ಬ್ರೇಕಿಂಗ್ ನ್ಯೂಸ್
04-11-23 12:39 pm Mangalore Correspondent ಕ್ರೈಂ
ಬೆಳ್ತಂಗಡಿ, ನ.4: ಗಂಡ ಹೆಂಡತಿ ಜಗಳದಲ್ಲಿ ಪತಿಯೇ ಪತ್ನಿಯನ್ನು ಕುತ್ತಿಗೆ ಹಿಸುಕಿ ಕೊಲೆಗೈದು ಬಾವಿಗೆ ತಳ್ಳಿ ಆತ್ಮಹತ್ಯೆ ನಾಟಕವಾಡಿದ ಪ್ರಕರಣ ಬೆಳಕಿಗೆ ಬಂದಿದೆ.
ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆಂಪನೊಟ್ಟು ನಿವಾಸಿ ಶಶಿಕಲಾ(27) ಮೃತ ಮಹಿಳೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿ ಸುಧಾಕರ ನಾಯ್ಕನನ್ನು ಬಂಧಿಸಿದ್ದಾರೆ.
ಇವರು ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದು ಆರು ವರ್ಷದ ಮಗಳಿದ್ದಾಳೆ. ಈ ನಡುವೆ, ಸುಧಾಕರನಿಗೆ ಬೇರೊಬ್ಬಳು ಮಹಿಳೆಯ ಜೊತೆ ಅನೈತಿಕ ಸಂಪರ್ಕ ಇದೆಯೆಂದು ಗಂಡ - ಹೆಂಡತಿ ನಡುವೆ ಜಗಳ ಉಂಟಾಗಿತ್ತು. ಇದೇ ವಿಚಾರದಲ್ಲಿ ಪತ್ನಿ ಶಶಿಕಲಾ ಮನೆಯವರು ಬಂದು ಸಮಾಧಾನ, ರಾಜಿ ಪಂಚಾತಿಕೆ ಮಾಡಿ ಹೋಗುತ್ತಿದ್ದರು. ನ.3ರಂದು ಬೆಳಗ್ಗೆ ಸುಧಾಕರ ನಾಯ್ಕ ರಬ್ಬರ್ ಟ್ಯಾಪಿಂಗ್ ಮಾಡಿ ಬೇಗನೇ ಮನೆಗೆ ಬಂದಿದ್ದ. ಏಳು ಗಂಟೆಗೆ ಮನೆಗೆ ಬಂದಾಗ, ಪತ್ನಿ ಶಶಿಕಲಾ ಗಂಡನನ್ನು ಪ್ರಶ್ನೆ ಮಾಡಿದ್ದಳು. ಇವತ್ತು ಯಾಕೆ ಬೇಗ ಬಂದಿದ್ದೀರಾ.. ನಾನು ಕೆಲಸಕ್ಕೆ ಹೋದ ನಂತರ ಯಾರಾದ್ರೂ ಹೆಂಗಸರು ಮನೆಗೆ ಬರುತ್ತಾರೆಯೇ ಎಂದು ಪ್ರಶ್ನೆ ಮಾಡಿದ್ದಳು.
ಈ ಬಗ್ಗೆ ಮಾತಿಗೆ ಮಾತು ಬೆಳೆದು ಸುಧಾಕರ ಮತ್ತು ಶಶಿಕಲಾ ನಡುವೆ ಜಗಳವಾಗಿದ್ದು ಪತಿಯೇ ಪತ್ನಿಯ ಕುತ್ತಿಗೆ ಹಿಸುಕಿ ಕೊಲೆಗೆ ಯತ್ನಿಸಿದ್ದಾನೆ. ಪ್ರಜ್ಞೆ ತಪ್ಪಿ ಬಿದ್ದ ಪತ್ನಿಯನ್ನು ನೀನು ಬದುಕಿರಬಾರದೆಂದು ಮನೆಯಂಗಳದ ಬಾವಿಗೆ ಎತ್ತಿ ಹಾಕಿ ಕೊಲೆ ಮಾಡಿದ್ದಾನೆ ಎಂದು ಶಶಿಕಲಾ ಅವರ ಸೋದರ ಶಶಿಧರ್ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಆರೋಪಿ ಸುಧಾಕರ, ಪತ್ನಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿ ನಾಟಕ ಮಾಡಿದ್ದು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯ ಬಯಲಾಗಿದೆ.
Belthangady, Husband murders wife dumps her into well for questioning his illicit affair.
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm