ಬ್ರೇಕಿಂಗ್ ನ್ಯೂಸ್
04-11-23 12:39 pm Mangalore Correspondent ಕ್ರೈಂ
ಬೆಳ್ತಂಗಡಿ, ನ.4: ಗಂಡ ಹೆಂಡತಿ ಜಗಳದಲ್ಲಿ ಪತಿಯೇ ಪತ್ನಿಯನ್ನು ಕುತ್ತಿಗೆ ಹಿಸುಕಿ ಕೊಲೆಗೈದು ಬಾವಿಗೆ ತಳ್ಳಿ ಆತ್ಮಹತ್ಯೆ ನಾಟಕವಾಡಿದ ಪ್ರಕರಣ ಬೆಳಕಿಗೆ ಬಂದಿದೆ.
ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆಂಪನೊಟ್ಟು ನಿವಾಸಿ ಶಶಿಕಲಾ(27) ಮೃತ ಮಹಿಳೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿ ಸುಧಾಕರ ನಾಯ್ಕನನ್ನು ಬಂಧಿಸಿದ್ದಾರೆ.
ಇವರು ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದು ಆರು ವರ್ಷದ ಮಗಳಿದ್ದಾಳೆ. ಈ ನಡುವೆ, ಸುಧಾಕರನಿಗೆ ಬೇರೊಬ್ಬಳು ಮಹಿಳೆಯ ಜೊತೆ ಅನೈತಿಕ ಸಂಪರ್ಕ ಇದೆಯೆಂದು ಗಂಡ - ಹೆಂಡತಿ ನಡುವೆ ಜಗಳ ಉಂಟಾಗಿತ್ತು. ಇದೇ ವಿಚಾರದಲ್ಲಿ ಪತ್ನಿ ಶಶಿಕಲಾ ಮನೆಯವರು ಬಂದು ಸಮಾಧಾನ, ರಾಜಿ ಪಂಚಾತಿಕೆ ಮಾಡಿ ಹೋಗುತ್ತಿದ್ದರು. ನ.3ರಂದು ಬೆಳಗ್ಗೆ ಸುಧಾಕರ ನಾಯ್ಕ ರಬ್ಬರ್ ಟ್ಯಾಪಿಂಗ್ ಮಾಡಿ ಬೇಗನೇ ಮನೆಗೆ ಬಂದಿದ್ದ. ಏಳು ಗಂಟೆಗೆ ಮನೆಗೆ ಬಂದಾಗ, ಪತ್ನಿ ಶಶಿಕಲಾ ಗಂಡನನ್ನು ಪ್ರಶ್ನೆ ಮಾಡಿದ್ದಳು. ಇವತ್ತು ಯಾಕೆ ಬೇಗ ಬಂದಿದ್ದೀರಾ.. ನಾನು ಕೆಲಸಕ್ಕೆ ಹೋದ ನಂತರ ಯಾರಾದ್ರೂ ಹೆಂಗಸರು ಮನೆಗೆ ಬರುತ್ತಾರೆಯೇ ಎಂದು ಪ್ರಶ್ನೆ ಮಾಡಿದ್ದಳು.
ಈ ಬಗ್ಗೆ ಮಾತಿಗೆ ಮಾತು ಬೆಳೆದು ಸುಧಾಕರ ಮತ್ತು ಶಶಿಕಲಾ ನಡುವೆ ಜಗಳವಾಗಿದ್ದು ಪತಿಯೇ ಪತ್ನಿಯ ಕುತ್ತಿಗೆ ಹಿಸುಕಿ ಕೊಲೆಗೆ ಯತ್ನಿಸಿದ್ದಾನೆ. ಪ್ರಜ್ಞೆ ತಪ್ಪಿ ಬಿದ್ದ ಪತ್ನಿಯನ್ನು ನೀನು ಬದುಕಿರಬಾರದೆಂದು ಮನೆಯಂಗಳದ ಬಾವಿಗೆ ಎತ್ತಿ ಹಾಕಿ ಕೊಲೆ ಮಾಡಿದ್ದಾನೆ ಎಂದು ಶಶಿಕಲಾ ಅವರ ಸೋದರ ಶಶಿಧರ್ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಆರೋಪಿ ಸುಧಾಕರ, ಪತ್ನಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿ ನಾಟಕ ಮಾಡಿದ್ದು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯ ಬಯಲಾಗಿದೆ.
Belthangady, Husband murders wife dumps her into well for questioning his illicit affair.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
24-03-26 05:34 pm
HK News Staffer
ಸಜಿಪನಡು ತಲೆಮೊಗರು ಮಸೀದಿಯಲ್ಲಿ ಗಲಾಟೆ ; ಆಡಳಿತ ವಿಚ...
24-03-26 11:55 am
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
ಕಾಸರಗೋಡು ಅಖಾಡ ರೆಡಿ ; ಎಲ್ ಡಿಎಫ್ ನಿಂದ ಶಾನವಾಸ್ ಪ...
23-03-26 05:36 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm