ಬ್ರೇಕಿಂಗ್ ನ್ಯೂಸ್
03-11-23 08:09 pm HK News Desk ಕ್ರೈಂ
ಹಾಸನ, ನ.3: ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿ ನಡುವೆ ಗಲಾಟೆ ನಡೆದು, ಪತಿಯ ಏಟಿಗೆ ಪತ್ನಿ ಸ್ಥಳದಲ್ಲೇ ಸಾವು ಕಂಡಿದ್ದಳು. ಪೊಲೀಸರಿಗೆ ತಿಳಿದರೆ ಜೈಲು ಸೇರುತ್ತೇನೆಂಬ ಭಯದಲ್ಲಿ ಶವವನ್ನು ತೋಟದಲ್ಲಿಯೇ ಹೂತಿಟ್ಟು ಪತಿ ಊರು ಬಿಟ್ಟಿದ್ದ. ಆದರೆ ಮೂರು ತಿಂಗಳ ಬಳಿಕ ಬೀದಿ ನಾಯಿಗಳಿಂದಾಗಿ ಆರೋಪಿ ಪತಿರಾಯ ಸಿಕ್ಕಿಬಿದ್ದಿದ್ದಾನೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಾಂತಿವಾಸು (28) ಹತ್ಯೆಯಾದವಳು. ಪವನ್ ಕುಮಾರ್ ಆರೋಪಿ. ಮೂರು ತಿಂಗಳ ಹಿಂದೆ ಪವನ್ ಕುಮಾರ್ ಹಾಗೂ ಶಾಂತಿವಾಸು ನಡುವೆ ಗಲಾಟೆ ನಡೆದಿತ್ತು. ಗಲಾಟೆ ವಿಕೋಪಕ್ಕೆ ತಿರುಗಿ ಪವನ್ ಕುಮಾರ್ ಪತ್ನಿ ಶಾಂತಿವಾಸು ಮೇಲೆ ಹಲ್ಲೆ ಮಾಡಿದ್ದ. ಗಂಭೀರ ಗಾಯಗೊಂಡಿದ್ದ ಶಾಂತಿ ಸ್ಥಳದಲ್ಲೇ ಅಸುನೀಗಿದ್ದಳು.
ಪತ್ನಿ ಮೃತಪಟ್ಟಿದ್ದಕ್ಕೆ ಹೆದರಿದ ಪವನ್ ಕುಮಾರ್ ಕೃತ್ಯ ಹೊರಗೆ ಬಂದರೆ ಜೈಲು ಸೇರುವುದು ಗ್ಯಾರಂಟಿ ಎಂದುಕೊಂಡಿದ್ದ. ಕೃತ್ಯದಿಂದ ಬಚಾವ್ ಆಗಬೇಕು ಎಂದುಕೊಂಡವನು ಮನೆಯ ಸಮೀಪದ ಹಳ್ಳದ ಪಕ್ಕದ ಗುಂಡಿಯಲ್ಲಿ ಮಣ್ಣು ತೆಗೆದು ಶವನ್ನು ಹೂತು ಹಾಕಿದ್ದ. ಬಳಿಕ ಮಕ್ಕಳೊಂದಿಗೆ ರಾತ್ರೋರಾತ್ರಿ ಬೆಂಗಳೂರಿಗೆ ಹೋಗಿದ್ದ.
ಮೂರು ತಿಂಗಳ ಕಾಲ ಆರಾಮಾಗಿದ್ದ ಆತ ನಾಯಿ ಕಾಟದಿಂದ ಸಿಕ್ಕಿಬಿದ್ದಿದ್ದಾನೆ. ನ.2ರಂದು ಏನೋ ವಾಸನೆ ಬಂದು ಬೀದಿ ನಾಯಿಗಳು ಮಣ್ಣಿನಿಂದ ಮೃತದೇಹದ ಮೂಳೆಯನ್ನು ತೆಗೆದು ಹೊರಗೆ ಎಳೆದಾಡಿದೆ. ಇದನ್ನು ತೋಟದ ಮಾಲೀಕರು ನೋಡಿದ್ದು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ನ.3ರ ಬೆಳಗ್ಗೆ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹದ ಕಳೇಬರವನ್ನು ಹೊರತೆಗೆದಿದ್ದಾರೆ. ಬಟ್ಟೆಯ ಆಧಾರದಲ್ಲಿ ಹೆಣ್ಣಿನ ಮೃತದೇಹವೆಂದು ಪತ್ತೆ ಮಾಡಿದ ಪೊಲೀಸರು ಸ್ಥಳೀಯರಲ್ಲಿ ವಿಚಾರಿಸಿದಾಗ ಪವನ್ ಕುಮಾರ್ ಬಗ್ಗೆ ಮಾಹಿತಿ ನೀಡಿದ್ದರು. ಸಕಲೇಶಪುರ ನಗರ ಠಾಣೆ ಪೊಲೀಸರು ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ್ದು ತನಿಖೆ ಮುಂದುವರಿಸಿದ್ದಾರೆ.
They fell in love with each other and got married. As a result of their love, two children were born. Meanwhile, there was a fight between the husband and wife over a trivial issue. The quarrel turned violent and he killed the husband and wife who had given him wisdom in the hands of anger. He had buried himself in the mud without anyone's knowledge and left the village. But three months later, the accused was caught by stray dogs.
27-03-25 06:41 pm
HK News Desk
Nandini Milk Rate: ಬೆಲೆ ಏರಿಕೆ ಬಿಸಿಯಿಂದ ತತ್ತರಿ...
27-03-25 04:49 pm
Yatnal, BJP, Karnataka Congress Twitter: ಈಗ '...
27-03-25 02:03 pm
BJP MLA Yatnal, Tweet: 'ಸತ್ಯವಂತರಿಗಿದು ಕಾಲವಲ್ಲ...
27-03-25 01:00 pm
BJP Yatnal Out, Vijayapura, BY Vijayendra: ಬಿ...
26-03-25 09:42 pm
27-03-25 04:07 pm
HK News Desk
ರಾಹುಲ್ ಗಾಂಧಿ ಭಾರತೀಯ ಪೌರತ್ವ ಹೊಂದಿದ್ದಾರೋ, ಇಲ್ಲ...
25-03-25 04:06 pm
Justice Yashwant Varma: ಭಾರೀ ಪ್ರಮಾಣದ ನೋಟು ಸುಟ...
24-03-25 03:54 pm
Delhi High Court judge Varma: ಹೈಕೋರ್ಟ್ ಜಡ್ಜ್...
23-03-25 02:40 pm
15 ವರ್ಷದ ಹುಡುಗನಿಂದ ಗರ್ಭವತಿ ; ಹರೆಯದಲ್ಲಿ ಮಾಡಿದ...
22-03-25 09:50 pm
27-03-25 08:45 pm
Mangalore Correspondent
Mangalore Kukke Subrahmanya Temple: ರಾಜ್ಯದ ಶ್...
27-03-25 07:53 pm
Bedra Bus Saudi, Mangalore, Moodbidri: ಸೌದಿಯಲ...
27-03-25 04:39 pm
U T Khader, Ullal, Cashew: ದೇಶದಲ್ಲಿ 90 ಶೇ. ಗೇ...
27-03-25 01:42 pm
Mangalore Anirvedha Organization: ಅನಿರ್ವೇದ ಸಂ...
26-03-25 10:02 pm
27-03-25 01:37 pm
HK News Desk
Bangalore Fake Marksheet, Arrest: ನಕಲಿ ಅಂಕಪಟ್...
26-03-25 11:19 pm
ಮನೆ ಮಾಲೀಕನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಶಂಕೆ ; ಯೋ...
26-03-25 11:08 pm
Mangalore Dharmasthala PSI P Kishor, Wife Att...
26-03-25 08:38 pm
ಸೈಬರ್ ಕೇಸಿನಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲು ಲಂಚ...
26-03-25 08:00 pm