ಬ್ರೇಕಿಂಗ್ ನ್ಯೂಸ್
09-11-23 02:49 pm Mangalore Correspondent ಕ್ರೈಂ
ಮಂಗಳೂರು, ನ.9: ಬಿಜೈ ರಾಜಾ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ರವಿ ಪೂಜಾರಿಯನ್ನು ಖುಲಾಸೆಗೊಳಿಸಿ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
2012ನೇ ಇಸವಿಯಲ್ಲಿ ರವಿ ಪೂಜಾರಿ ಮತ್ತು ಸಹಚರರು ಒಳಸಂಚು ನಡೆಸಿ, ಶೈಲೇಶ್ ರಾಜ ಅಲಿಯಾಸ್ ಬಿಜೈ ರಾಜನನ್ನು ತಲವಾರಿನಿಂದ ಕಡಿದು ಕೊಲೆ ಮಾಡಿಸಿದ ಬಗ್ಗೆ ಮಂಗಳೂರಿನ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ರವಿ ಪೂಜಾರಿ ಮತ್ತು ಅತನ ಸಹಚರರ ಮೇಲೆ ದೋಷರೋಪಣಾ ಪಟ್ಟಿ ಸಲ್ಲಿಸಿದ್ದರು.
ಕೊಲೆ ನಡೆದ ಸಂದರ್ಭದಲ್ಲಿ ರವಿ ಪೂಜಾರಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. ಆನಂತರ 2021ರಲ್ಲಿ ರವಿ ಪೂಜಾರಿಯನ್ನು ಸೆನೆಗಲ್ನಲ್ಲಿ ಬಂಧಿಸಿದ್ದು, ತದನಂತರ ಭಾರತಕ್ಕೆ ಹಸ್ತಾಂತರಿಸಲಾಗಿತ್ತು. ಭಾರತಕ್ಕೆ ಹಸ್ತಾಂತರಿಸಿದ ನಂತರ ಆತನ ವಿರುದ್ಧ ದಾಖಲಾದ ಎಲ್ಲ ಪ್ರಕರಣಗಳಲ್ಲಿ ಪೊಲೀಸರು ಹೆಚ್ಚುವರಿ ತನಿಖೆ ನಡೆಸಿ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ರವಿ ಪೂಜಾರಿ ವಿರುದ್ಧ ದಾಖಲಾದ ಎರಡು ಪ್ರಕರಣಗಳಲ್ಲಿ ಪ್ರಿನ್ಸಿಪಾಲ್ ಸೀನಿಯರ್ ಸಿವಿಲ್ ಜಡ್ಜ್ ಹಾಗೂ ಒಂದು ಪ್ರಕರಣದಲ್ಲಿ ಜೆಎಂಎಫ್ ಸಿ ನ್ಯಾಯಾಲಯ ಒಟ್ಟು 4 ಪ್ರಕರಣಗಳಲ್ಲಿ ರವಿ ಪೂಜಾರಿಯನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ. ರವಿ ಪೂಜಾರಿ ವಿರುದ್ಧ ಹಲವು ಪ್ರಕರಣಗಳು ಮಂಗಳೂರು ಹಾಗೂ ಬೆಂಗಳೂರಿನಲ್ಲಿ ತನಿಖೆಗೆ ಬಾಕಿ ಇರುತ್ತದೆ. ರವಿ ಪೂಜಾರಿ ಪರವಾಗಿ ಮಂಗಳೂರಿನ ಖ್ಯಾತ ವಕೀಲ ಬಿ. ಅರುಣ್ ಬಂಗೇರ ಮತ್ತು ರಿಹಾನಾ ಪರ್ವೀನ್ ವಾದಿಸಿದ್ದರು.
Mangalore Bejai Raja murder, Underworld don Ravi Poojary acquitted from four cases. Bejai Raja (46), who was an accused in two murder cases was hacked to death by a group of three unidentified persons in the ground floor of Westgate Terminus building in Mangalore.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm