ಬ್ರೇಕಿಂಗ್ ನ್ಯೂಸ್
30-11-23 07:35 pm Bangalore Correspondent ಕ್ರೈಂ
ಬೆಂಗಳೂರು, ನ 30: ನವಜಾತ ಶಿಶು ಮಾರಾಟ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರಿಂದ ಬಂಧಿತರಾದ 10 ಮಂದಿ ಆರೋಪಿಗಳ ವಿಚಾರಣೆ ವೇಳೆ ಮಹತ್ವದ ಮಾಹಿತಿ ಲಭ್ಯವಾಗಿದೆ. ಕಳೆದ ಶುಕ್ರವಾರ ಆರ್.ಆರ್. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಮಸ್ವಾಮಿ ಕಣ್ಣನ್, ಹೇಮಲತಾ, ಶರಣ್ಯ ಹಾಗೂ ಮುರುಗೇಶ್ವರಿ ಎಂಬುವರು 20 ದಿನದ ಗಂಡು ಶಿಶುವನ್ನು ಮಾರಾಟಕ್ಕೆ ಮುಂದಾಗಿದ್ದಾಗ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದರು. ಬಳಿಕ ಮಹಾಲಕ್ಷ್ಮೀ, ರಾಧಾ, ಕೇವಿನ್ ಸೇರಿ ಐವರನ್ನು ವಿಚಾರಣೆ ಮಾಡಿದ್ದರು.
ಬಂಧಿತರ ವಿಚಾರಣೆಯಿಂದ ದಿನೆ ದಿನೆ ಹೊಸ ವಿಚಾರಗಳು ಬೆಳಕಿಗೆ ಬರ್ತಿವೆ. ಹಲವು ವರ್ಷಗಳಿಂದ ಪುಟ್ಟ ಕಂದಮ್ಮಗಳನ್ನು ಕರ್ನಾಟಕ ಸೇರಿ ಬೇರೆ ರಾಜ್ಯಗಳಲ್ಲಿ ಕಳ್ಳಸಾಗಾಣಿಕೆ ಮಾಡುತ್ತಿದ್ದರು. ಸದ್ಯ ಸಿಸಿಬಿ ಪೊಲೀಸರು ಆರೋಪಿಗಳನ್ನು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದು, ಈ ವೇಳೆ 6 ವರ್ಷಗಳಲ್ಲಿ ಬರೋಬ್ಬರಿ 250ಕ್ಕೂ ಹೆಚ್ಚು ಮಕ್ಕಳ ಮಾರಾಟ ಮಾಡಿರೋದಾಗಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಇನ್ನು ಕರ್ನಾಟಕದಲ್ಲಿ ಕೇವಲ 50-60 ಮಕ್ಕಳನ್ನು ಮಾರಾಟ ಮಾಡಿದ್ದು, ಉಳಿದ ಕಂದಮ್ಮಗಳನ್ನು ತಮಿಳುನಾಡಿನಲ್ಲಿ ಮಾರಾಟ ಮಾಡಿರುವುದಾಗಿ ಹೇಳಿದ್ದಾರೆ.
ಸದ್ಯ ಕರ್ನಾಟಕದಲ್ಲಿ ಮಾರಾಟ ಆಗಿರೋ ಮಕ್ಕಳ ಬಗ್ಗೆ ಮಾಹಿತಿ ಕಲೆಹಾಕುತ್ತಿರುವ ಸಿಸಿಬಿಗೆ ಕೇವಲ ಹತ್ತು ಮಕ್ಕಳ ಬಗ್ಗೆ ಮಾಹಿತಿ ಸಿಕ್ಕಿದ್ದು, ಉಳಿದ ಮಕ್ಕಳನ್ನು ಯಾರಿಗೆ ಕೊಟ್ಟಿದ್ದಾರೆ ಅನ್ನೋದರ ಬಗ್ಗೆ ತನಿಖೆ ಮುಂದುವರೆಸಿದ್ದಾರೆ.
ಕರ್ನಾಟಕದ ಮೇನ್ ಕಿಂಗ್ ಪಿನ್, ಕಮ್ ಗ್ಯಾಂಗ್ ಲೀಡರ್ ಮಹಾಲಕ್ಷ್ಮೀಯ ಕಥೆಯೇ ಒಂದು ರೋಚಕ. ಏನೂ ಇಲ್ಲದೆ ದುಡಿಮೆಗೆಂದು ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡಿಕೊಂಡಿದ್ದ ಈಕೆ 2015 ರಿಂದ 2017ರ ವರೆಗೆ ಕೇವಲ 8 ಸಾವಿರ ರೂ. ಸಂಬಳಕ್ಕೆ ಕೆಲಸ ಮಾಡುತ್ತಿದ್ದಳು. ಈ ವೇಳೆ ಈಕೆಗೆ ಪರಿಚಯ ಆದ ಮಹಿಳೆಯೊಬ್ಬಳು ಅಂಡಾಣು ಕೊಟ್ಟರೆ ಹಣ ಕೊಡೋದಾಗಿ ಹೇಳಿದ್ದಳು. ಆಗ ಅಂಡಾಣು ನೀಡಿದ್ದ ಮಹಾಲಕ್ಷ್ಮೀಗೆ ಸುಮಾರು 20 ಸಾವಿರ ಮಹಿಳೆ ನೀಡಿದ್ದಳು. ಹಣದ ರುಚಿ ನೋಡಿದ ಮಹಾಲಕ್ಷ್ಮಿ ನಂತರ ದಿನಗಳಲ್ಲಿ ಅಂಡಾಣು ಕೊಡುವವರನ್ನು ಪತ್ತೆ ಮಾಡಿ ಅದರಿಂದ ಕಮೀಷನ್ ಪಡೆಯುವ ಕೆಲಸ ಮಾಡುತ್ತಿದ್ದಳು. ಇನ್ನು 2017 ರಿಂದಲೂ ಈ ದಂಧೆಯನ್ನ ಶುರುಮಾಡಿದ್ದ ಮಹಾಲಕ್ಷ್ಮೀ ಹಿಂದೆ ತಿರುಗಿ ನೋಡಿರಲಿಲ್ಲ. ಇದೀಗ ಪ್ರಕಣದ ಬಗ್ಗೆ ಸಿಸಿಬಿ ಫುಲ್ ಗ್ರಿಲ್ ಮಾಡುತ್ತಿದ್ದಾರೆ. ಮಹಾಲಕ್ಷ್ಮಿ ಸೇರಿದಂತೆ ಆರೋಪಿಗಳ ವಿಚಾರಣೆ ಮುಂದುವರೆದಿದೆ.
In a recent crackdown, the Central Crime Branch (CCB) officials apprehended three more individuals in connection with a case involving the sale of newborn babies. This revelation has raised suspicions about reputed hospitals and doctors in Tamil Nadu and Karnataka being part of this illicit network.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm