ಬ್ರೇಕಿಂಗ್ ನ್ಯೂಸ್
30-10-23 01:54 pm Mangalore Correspondent ಕ್ರೈಂ
ಮಂಗಳೂರು, ಅ.30: ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಟೀಲು ಗಿಡಿಗೆರೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹಿಳೆಯೊಬ್ಬರು ಕೊಲೆಯಾಗಿದ್ದು ಮೂರು ದಿನಗಳ ಬಳಿಕ ಭಾನುವಾರ ಬೆಳಕಿಗೆ ಬಂದಿದೆ. ಗಿಡಿಗೆರೆ ನಿವಾಸಿ ರತ್ನಾ ಶೆಟ್ಟಿ (55) ಕೊಲೆಯಾದವರು. ಮನೆಯಿಂದ ವಾಸನೆ ಬರುತ್ತಿದ್ದುದರಿಂದ ಪಕ್ಕದ ಮನೆಯವರು ಬಜ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಂದು ತಪಾಸಣೆ ನಡೆಸಿದಾಗ ಕೊಲೆ ನಡೆದಿರುವುದು ಪತ್ತೆಯಾಗಿದೆ.
ಕೈಕಾಲುಗಳನ್ನು ಕಟ್ಟಿದ ಸ್ಥಿತಿಯಲ್ಲಿದ್ದು ಕುತ್ತಿಗೆ ಬಿಗಿದು ಕೊಲೆ ಮಾಡಲಾಗಿದೆ. ಮೈಯಲ್ಲಿ ರಕ್ತದ ಕಲೆಗಳು, ತರಚಿದ ಗಾಯಗಳಿವೆ. ಕೊಲೆಯಾಗಿ ಮೂರು ದಿನ ಆಗಿದ್ದರಿಂದ ಬಾತುಕೊಂಡು ವಾಸನೆ ಬರುತ್ತಿತ್ತು. ಕಟೀಲು ಚರ್ಚ್ ಬಳಿಯ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ರತ್ನಾ ಶೆಟ್ಟಿ ತನ್ನ ಮಗನೊಂದಿಗೆ ವಾಸವಿದ್ದರು. ಕೃತ್ಯ ಬೆಳಕಿಗೆ ಬಂದ ಕೂಡಲೇ ಮಗನಿಗೆ ಫೋನ್ ಮಾಡಿದ್ದರು. ಮೊದಲು ಕಿನ್ನಿಗೋಳಿಯಲ್ಲಿದ್ದೇನೆ ಎಂದಿದ್ದ ಮಗ ರವಿರಾಜ್, ಬಳಿಕ ಫೋನ್ ಸ್ವಿಚ್ ಆಫ್ ಮಾಡಿದ್ದ. ಪೊಲೀಸರು ಬಳಿಕ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಮಗನಿಂದಲೇ ಕೊಲೆ ಶಂಕೆ
ಮಗ ರವಿರಾಜ್ ಗಾಂಜಾ ವ್ಯಸನಿಯಾಗಿದ್ದು ಕಿನ್ನಿಗೋಳಿಯ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಎರಡು ದಿನಗಳ ಹಿಂದೆ ಸ್ಥಳೀಯರು ಈತನಲ್ಲಿ ತಾಯಿ ಬಗ್ಗೆ ವಿಚಾರಿಸಿದಾಗ, ಅವರಿಗೆ ಹುಷಾರಿಲ್ಲ. ಸಂಬಂಧಿಕರ ಮನೆಯಲ್ಲಿ ಬಿಟ್ಟಿದ್ದೇನೆ ಎಂದು ತಿಳಿಸಿದ್ದ. ಅ.29 ರಂದು ಬೆಳಗ್ಗೆ ವಾಸನೆ ಬರುತ್ತಿದ್ದ ಕಾರಣ ಕಿಟಕಿಯಲ್ಲಿ ಇಣುಕಿ ನೋಡಿದಾಗ ರತ್ನಾ ಸಾವನ್ನಪ್ಪಿದ ಸ್ಥಿತಿಯಲ್ಲಿ ಕಂಡುಬಂದಿದ್ದರು. ಬಳಿಕ ಪೊಲೀಸರನ್ನು ಕರೆಸಿ, ಬಾಗಿಲು ಒಡೆದು ನೋಡಿದಾಗ ಕೈಕಾಲುಗಳನ್ನು ನೈಲಾನ್ ಹಗ್ಗದಿಂದ ಕಟ್ಟಿರುವುದು ಪತ್ತೆಯಾಗಿದೆ.
ಆರೇಳು ವರ್ಷಗಳ ಹಿಂದೆ ರತ್ನಾ ಶೆಟ್ಟಿ ಗಂಡ ತೀರಿಕೊಂಡಿದ್ದರು. ಆನಂತರ ಬಾಡಿಗೆ ಮನೆಯಲ್ಲಿದ್ದು ಹೊಟೇಲ್ ಕೆಲಸ ಮಾಡುತ್ತ ಜೀವನ ಮಾಡುತ್ತಿದ್ದರು. ಮಗ ಕೆಲವೊಮ್ಮೆ ಮನೆಗೆ ಬಂದು ಇರುತ್ತಿದ್ದ.
Mother killed at Kateel in Mangalore, Ganja Son suspected for killing.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
20-06-25 09:02 pm
Mangalore Correspondent
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm