ಬ್ರೇಕಿಂಗ್ ನ್ಯೂಸ್
25-11-23 09:56 pm Mangalore Correspondent ಕ್ರೈಂ
ಮಂಗಳೂರು, ನ.25: ಸ್ಕಾರ್ಪಿಯೋ ಕಾರು ಚಾಲಕನೊಬ್ಬ ಮಧ್ಯರಾತ್ರಿ ಬೈಕಿಗೆ ಡಿಕ್ಕಿಯಾಗಿ ಸವಾರ ನೆಲಕ್ಕುರುಳಿದರೂ ಸ್ಥಳದಿಂದ ಪರಾರಿಯಾದ ಘಟನೆ ನಗರದ ಯೆಯ್ಯಾಡಿಯಲ್ಲಿ ನಡೆದಿದೆ. ಅಪಘಾತದಲ್ಲಿ ತೀವ್ರ ಗಾಯಗೊಂಡು ರಸ್ತೆಗೆ ಬಿದ್ದ ಬೈಕ್ ಸವಾರನನ್ನು ಇತರೇ ಕಾರು ಚಾಲಕರು ಕಂಡರೂ ಕಾಣದೆ ನಿರ್ಲಕ್ಷ್ಯ ತೋರಿದ್ದಾರೆ.
ನ.21ರಂದು ನಡುರಾತ್ರಿ 12.15ರ ಸುಮಾರಿಗೆ ಘಟನೆ ನಡೆದಿದ್ದು ಸವಾರ ಬೊಂದೇಲ್ ನಿವಾಸಿ ಆಲಿಸ್ಟರ್ ತೌರೊ (24) ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಫಂಕ್ಷನ್ ಮುಗಿಸಿ ನಡುರಾತ್ರಿಯಲ್ಲಿ ಬೈಕಿನಲ್ಲಿ ಮನೆಯತ್ತ ಹೊರಟಿದ್ದರೆ, ಯೆಯ್ಯಾಡಿ ಬಳಿ ಸ್ಕಾರ್ಪಿಯೊ ಚಾಲಕ ನೇರವಾಗಿ ತಿರುವು ಪಡೆದಿದ್ದ. ಇದನ್ನು ಗಮನಿಸದೆ ಬೈಕ್ ನೇರವಾಗಿ ಡಿಕ್ಕಿಯಾಗಿದ್ದು ರಸ್ತೆಗೆ ಎಸೆಯಲ್ಪಟ್ಟ ಸವಾರ ಆಲಿಸ್ಟರ್ ತೌರೊ ಮತ್ತು ಹಿಂಬದಿ ಸವಾರ ಲಾಯ್ಡ್ ಗಾಯಗೊಂಡಿದ್ದಾರೆ.


ರಸ್ತೆಗೆ ಬಿದ್ದು ಇಬ್ಬರು ಯುವಕರು ನರಳುತ್ತಿದ್ದರೂ, ಅದರ ಬೆನ್ನಲ್ಲೇ ಇನ್ನೊಬ್ಬ ಸ್ವಿಫ್ಟ್ ಕಾರು ಅದೇ ದಾರಿಯಲ್ಲಿ ಬಂದಿದ್ದು ಅದರ ಚಾಲಕ ನೋಡಿಯೂ ಕರುಣೆ ತೋರದೆ ಸ್ಥಳದಿಂದ ತೆರಳಿದ್ದಾನೆ. ಸ್ವಲ್ಪ ಹೊತ್ತಿನ ಬಳಿಕ ಸ್ಥಳೀಯರು ಬಂದಿದ್ದು ಗಾಯಗೊಂಡಿದ್ದ ಯುವಕರನ್ನು ಎತ್ತಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಲಿಸ್ಟರ್ ತೌರೊ ಸ್ಥಿತಿ ಗಂಭೀರವಾಗಿದ್ದು ಮುಖ, ತಲೆಗೆ ಏಟಾಗಿದೆ. ಕೈ ಮುರಿದಿದ್ದು ಶಸ್ತ್ರಚಿಕಿತ್ಸೆ ನಡೆಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬಗ್ಗೆ ಕದ್ರಿ ಸಂಚಾರಿ ಠಾಣೆಯಲ್ಲಿ ಹಿಟ್ ಅಂಡ್ ರನ್ ಕೇಸು ದಾಖಲಾಗಿದ್ದು ಕಾರನ್ನು ವಶಕ್ಕೆ ಪಡೆಯಲಾಗಿದೆ.
ಡೆಕೊರೇಶನ್ ಕೆಲಸ ಮಾಡುತ್ತಿದ್ದ ಆಲಿಸ್ಟರ್ ತೌರೊ ಬಡ ಕುಟುಂಬದ ಯುವಕನಾಗಿದ್ದು ಆಸ್ಪತ್ರೆ ಖರ್ಚು ಭರಿಸಲು ದಾನಿಗಳ ಸಹಾಯ ಯಾಚಿಸಿದ್ದಾರೆ. ಈತನ ಸೋದರ ಆಸ್ಪತ್ರೆಯಲ್ಲಿದ್ದು ನೋಡಿಕೊಳ್ಳುತ್ತಿದ್ದಾರೆ. ಸಹೃದಯರು ಇವರ ಗೂಗಲ್ ಪೇ ಅಥವಾ ಬ್ಯಾಂಕ್ ಖಾತೆಗೆ ನೆರವು ನೀಡುವಂತೆ ಕೇಳಿಕೊಂಡಿದ್ದಾರೆ. Google Pay: Astel Touro - 7795924633
Mangalore Yeyyadi accident, 24 year old youth Astel Touro admitted in hospital in serious condition. Video of the accident has gone viral on social media.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm