ಬ್ರೇಕಿಂಗ್ ನ್ಯೂಸ್
01-11-23 04:17 pm Bangalore Correspondent ಕ್ರೈಂ
ಬೆಂಗಳೂರು, ನ 01: ಮೆಡಿಕಲ್ ಸೀಟು ಆಕಾಂಕ್ಷಿಗಳಿಗೆ ಅತೀ ಕಡಿಮೆ ಮೊತ್ತದಲ್ಲಿ ನೆರೆ ರಾಜ್ಯದಲ್ಲಿ ಸೀಟ್ ಕೊಡಿಸುವುದಾಗಿ ಹೇಳಿ ವಂಚಿಸಿದ್ದ ಹೈದ್ರಾಬಾದ್ ಮೂಲದ ಆರೋಪಿ ಈಗ ಸಂಜಯನಗರ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಶರತ್ಗೌಡ್(45) ಬಂಧಿತ ಆರೋಪಿಯಾಗಿದ್ದು ಪೊಲೀಸರು ಸುಮಾರು 47 ಲಕ್ಷ ರೂ. ನಗದು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಸಂಜಯನಗರದ ನ್ಯೂಬಿಇಎಲ್ ರಸ್ತೆಯಲ್ಲಿ "ನೆಕ್ಸಸ್ ಎಡು" ಎಂಬ ಸಂಸ್ಥೆ ತೆರೆದು ವಿದ್ಯಾರ್ಥಿಗಳನ್ನು ವಂಚಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದ.
ಆ್ಯಪ್ನಲ್ಲಿ ಅಭ್ಯರ್ಥಿಗಳ ಪಟ್ಟಿ:
ಹೈದ್ರಾಬಾದ್ ಮೂಲದ ಶರತ್ಗೌಡ ಎಂಬಿಎ ಪದವೀಧರನಾಗಿದ್ದು, ಎರಡು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದಾನೆ. ನ್ಯೂಬಿಇಎಲ್ ರಸ್ತೆಯಲ್ಲಿ ನೆಕ್ಸಸ್ ಎಡು ಎಂಬ ಸಂಸ್ಥೆ ನಡೆಸುತ್ತಿದ್ದ. ಅದರಲ್ಲಿ ಕೆಲ ಯುವತಿಯರಿಗೆ ಉದ್ಯೋಗ ನೀಡಿದ್ದ. ಏಜೆನ್ಸಿಯೊಂದು ಸಿದ್ಧಪಡಿಸಿರುವ ಆ್ಯಪ್ನಲ್ಲಿ ರಾಜ್ಯ ಹಾಗೂ ನೆರೆರಾಜ್ಯದ ವೈದ್ಯಕೀಯ ಸೀಟು ಆಕಾಂಕ್ಷಿಗಳ ಪಟ್ಟಿ ದಾಖಲಾಗಿತ್ತು.
ಇತ್ತೀಚೆಗೆ ತಿಮ್ಮೇಗೌಡ ಎಂಬವರ ಪುತ್ರನಿಗೆ ಕೇರಳದ ಪಿ.ಕೆ.ದಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ಸೈನ್ಸ್ನಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ 10 ಲಕ್ಷ ರೂ. ಪಡೆದುಕೊಂಡು ವಂಚಿಸಿದ್ದ. ಈ ಸಂಬಂಧ ತಿಮ್ಮೇಗೌಡ ನೀಡಿದ ದೂರಿನ ಮೇರೆಗೆ ವಂಚನೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ತೆಲಂಗಾಣದ ಹೈದರಾಬಾದ್ನ ಆತನ ಅಪಾರ್ಟ್ಮೆಂಟ್ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
18 ಮಂದಿಗೆ 62 ಲಕ್ಷ ರೂ. ವಂಚನೆ:
ಆರೋಪಿ ವಿಚಾರಣೆ ವೇಳೆ ಇದುವರೆಗೂ 18 ಮಂದಿಗೆ 62 ಲಕ್ಷ ರೂ. ವಂಚಿಸಿದ್ದಾನೆ ಎಂಬುದು ಗೊತ್ತಾಗಿದೆ. ಈ ಪೈಕಿ 47.80 ಲಕ್ಷ ರೂ. ಜಪ್ತಿ ಮಾಡಲಾಗಿದೆ. ಬಾಕಿ ಹಣವನ್ನು ಆರೋಪಿ ಬಳಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.
ಉತ್ತರವಿಭಾಗ ಡಿಸಿಪಿ ಸೈದುಲು ಅಡಾವತ್, ಜೆ.ಸಿ.ನಗರ ಉಪವಿಭಾಗದ ಎಸಿಪಿ ಮನೋಜ್ಕುಮಾರ್ ನೇತೃತ್ವದಲ್ಲಿ ಸಂಜಯನಗರ ಠಾಣೆ ಇನ್ಸ್ಪೆಕ್ಟರ್ ಭಾಗ್ಯವತಿ ಜೆ.ಬಂಟಿ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.
Man from Hyderabad arrested by Bangalore police for cheating around 60 lakhs in the name of Medical college Seat.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm