ಬ್ರೇಕಿಂಗ್ ನ್ಯೂಸ್
02-11-23 09:43 pm HK News Desk ಕ್ರೈಂ
ಚಿತ್ರದುರ್ಗ, ನ 02: ಅಮೆರಿಕದ ಮಲ್ಟಿನ್ಯಾಷನಲ್ ಕಂಪನಿಯೊಂದರಲ್ಲಿ ಉನ್ನತ ಹುದ್ದೆ ಕೊಡಿಸುವುದಾಗಿ ಯುವತಿಯನ್ನು ನಂಬಿಸಿ, ಕೋಟಿಗಟ್ಟಲೆ ಹಣ ಪಡೆದು ವಂಚಿಸಿದ್ದಲ್ಲದೇ, ಸತತ 4 ವರ್ಷಗಳಿಂದ ಪ್ರೀತಿಸುವ ನಾಟಕವಾಡಿ, ಅತ್ಯಾಚಾರವೆಸಗಿದ್ದಾನೆಂದು ಆರೋಪಿಸಿರುವ ಘಟನೆ ಚಿತ್ರದುರ್ಗದಲ್ಲಿ ಬೆಳಕಿಗೆ ಬಂದಿದೆ.
ಉದ್ಯೋಗದ ಆಸೆಗೆ ಯುವಕನಿಂದ ಮೋಸ ಹೋಗಿ ನ್ಯಾಯಕ್ಕಾಗಿ ಚಿತ್ರದುರ್ಗದ ಯುವತಿ ಅಲೆದಾಡುತ್ತಿದ್ದಾರೆ. 2019 ರಲ್ಲಿ ಬೆಂಗಳೂರಿನ ಮೆಜೆಸ್ಟಿಕ್ನಲ್ಲಿ ಚಿತ್ರದುರ್ಗ ಮೂಲದ ಸೌರಭ್ ಎಂಬ ಯುವಕನ ಪರಿಚಯವಾಗಿದ್ದು, ಇಬ್ಬರ ಮಧ್ಯೆ ಪರಸ್ಪರ ಸ್ನೇಹ, ಆತ್ಮೀಯತೆ ಬೆಳೆದಿತ್ತು. ಆಗ ಅಮೆರಿಕ ಸೇರಿದಂತೆ ಮತ್ತಿತರ ವಿದೇಶದ ಮಲ್ಟಿನ್ಯಾಷನಲ್ ಕಂಪನಿಗಳಲ್ಲಿ ನಿನಗೆ ಕೆಲಸ ಕೊಡಿಸ್ತೀನಿ ಅಂತ ಯುವತಿಯನ್ನು ನಂಬಿಸಿದ್ದ ಸೌರಭ್ ಫೇಕ್ ಆಫರ್ ಲೆಟರ್ ಕೊಟ್ಟು, ಈಕೆಯಿಂದ ಉದ್ಯೋಗದ ನೆಪದಲ್ಲಿ ಕೋಟಿಗಟ್ಟಲೆ ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಪ್ರತಿದಿನ ಮೊಬೈಲ್ ಸಂಭಾಷಣೆಯಲ್ಲಿ ತೊಡಗಿದ್ದ ಅಸಾಮಿ ಸಾಕಷ್ಟು ಬಾರಿ ಆಕೆಯನ್ನು ಹೊರ ದೇಶಕ್ಕೆ ಹೋಗಬೇಕು, ರೆಡಿಯಾಗಿರು ಎಂದು ಹೇಳಿ, ಲಾಡ್ಜ್ಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಉದ್ಯೋಗವಂತು ಕೊಡಿಸಲಿಲ್ಲ, ಮದುವೆಯಾಗಿ ಬದುಕಾದರೂ ಕೊಟ್ಟು ಕರುಣೆ ತೋರು ಎಂದು ಕೇಳಿದರೂ ಸೊಪ್ಪು ಹಾಕಿಲ್ಲ. ನಮ್ಮಿಂದ ಪಡೆದ ಎರಡೂವರೆ ಕೋಟಿ ರೂ. ಹಣವಾದರೂ ವಾಪಸ್ ಕೊಟ್ಟುಬಿಡು ಎಂದು ಯುವತಿ ಹಾಗೂ ಆಕೆಯ ಕುಟುಂಬ ಅಂಗಲಾಚಿದರೂ ಸಹ ಕಿಂಚಿತ್ ಅನುಕಂಪವಿಲ್ಲದೇ ಕೊಲೆ ಬೆದರಿಕೆ ಹಾಕಿದ್ದಾನೆಂದು ಆರೋಪಿಸಲಾಗಿದೆ.
ಈ ಸಂಬಂಧ ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಅಲ್ಲದೇ 2 ತಿಂಗಳ ಹಿಂದೆ ನೊಂದ ಯುವತಿಯ ತಂದೆ ಕೂಡ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರಿನ ಆಧಾರದ ಮೇಲೆ ಕೇಸ್ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಚಿತ್ರದುರ್ಗ ಎಸ್ಪಿ ಧರ್ಮೇಂದರ್ ಕುಮಾರ್, ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದೇವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾರದರ್ಶಕವಾದ ತನಿಖೆ ನಡೆಸಿ, ನೊಂದವರಿಗೆ ನ್ಯಾಯ ಕೊಡಿಸುವ ಭರವಸೆಯನ್ನು ನೀಡಿದ್ದಾರೆ.
Job fraud, Chitradurga man cheats girl of 2 crores of getting job in America, rapes her several times. The accused Sowrab has now been arrested.
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm