ಬ್ರೇಕಿಂಗ್ ನ್ಯೂಸ್
01-11-23 04:17 pm Bangalore Correspondent ಕ್ರೈಂ
ಬೆಂಗಳೂರು, ನ 01: ಮೆಡಿಕಲ್ ಸೀಟು ಆಕಾಂಕ್ಷಿಗಳಿಗೆ ಅತೀ ಕಡಿಮೆ ಮೊತ್ತದಲ್ಲಿ ನೆರೆ ರಾಜ್ಯದಲ್ಲಿ ಸೀಟ್ ಕೊಡಿಸುವುದಾಗಿ ಹೇಳಿ ವಂಚಿಸಿದ್ದ ಹೈದ್ರಾಬಾದ್ ಮೂಲದ ಆರೋಪಿ ಈಗ ಸಂಜಯನಗರ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಶರತ್ಗೌಡ್(45) ಬಂಧಿತ ಆರೋಪಿಯಾಗಿದ್ದು ಪೊಲೀಸರು ಸುಮಾರು 47 ಲಕ್ಷ ರೂ. ನಗದು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಸಂಜಯನಗರದ ನ್ಯೂಬಿಇಎಲ್ ರಸ್ತೆಯಲ್ಲಿ "ನೆಕ್ಸಸ್ ಎಡು" ಎಂಬ ಸಂಸ್ಥೆ ತೆರೆದು ವಿದ್ಯಾರ್ಥಿಗಳನ್ನು ವಂಚಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದ.
ಆ್ಯಪ್ನಲ್ಲಿ ಅಭ್ಯರ್ಥಿಗಳ ಪಟ್ಟಿ:
ಹೈದ್ರಾಬಾದ್ ಮೂಲದ ಶರತ್ಗೌಡ ಎಂಬಿಎ ಪದವೀಧರನಾಗಿದ್ದು, ಎರಡು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದಾನೆ. ನ್ಯೂಬಿಇಎಲ್ ರಸ್ತೆಯಲ್ಲಿ ನೆಕ್ಸಸ್ ಎಡು ಎಂಬ ಸಂಸ್ಥೆ ನಡೆಸುತ್ತಿದ್ದ. ಅದರಲ್ಲಿ ಕೆಲ ಯುವತಿಯರಿಗೆ ಉದ್ಯೋಗ ನೀಡಿದ್ದ. ಏಜೆನ್ಸಿಯೊಂದು ಸಿದ್ಧಪಡಿಸಿರುವ ಆ್ಯಪ್ನಲ್ಲಿ ರಾಜ್ಯ ಹಾಗೂ ನೆರೆರಾಜ್ಯದ ವೈದ್ಯಕೀಯ ಸೀಟು ಆಕಾಂಕ್ಷಿಗಳ ಪಟ್ಟಿ ದಾಖಲಾಗಿತ್ತು.
ಇತ್ತೀಚೆಗೆ ತಿಮ್ಮೇಗೌಡ ಎಂಬವರ ಪುತ್ರನಿಗೆ ಕೇರಳದ ಪಿ.ಕೆ.ದಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ಸೈನ್ಸ್ನಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ 10 ಲಕ್ಷ ರೂ. ಪಡೆದುಕೊಂಡು ವಂಚಿಸಿದ್ದ. ಈ ಸಂಬಂಧ ತಿಮ್ಮೇಗೌಡ ನೀಡಿದ ದೂರಿನ ಮೇರೆಗೆ ವಂಚನೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ತೆಲಂಗಾಣದ ಹೈದರಾಬಾದ್ನ ಆತನ ಅಪಾರ್ಟ್ಮೆಂಟ್ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
18 ಮಂದಿಗೆ 62 ಲಕ್ಷ ರೂ. ವಂಚನೆ:
ಆರೋಪಿ ವಿಚಾರಣೆ ವೇಳೆ ಇದುವರೆಗೂ 18 ಮಂದಿಗೆ 62 ಲಕ್ಷ ರೂ. ವಂಚಿಸಿದ್ದಾನೆ ಎಂಬುದು ಗೊತ್ತಾಗಿದೆ. ಈ ಪೈಕಿ 47.80 ಲಕ್ಷ ರೂ. ಜಪ್ತಿ ಮಾಡಲಾಗಿದೆ. ಬಾಕಿ ಹಣವನ್ನು ಆರೋಪಿ ಬಳಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.
ಉತ್ತರವಿಭಾಗ ಡಿಸಿಪಿ ಸೈದುಲು ಅಡಾವತ್, ಜೆ.ಸಿ.ನಗರ ಉಪವಿಭಾಗದ ಎಸಿಪಿ ಮನೋಜ್ಕುಮಾರ್ ನೇತೃತ್ವದಲ್ಲಿ ಸಂಜಯನಗರ ಠಾಣೆ ಇನ್ಸ್ಪೆಕ್ಟರ್ ಭಾಗ್ಯವತಿ ಜೆ.ಬಂಟಿ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.
Man from Hyderabad arrested by Bangalore police for cheating around 60 lakhs in the name of Medical college Seat.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm