ಬ್ರೇಕಿಂಗ್ ನ್ಯೂಸ್
13-11-20 04:38 pm Headline Karnataka News Network ಕ್ರೈಂ
ಮುಂಬೈ, ನವೆಂಬರ್ 13: ಎಟಿಎಂ ಮೆಷೀನ್ ಗೆ ಹಣ ತುಂಬಲು ಬಂದಿದ್ದ ವೇಳೆ ವ್ಯಾನ್ ಚಾಲಕ ವಾಹನದಲ್ಲಿದ್ದ 4.25 ಕೋಟಿ ರೂಪಾಯಿ ಹಣದ ಜೊತೆಗೆ ಪರಾರಿಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ವಿರಾರ್ ನ ಬೋಲಿಂಜ್ ನಲ್ಲಿ ಘಟನೆ ನಡೆದಿದ್ದು, ಬ್ಯಾಂಕ್ ಸಿಬಂದಿ ವಾಹನ ನಿಲ್ಲಿಸಿ ಕೋಟಕ್ ಮಹೀಂದ್ರಾ ಎಟಿಎಂ ಒಳಗೆ ತೆರಳಿದ್ದರು. ಗಾರ್ಡ್ ಕೂಡ ವಾಹನದಿಂದ ಇಳಿದು ಹೊರಗೆ ನಿಂತಿದ್ದರು. ಈ ವೇಳೆ, ವಾಹನದಲ್ಲಿ ಕೋಟ್ಯಂತರ ರೂ. ಹಣ ಇರುವುದನ್ನು ತಿಳಿದಿದ್ದ ಚಾಲಕ ವ್ಯಾನ್ ಸಹಿತ ಮುಂದಕ್ಕೆ ಹೋಗಿದ್ದು, ಆನಂತರ ಪರಾರಿಯಾಗಿದ್ದಾನೆ.
ಘಟನೆ ಬ್ಯಾಂಕ್ ಸಿಬಂದಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದಾರೆ. ಆದರೆ, ಪೊಲೀಸರ ಪ್ರಕಾರ, ಚಾಲಕನ ಹೆಸರು, ಮಾಹಿತಿ ನೀಡಿಲ್ಲ. ವಾಹನದಲ್ಲಿ ಜಿಪಿಎಸ್ ಅಳವಡಿಸಿದ್ದು, ಅದರ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದೀಪಾವಳಿ ಸಂದರ್ಭದಲ್ಲಿ ಬ್ಯಾಂಕ್ ರಜೆ ಇರುವುದರಿಂದ ಎಟಿಎಂಗೆ ಹಣ ತುಂಬಿಸುವುದಕ್ಕಾಗಿ ಸಿಬಂದಿ ಮುಂದಾಗಿದ್ದರು. ಬೇರೆ ಬೇರೆ ಎಟಿಎಂಗೆ ಹಣ ತುಂಬಿಸುವ ಕಾರ್ಯವನ್ನು ಲಾಜಿಸ್ಟಿಕ್ಸ್ ಕಂಪನಿ ನಿರ್ವಹಿಸುತ್ತದೆ.
ಆರೋಪಿ ಚಾಲಕ ವ್ಯಾನನ್ನು ನಿಲ್ಲಿಸಿ ಟ್ರಂಕ್ ನಲ್ಲಿರುವ ಹಣವನ್ನು ಬೇರೆ ವಾಹನಕ್ಕೆ ತುಂಬಿಸಿ ಎಸ್ಕೇಪ್ ಆಗಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಆತನ ಜೊತೆಗಿದ್ದ ಸೆಕ್ಯುರಿಟಿ ಗಾರ್ಡ್ ಮತ್ತು ಸಿಬಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
The driver of a cash logistics firm allegedly fled with a van containing nearly Rs 4.3 crore as his colleagues were filling an ATM in Virar, Mumbai.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am