ಬ್ರೇಕಿಂಗ್ ನ್ಯೂಸ್
11-12-23 11:35 am Bangalore Correspondent ಕ್ರೈಂ
ಬೆಂಗಳೂರು, ಡಿ 11: ಮುಂಬೈ ಸೈಬರ್ ಕ್ರೈಂ ಪೊಲೀಸರ ಸೋಗಿನಲ್ಲಿ ಉದ್ಯಮಿಗೆ ಕರೆ ಮಾಡಿದ ವಂಚಕರು “ನಿಮ್ಮ ಹೆಸರಿನಲ್ಲಿ ವಿದೇಶಕ್ಕೆ ಡ್ರಗ್ಸ್ ಕೊರಿಯರ್ ಮೂಲಕ ಕಳುಹಿಸುತ್ತಿರುವ ಬಗ್ಗೆ ದೂರು ಬಂದಿದೆ.
ಈ ಬಗ್ಗೆ ದೂರು ದಾಖಲಿಸದಿರಲು ಹಣ ನೀಡುವಂತೆ ಬೆದರಿಸಿ ಬರೋಬರಿ 1.98 ಕೋಟಿ ರೂ. ಸುಲಿಗೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಎಚ್ಎಸ್ ಆರ್ ಲೇಔಟ್ ನಿವಾಸಿ ತಾರಕ್ ಶಾ(53) ಎಂಬವರು ಆಗ್ನೇಯ ವಿಭಾಗದ ಸೆನ್ ಠಾಣೆಯಲ್ಲಿ ರಾಹುಲ್ ಕುಮಾರ್ ಮತ್ತು ಬಲ್ಸಿಂಗ್ ರಜಪೂತ್ ಎಂಬವರ ವಿರುದ್ಧ ದೂರು ನೀಡಿದ್ದಾರೆ.
ಡಿ.2ರಂದು ತಾರಕ್ ಶಾಗೆ ಸ್ಕೈಪ್ನಲ್ಲಿ ಅಪರಿಚಿತ ನಂಬರ್ನಿಂದ ಕರೆ ಮಾಡಿದ ವಂಚಕರು, ಫೆಡೆಕ್ಸ್ ಕೊರಿಯರ್ನಿಂದ ಕರೆ ಮಾಡುತ್ತಿದ್ದು, ನಿಮ್ಮ ಆಧಾರ್ ಸಂಖ್ಯೆ ಬಳಸಿಕೊಂಡು ಅಕ್ರಮವಾಗಿ ಮುಂಬೈ ನಿಂದ ತೈವಾನ್ ದೇಶಕ್ಕೆ ಎಂಡಿಎಂಎ ಮಾದಕ ವಸ್ತುಗಳನ್ನು ಕೊರಿಯರ್ ಮೂಲಕ ಕಳುಹಿಸ ಲಾಗುತ್ತಿದೆ. ಈ ಸಂಬಂಧ ಮುಂಬೈ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೀಗಾಗಿ ನಿಮ್ಮನ್ನು ವಿಚಾರಣೆ ಮಾಡಬೇಕು ಎಂದಿದ್ದಾನೆ. ಅದರಿಂದ ಆತಂಕಗೊಂಡ ತಾರಕ್, ತಮಗೂ ಕೋರಿಯರ್ಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.
ಈ ವೇಳೆ ದುಷ್ಕರ್ಮಿಗಳು, ಈ ಸಂಬಂಧ ಪರಿಶೀಲಿಸುವ ಅಗತ್ಯವಿದ್ದು, ನಾವು ನೀಡುವ ಖಾತೆಗೆ ಹಣ ಹಾಕುವಂತೆ ಸೂಚಿಸಿದ್ದಾರೆ. ಪರಿಶೀಲನೆ ಬಳಿಕ ಆ ಹಣವನ್ನು ವಾಪಾಸ್ ನೀಡುವುದಾಗಿ ತಿಳಿಸಿದ್ದಾರೆ.
ಇವರ ಮಾತು ನಂಬಿದ ತಾರಕ್ ಅವರು, ದುಷ್ಕರ್ಮಿಗಳು ನೀಡಿದ ಬ್ಯಾಂಕ್ ಖಾತೆಗಳಿಗೆ ವಿವಿಧ ಹಂತಗಳಲ್ಲಿ 1.98 ಕೋಟಿ ರು. ಹಣ ವರ್ಗಾಯಿಸಿದ್ದಾರೆ. ಹಣ ವರ್ಗಾವಣೆಯಾದ ಬಳಿಕ ದುಷ್ಕರ್ಮಿಗಳು, ತಾರಕ್ ಅವರ ಸಂಪರ್ಕಕ್ಕೆ ಸಿಕ್ಕಿಲ್ಲ. ಹತ್ತಾರು ಬಾರಿ ಕರೆ ಮಾಡಿದರೂ ಯಾವುದೇ ಪ್ರಯೋಜವಾಗಿಲ್ಲ. ಬಳಿಕ ತಾನು ಸೈಬರ್ ವಂಚಕರ ಬಲೆ ಬಿದ್ದಿರುವುದು ತಾರಕ್ ಅವರಿಗೆ ಅರಿವಾಗಿದೆ. ಬಳಿಕ ಆಗ್ನೇಯ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.
ಈ ದೂರಿನ ಮೇರೆಗೆ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Fake drug Courier fraud, Bangalore businessman loses Rs 2 crore to scammers posing as Mumbai police.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm