ಬ್ರೇಕಿಂಗ್ ನ್ಯೂಸ್
12-11-20 10:02 pm Headline Karnataka News Network ಕ್ರೈಂ
ಚಿಕ್ಕಮಗಳೂರು, ನವೆಂಬರ್ 12: ಸರ್ಕಾರಿ ಕೆಲಸ ಕೊಡಿಸೋದಾಗಿ ನಂಬಿಸಿ ಹಣ ಪಡೆದು ವಂಚಿಸುತ್ತಿದ್ದ ಭೂಪನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಮೂಲದ ಪ್ರಭಾಕರ್ ಬಂಧಿತ. ಈತ ಪೋಸ್ಟಲ್ ಸರ್ವಿಸ್, ಇಸ್ರೋ, ಮೆಸ್ಕಾಂ, ಪಿಯುಸಿ, ಎಸ್.ಎಸ್.ಎಲ್.ಸಿ ಶಿಕ್ಷಣ ಇಲಾಖೆಯ ಬೋರ್ಡ್ ನಲ್ಲಿ ಕೆಲಸ ಕೊಡಿಸೋದಾಗಿ ಹೇಳಿ ಸುಮಾರು 2 ಕೋಟಿಗೂ ಅಧಿಕ ಹಣ ಪಡೆದು ವಂಚಿಸಿದ್ದ ಬಗ್ಗೆ ತನಿಖೆಯಲ್ಲಿ ತಿಳಿದುಬಂದಿದೆ.
ವಂಚನೆ ದುಡ್ಡಲ್ಲಿ ಐಶಾರಾಮಿ ಜೀವನ ನಡೆಸುತ್ತಿದ್ದ ಪ್ರಭಾಕರ್, ಅದೇ ದುಡ್ಡಲ್ಲಿ ತಿರುಪತಿ ತಿಮ್ಮಪ್ಪನಿಗೂ 5 ಲಕ್ಷ ಕಾಣಿಕೆ ಹಾಕಿದ್ದ ವಿಚಾರ ಬಯಲಾಗಿದೆ. ಅಷ್ಟೇ ಅಲ್ಲ, ಉತ್ತರ ಭಾರತದ ವಿವಿಧೆಡೆಗೆ ಹೆಲಿಕಾಪ್ಟರ್ ನಲ್ಲೇ ತೀರ್ಥಯಾತ್ರೆ ನಡೆಸುತ್ತಿದ್ದ ಎನ್ನುವ ವಿಚಾರವೂ ತನಿಖೆಯಲ್ಲಿ ಪೊಲೀಸರಿಗೆ ತಿಳಿದುಬಂದಿದೆ.
ಸುಮಾರು 48 ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಪೊಲೀಸರು ಆತನಿಂದ ವಶಕ್ಕೆ ಪಡೆದಿದ್ದಾರೆ. ತುಂಬಾ ಖತರ್ನಾಕ್ ಆಗಿದ್ದ ಕಿಲಾಡಿ, ರಾಜ್ಯಾದ್ಯಂತ ನೂರಾರು ಯುವಕ - ಯುವತಿಯರಿಗೆ ವಂಚಿಸಿದ್ದಾನೆ. ಉದ್ಯೋಗ ಕೊಡಿಸುವ ಆಮಿಷದಲ್ಲಿ ನಕಲಿ ಆಫರ್ ಲೆಟರ್ ನೀಡಿ, ಒಬ್ಬೊಬ್ಬರಿಂದ 10-15 ಲಕ್ಷ ರೂ. ಪೀಕುತ್ತಿದ್ದ. ಈ ಬಗ್ಗೆ ವಂಚನೆಗೊಳಗಾದ ಯುವಕನೊಬ್ಬ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ. ಆರೋಪಿಯ ಬೆನ್ನತ್ತಿದ ಪೊಲೀಸರಿಗೆ ಆತನ ಕಾರ್ಯಶೈಲಿ, ಐಷಾರಾಮಿ ಜೀವನ ನೋಡಿ ಅಚ್ಚರಿಗೆ ಒಳಗಾಗಿದ್ದಾರೆ.
A man was arrested in Chikmagalur by police for cheating people on the promise of offering government job offer and extorted money crores from them.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
19-06-25 01:05 pm
Mangalore Correspondent
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm