೆಯೊಬ್ಬರು ಕೊಲೆಯಾಗಿದ್ದು ಮೂರು ದಿನಗಳ ಬಳಿಕ ಭಾನುವಾರ ಬೆಳಕಿಗೆ ಬಂದಿದೆ. ಗಿಡಿಗೆರೆ ನಿವಾಸಿ ರತ್ನಾ ಶೆಟ್ಟಿ (55) ಕೊಲೆಯಾದವರು. ಮನೆಯಿಂದ ವಾಸನೆ ಬರುತ್ತಿದ್ದುದರಿಂದ ಪಕ್ಕದ ಮನೆಯವರು ಬಜ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಂದು ತಪಾಸಣೆ ನಡೆಸಿದಾಗ ಕೊಲೆ ನಡೆದಿರುವುದು ಪತ್ತೆಯಾಗಿದೆ.
ಕೈಕಾಲುಗಳನ್ನು ಕಟ್ಟಿದ ಸ್ಥಿತಿಯಲ್ಲಿದ್ದು ಕುತ್ತಿಗೆ ಬಿಗಿದು ಕೊಲೆ ಮಾಡಲಾಗಿದೆ. ಮೈಯಲ್ಲಿ ರಕ್ತದ ಕಲೆಗಳು, ತರಚಿದ ಗಾಯಗಳಿವೆ. ಕೊಲೆಯಾಗಿ ಮೂರು ದಿನ ಆಗಿದ್ದರಿಂದ ಬಾತುಕೊಂಡು ವಾಸನೆ ಬರುತ್ತಿತ್ತು. ಕಟೀಲು ಚರ್ಚ್ ಬಳಿಯ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ರತ್ನಾ ಶೆಟ್ಟಿ ತನ್ನ ಮಗನೊಂದಿಗೆ ವಾಸವಿದ್ದರು. ಕೃತ್ಯ ಬೆಳಕಿಗೆ ಬಂದ ಕೂಡಲೇ ಮಗನಿಗೆ ಫೋನ್ ಮಾಡಿದ್ದರು. ಮೊದಲು ಕಿನ್ನಿಗೋಳಿಯಲ್ಲಿದ್ದೇನೆ ಎಂದಿದ್ದ ಮಗ ರವಿರಾಜ್, ಬಳಿಕ ಫೋನ್ ಸ್ವಿಚ್ ಆಫ್ ಮಾಡಿದ್ದ. ಪೊಲೀಸರು ಬಳಿಕ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಮಗನಿಂದಲೇ ಕೊಲೆ ಶಂಕೆ
ಮಗ ರವಿರಾಜ್ ಗಾಂಜಾ ವ್ಯಸನಿಯಾಗಿದ್ದು ಕಿನ್ನಿಗೋಳಿಯ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಎರಡು ದಿನಗಳ ಹಿಂದೆ ಸ್ಥಳೀಯರು ಈತನಲ್ಲಿ ತಾಯಿ ಬಗ್ಗೆ ವಿಚಾರಿಸಿದಾಗ, ಅವರಿಗೆ ಹುಷಾರಿಲ್ಲ. ಸಂಬಂಧಿಕರ ಮನೆಯಲ್ಲಿ ಬಿಟ್ಟಿದ್ದೇನೆ ಎಂದು ತಿಳಿಸಿದ್ದ. ಅ.29 ರಂದು ಬೆಳಗ್ಗೆ ವಾಸನೆ ಬರುತ್ತಿದ್ದ ಕಾರಣ ಕಿಟಕಿಯಲ್ಲಿ ಇಣುಕಿ ನೋಡಿದಾಗ ರತ್ನಾ ಸಾವನ್ನಪ್ಪಿದ ಸ್ಥಿತಿಯಲ್ಲಿ ಕಂಡುಬಂದಿದ್ದರು. ಬಳಿಕ ಪೊಲೀಸರನ್ನು ಕರೆಸಿ, ಬಾಗಿಲು ಒಡೆದು ನೋಡಿದಾಗ ಕೈಕಾಲುಗಳನ್ನು ನೈಲಾನ್ ಹಗ್ಗದಿಂದ ಕಟ್ಟಿರುವುದು ಪತ್ತೆಯಾಗಿದೆ.
ಆರೇಳು ವರ್ಷಗಳ ಹಿಂದೆ ರತ್ನಾ ಶೆಟ್ಟಿ ಗಂಡ ತೀರಿಕೊಂಡಿದ್ದರು. ಆನಂತರ ಬಾಡಿಗೆ ಮನೆಯಲ್ಲಿದ್ದು ಹೊಟೇಲ್ ಕೆಲಸ ಮಾಡುತ್ತ ಜೀವನ ಮಾಡುತ್ತಿದ್ದರು. ಮಗ ಕೆಲವೊಮ್ಮೆ ಮನೆಗೆ ಬಂದು ಇರುತ್ತಿದ್ದ.
Mother killed at Kateel in Mangalore, Ganja Son suspected for killing.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm