ಬ್ರೇಕಿಂಗ್ ನ್ಯೂಸ್
22-11-23 12:12 pm HK News Desk ಕ್ರೈಂ
ಮಹಾರಾಷ್ಟ್ರ, ನ 22: ಏಕದಿನ ವಿಶ್ವಕಪ್ನಲ್ಲಿ ಭಾರತ ಕ್ರಿಕೆಟ್ ತಂಡ ಮತ್ತು ಅಭಿಮಾನಿಗಳಿಗೆ ನವೆಂಬರ್ 19 ಅತ್ಯಂತ ಕೆಟ್ಟ ದಿನವಾಗಿದೆ. ಟೀಂ ಇಂಡಿಯಾವನ್ನು ಸೋಲಿಸಿದ ಆಸ್ಟ್ರೇಲಿಯಾ ಚಾಂಪಿಯನ್ ಆಗಿದ್ದು ಅಸಾಧ್ಯ ಬೇಸರ ತಂದಿದೆ. ಅಭಿಮಾನಿಗಳಿಗೆ ಬರಸಿಡಿಲು ಬಡಿದಂತಾಗಿದ್ದು, ಕೆಲ ಅನಾಹುತಗಳಿಗೂ ದಾರಿ ಮಾಡಿಕೊಟ್ಟಿದೆ.
ಮಹಾರಾಷ್ಟ್ರದ ಅಮರಾವತಿಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಭಾರತ ಫೈನಲ್ನಲ್ಲಿ ಸೋತಿದ್ದರಿಂದ ಹಿರಿಯ ಪುತ್ರನೊಬ್ಬ ತನ್ನ ತಂದೆ ಮತ್ತು ಕಿರಿಯ ಸಹೋದರನ ಮೇಲೆ ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿದ್ದಾನೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಹೋದರ ಅಂಕಿತ್ ಇಂಗೋಲ್ ಮೃತಪಟ್ಟಿದ್ದು, ತಂದೆಯ ಸ್ಥಿತಿ ಚಿಂತಾಜನಕವಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಆಘಾತಕಾರಿ ಘಟನೆ ಎಲ್ಲೆಡೆ ಸಂಚಲನ ಮೂಡಿಸಿದ್ದು, ಬದನೇರಾ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಮೃತ ಅಂಕಿತ್ ಇಂಗೋಲ್ ಮತ್ತು ಆರೋಪಿ ಪ್ರವೀಣ್ ಇಂಗೋಲ್, ಈತನ ತಂದೆ ರಮೇಶ ಇಂಗೋಳೆ ಮೂವರೂ ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ಫೈನಲ್ ಪಂದ್ಯವನ್ನು ಮನೆಯಲ್ಲಿ ಟಿವಿಯಲ್ಲಿ ವೀಕ್ಷಿಸಿದ್ದಾರೆ. ಪಂದ್ಯದ ನೋಡುತ್ತಿದ್ದಾಗಲೇ ಮೂವರು ಮದ್ಯಪಾನ ಮಾಡಿದ್ದಾರೆ ಎಂದು ಹೇಳಲಾಗಿದೆ.
ಭಾರತ ಪಂದ್ಯ ಸೋತಿದ್ದರಿಂದ ರಾತ್ರಿ ಇಬ್ಬರು ಸಹೋದರರ ಮಧ್ಯೆ ಕಿತ್ತಾಟ ನಡೆದಿದೆ. ನೀನು ಮಟನ್ (ಕುರಿ ಮಾಂಸ) ತಿಂದ ಕಾರಣ ಟೀಂ ಇಂಡಿಯಾ ಸೋಲು ಕಂಡಿತು ಎಂದು ಹಿರಿಯ ಸಹೋದರ ಪ್ರವೀಣ್, ತಮ್ಮನೊಂದಿಗೆ ಜಗಳ ಕಾದಿದ್ದಾನೆ. ಇಬ್ಬರ ಜಗಳ ಬಿಡಿಸಲು ತಂದೆ ರಮೇಶ್ ಮಧ್ಯಪ್ರವೇಶಿಸಿ ಪ್ರವೀಣನ ಮೊಬೈಲ್ ಕಸಿದುಕೊಂಡಿದ್ದಾನೆ. ಇಷ್ಟಕ್ಕೆ ಕುಪಿತನಾದ ಆರೋಪಿ ಮನೆಯಲ್ಲಿದ್ದ ಕಬ್ಬಿಣದ ರಾಡ್ನಿಂದ ಇಬ್ಬರ ಮೇಲೂ ಹಲ್ಲೆ ಮಾಡಿದ್ದಾನೆ.
ತಲೆಗೆ ಗಂಭೀರ ಗಾಯವಾಗಿ ಕಿರಿಯ ಸಹೋದರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತಂದೆಗೂ ರಾಡ್ನಿಂದ ಹೊಡೆದಿದ್ದಾನೆ. ಇದರಿಂದ ಅವರ ತೀವ್ರ ಗಾಯಗೊಂಡಿದ್ದಾರೆ. ಬಳಿಕ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕುಡಿದ ಮತ್ತಿನಲ್ಲಿ ಇಬ್ಬರ ಮೇಲೆ ದಾಳಿ ಮಾಡಿ ತಮ್ಮನನ್ನು ಬಲಿಪಡೆದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
According to the information received, the elder son attacked his father and younger brother with an iron rod. Ankit Ingole, who was seriously injured in the incident, died, while the father’s condition is still critical. This heart-wrenching incident has spread sensation everywhere. In this case, Badnera police have registered a case of murder and arrested the accused.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm