ಬ್ರೇಕಿಂಗ್ ನ್ಯೂಸ್
12-11-23 12:42 pm Udupi Correspondent ಕ್ರೈಂ
ಉಡುಪಿ, ನ 13: ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹಂಪನಕಟ್ಟೆ ಸಮೀಪದ ನೇಜಾರಿನ ತೃಪ್ತಿ ಲೇಔಟ್ನಲ್ಲಿ ಭಾನುವಾರ ನಡೆದಿದೆ.
ಕೊಲೆಯಾದವರನ್ನು ಹಸೀನಾ (46 ), ಅಫ್ನಾನ್ (23), ಅಯ್ನಾಝ್ (21), ಆಸಿಂ (12) ಎಂದು ಗುರುತಿಸಲಾಗಿದೆ. ಚೂರಿಯಿಂದ ಚುಚ್ಚಿ ಕೊಲೆಗೈಯಲಾಗಿದೆ. ಮೃತ ಹಸೀನಾ ಅವರ ಅತ್ತೆಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವ ಉದ್ದೇಶಕ್ಕೆ ಕೊಲೆಯಾಗಿದೆ ಎಂಬುದು ತನಿಖೆಯಿಂದ ತಿಳಿಯಬೇಕಿದೆ.

ಮನೆಯಲ್ಲಿ ಯಾವ ವಸ್ತುಗಳು ಕಳವು ನಡೆದಿಲ್ಲ. ಅಪರಿಚಿತ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿ ಬಂದು ಈ ಕೃತ್ಯ ಎಸಗಿರುವ ಮಾಹಿತಿ ಲಭ್ಯವಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಏಕಾಏಕಿ ಮನೆಗೆ ನುಗ್ಗಿದ ದುಷ್ಕರ್ಮಿ ಮಾತಿನ ಚಕಮಕಿ ನಡೆಸಿದ್ದಾನೆ. ಮೊದಲು ಹಸೀನಾ, ಅಫ್ನಾನ್ ಹಾಗೂ ಅಯ್ನಾಝ್ಗೆ ಇರಿದಿದ್ದಾನೆ. ಈ ವೇಳೆ ಹೊರಗಡೆ ಆಟವಾಡುತ್ತಿದ್ದ ಆಸಿಂ ಸದ್ದು ಕೇಳಿ ಮನೆ ಒಳಗಡೆ ಬಂದಿದ್ದಾನೆ. ನಂತರ ಕಿರಿಯ ಮಗನನ್ನೂ ಕೊಂದಿದ್ದಾನೆ.
ಇದಾದ ಬಳಿಕ ಗಲಾಟೆ ಕೇಳಿ ಪಕ್ಕದ ಮನೆಯ ಯುವತಿ ತನ್ನ ಮನೆಯಿಂದ ಹೊರ ಬಂದಿದ್ದಾಳೆ. ದುಷ್ಕರ್ಮಿ ಆಕೆಯನ್ನೂ ಬೆದರಿಸಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಮನೆಯೊಳಗಿದ್ದ ಹಸೀನಾ ಅತ್ತೆಗೂ ತೀವ್ರವಾದ ಗಾಯಗಳಾಗಿವೆ. ಹಸೀನಾ ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಅವರ ಅನುಪಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ನಡೆದಿದೆ.
ಎಲ್ಲ ಆಯಾಮಗಳಿಂದ ತನಿಖೆ ನಡೆಸುತ್ತಿದ್ದು, ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುವುದು ಎಂದು ಎಸ್ಪಿ ಅರುಣ್ ತಿಳಿಸಿದ್ದಾರೆ.
Udupi Murder, Four including Two children brutally murdered in Hampankatte. four individuals, including a mother and her three children , were found brutally murdered in Hampankatte of Kemmannu, falling under the jurisdiction of the Malpe police station.
13-08-26 07:14 pm
HK News Staffer
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm