ಬ್ರೇಕಿಂಗ್ ನ್ಯೂಸ್
01-11-23 07:48 pm Udupi Correspondent ಕ್ರೈಂ
ಉಡುಪಿ, ನ.1: ಮನೆ ಕಳ್ಳತನವನ್ನೇ ಕಸುಬು ಮಾಡಿಕೊಂಡಿದ್ದ ಬೆಂಗಳೂರು ಮೂಲದ ಕುಖ್ಯಾತ ಕಳ್ಳನನ್ನು ಉಡುಪಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಆರೋಪಿಯಿಂದ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಪಡಿಸಿದ್ದಾರೆ.
ಬೆಂಗಳೂರಿನ ಮಂಜುನಾಥ ಯಾನೆ ಕಲ್ಕೆರೆ ಮಂಜ(43) ಬಂಧಿತ ಆರೋಪಿ. 60ಕ್ಕೂ ಹೆಚ್ಚು ಪ್ರಕರಣಗಳನ್ನು ಎದುರಿಸುತ್ತಿರುವ ಕಲ್ಕೆರೆ ಮಂಜನ ಬಂಧನದ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಎಸ್ಪಿ ಎಸ್.ಟಿ.ಸಿದ್ದಲಿಂಗಪ್ಪ ಮಾಹಿತಿ ನೀಡಿದ್ದಾರೆ. ಬೆಂಗಳೂರು ಉತ್ತರಹಳ್ಳಿಯ ಭುವನೇಶ್ವರಿ ನಗರದ ನಿವಾಸಿ ಮಂಜುನಾಥ ಯಾನೆ ಕಲ್ಕೆರೆ ಮಂಜ(43) ಬಂಧಿತನಾಗಿದ್ದು ಈತನಿಂದ 31,55,930 ರೂ. ಮೌಲ್ಯದ 530 ಗ್ರಾಂ ಚಿನ್ನಾಭರಣ ಹಾಗೂ 15,12,000 ರೂ. ಮೌಲ್ಯದ 16.800 ಗ್ರಾಂ ಬೆಳ್ಳಿಯ ಆಭರಣಗಳನ್ನು ಮತ್ತು ಕಳವು ಮಾಡಲು ಬಳಸಿದ 2.50 ಲಕ್ಷ ರೂ. ಮೌಲ್ಯದ ಕಾರು, ನಕಲಿ ನಂಬರ್ ಪ್ಲೇಟ್ಗಳು ಮತ್ತು ಕಬ್ಬಿಣದ ರಾಡ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅ.8ರಂದು ರಾತ್ರಿ ಕುಂಜಿಬೆಟ್ಟುವಿನ ಅಮ್ಮುಂಜೆ ವಿಠಲದಾಸ್ ನಾಯಕ್ ಎಂಬವರ ಮನೆಗೆ ನುಗ್ಗಿದ್ದ ಕಳ್ಳರು, ಒಟ್ಟು 73,06,800 ರೂ. ಮೌಲ್ಯದ 1,882 ಗ್ರಾಂ ತೂಕದ ಚಿನ್ನಾಭರಣ ಹಾಗೂ 7450 ಗ್ರಾಂ ಬೆಳ್ಳಿಯ ಸೊತ್ತುಗಳನ್ನು ಕಳವುಗೈದಿದ್ದರು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕಳ್ಳತನ ತನಿಖೆಗಾಗಿ ಉಡುಪಿ ನಗರ ಠಾಣೆ ಪೊಲೀಸ್ ನಿರೀಕ್ಷಕ ಮಂಜಪ್ಪ, ಉಡುಪಿ ನಗರ ಠಾಣೆ ಎಸ್ಸೈ ಪುನೀತ್ ಕುಮಾರ್ ಬಿ.ಇ. ಹಾಗೂ ಈರಣ್ಣ ಶಿರಗುಂಪಿ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಪೊಲೀಸರು ಅ.31ರಂದು ಕಾರ್ಯಾಚರಣೆ ನಡೆಸುತ್ತಿದ್ದಾಗ ಆರೋಪಿಯನ್ನು ಕಾರು ಸಹಿತ ಉಡುಪಿ ಉದ್ಯಾವರ ಸಮೀಪದ ಬಲಾಯಿ ಪಾದೆ ಬಳಿ ವಶಕ್ಕೆ ಪಡೆದಿದ್ದರು.
ಆರೋಪಿ ವಿರುದ್ಧ ಉಡುಪಿ, ಬ್ರಹ್ಮಾವರ, ಹಾಸನ ಜಿಲ್ಲೆಯ ತರೀಕೆರೆ, ಅರಸಿಕೇರೆ ಮತ್ತು ಬೆಂಗಳೂರಿನ ಬಾಣಾವರ ಸೇರಿದಂತೆ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು, ಕೋಲಾರ, ತುಮಕೂರು, ದಾವಣಗೆರೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 60ಕ್ಕೂ ಹೆಚ್ಚು ಪ್ರಕರಣಗಳಿವೆ ಎಂದು ಹೆಚ್ಚುವರಿ ಎಸ್ಪಿ ಎಸ್.ಟಿ.ಸಿದ್ದಲಿಂಗಪ್ಪ ತಿಳಿಸಿದ್ದಾರೆ.
Notorious thief arrested by Udupi Police who has 60 robbery cases.
14-08-26 05:32 pm
HK News Staffer
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm