ಬ್ರೇಕಿಂಗ್ ನ್ಯೂಸ್
06-12-23 10:42 pm Mangalore Correspondent ಕ್ರೈಂ
ಮಂಗಳೂರು, ಡಿ.6: ರಾಯಲ್ ಟ್ರಾವಂಕೂರ್ ಹೆಸರಿನ ಹಣಕಾಸು ಸಂಸ್ಥೆಯಲ್ಲಿ ಠೇವಣಿದಾರರಿಗೆ ವಂಚನೆ ಆಗಿದೆ ಎಂಬ ಆರೋಪ ಕೇಳಿಬಂದಿದ್ದು, ಹಣ ಕಳಕೊಂಡ ಗ್ರಾಹಕರು ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ಮಂಗಳೂರು ನಗರದ ಪಿವಿಎಸ್ ವೃತ್ತದಲ್ಲಿ ರಾಯಲ್ ಟ್ರಾವಂಕೂರ್ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪನಿ ಹೆಸರಿನ ಹಣಕಾಸು ಸಂಸ್ಥೆಯಿದ್ದು, ಸೊಸೈಟಿ ಮಾದರಿಯಲ್ಲಿ ಕಾರ್ಯ ನಿರ್ವಹಿಸುತ್ತಿತ್ತು. ಸರಿಯಾಗಿ ಒಂದು ವರ್ಷದ ಹಿಂದೆ ಮಂಗಳೂರಿನಲ್ಲಿ ಹೊಸ ಕಚೇರಿ ಆರಂಭಗೊಂಡಿತ್ತು. ಮಂಗಳೂರಿನಲ್ಲಿ ಪ್ರತಿ ದಿನ ಪಿಗ್ಮಿ ಕಲೆಕ್ಷನ್ ಆಗುತ್ತಿದ್ದರಿಂದ ಹೆಚ್ಚಾಗಿ ಅಂಗಡಿ, ವ್ಯಾಪಾರಸ್ಥರೇ ಇದರ ಗ್ರಾಹಕರಾಗಿದ್ದರು.

ಹಂಪನಕಟ್ಟೆಯ ದುಬೈ ಮಾರ್ಕೆಟ್ ನಲ್ಲಿ ಮೊಬೈಲ್ ಅಂಗಡಿ ಹೊಂದಿರುವ ಅಬ್ದುಲ್ ಅಜೀಜ್ ಎಂಬವರು 70 ಸಾವಿರ ಕಳಕೊಂಡಿದ್ದು, ಆಯುಕ್ತರಿಗೆ ದೂರು ನೀಡಲು ಹೋದವರಲ್ಲಿ ಒಬ್ಬರು. ಅವರು ಹೇಳುವ ಪ್ರಕಾರ, ಹಂಪನಕಟ್ಟೆಯಲ್ಲೇ 100ಕ್ಕೂ ಹೆಚ್ಚು ಗ್ರಾಹಕರಿದ್ದು, ದಿನವೂ ಒಂದಷ್ಟು ದುಡ್ಡು ಉಳಿತಾಯ ಆಗಲಿ ಎಂದು ಪಿಗ್ಮಿ ಕಟ್ಟುತ್ತಿದ್ದರು. ಆದರೆ ವಾರದ ಹಿಂದೆ ಕಲೆಕ್ಷನ್ ಆದ ಮೊತ್ತದಲ್ಲಿ ಹಣವನ್ನು ತೆಗೆಯೋಣ ಎಂದಾಗ, ಸಂಸ್ಥೆಯಲ್ಲಿ ಹಣ ಇಲ್ಲ ಎಂಬ ಮಾಹಿತಿ ಬಂದಿತ್ತು. ಪಿವಿಎಸ್ ನಲ್ಲಿರುವ ಕಚೇರಿಗೆ ತೆರಳಿ ನೋಡಿದಾಗ, ಮೇಲಿನಿಂದಲೇ ಹಣ ಇಲ್ಲ ಎಂದು ಸೂಚನೆ ಬಂದಿದೆ ಎನ್ನುವ ಮಾಹಿತಿಯನ್ನು ಸಿಬಂದಿ ನೀಡಿದ್ದಾರಂತೆ.
ಹೆಚ್ಚಿನ ಮಂದಿಗೆ ಸಂಸ್ಥೆಯಲ್ಲಿ ಸಮಸ್ಯೆ ಆಗಿರುವ ಮಾಹಿತಿ ಇಲ್ಲ. ಹೀಗಾಗಿ ಪೊಲೀಸ್ ದೂರು ನೀಡಲು ಬಂದಿಲ್ಲ. ಹಲವಾರು ಮಂದಿ 40-50 ಸಾವಿರ ಅಂತ ಹಣ ಕಳಕೊಂಡಿದ್ದಾರೆ ಎಂದು ಅಬ್ದುಲ್ ಅಜೀಜ್ ತಿಳಿಸಿದ್ದಾರೆ. ರಾಯಲ್ ಟ್ರಾವಂಕೂರ್ ಹಣಕಾಸು ಸಂಸ್ಥೆ 2021ರಲ್ಲಿ ಆರಂಭಗೊಂಡಿದ್ದು ಕೇರಳದ ಕಣ್ಣೂರಿನಲ್ಲಿ ಪ್ರಧಾನ ಕಚೇರಿ ಹೊಂದಿದೆ. ಕಾಸರಗೋಡು, ಕಣ್ಣೂರು ಸೇರಿದಂತೆ ಉತ್ತರ ಕೇರಳದ ಹಲವು ಕಡೆಗಳಲ್ಲಿ ಶಾಖಾ ಕಚೇರಿಯಿದ್ದು, ಕರ್ನಾಟಕದ ಮಂಗಳೂರು ಮತ್ತು ತೊಕ್ಕೊಟ್ಟಿನಲ್ಲಿ ಕಳೆದ ವರ್ಷ ಕಚೇರಿ ಆರಂಭಿಸಿತ್ತು. ರಾಹುಲ್ ಚಕ್ರಪಾಣಿ ಎಂಬವರು ಸಂಸ್ಥೆಯ ಎಂಡಿ ಆಗಿದ್ದಾರೆ.
Mangalore Royal Travancore fraud to pigmy, case filed to Police Commissioner. Hundreds have been cheated in the name of collecting Pigmy. Crores of amount has been duped.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm