ಬ್ರೇಕಿಂಗ್ ನ್ಯೂಸ್
11-12-23 11:35 am Bangalore Correspondent ಕ್ರೈಂ
ಬೆಂಗಳೂರು, ಡಿ 11: ಮುಂಬೈ ಸೈಬರ್ ಕ್ರೈಂ ಪೊಲೀಸರ ಸೋಗಿನಲ್ಲಿ ಉದ್ಯಮಿಗೆ ಕರೆ ಮಾಡಿದ ವಂಚಕರು “ನಿಮ್ಮ ಹೆಸರಿನಲ್ಲಿ ವಿದೇಶಕ್ಕೆ ಡ್ರಗ್ಸ್ ಕೊರಿಯರ್ ಮೂಲಕ ಕಳುಹಿಸುತ್ತಿರುವ ಬಗ್ಗೆ ದೂರು ಬಂದಿದೆ.
ಈ ಬಗ್ಗೆ ದೂರು ದಾಖಲಿಸದಿರಲು ಹಣ ನೀಡುವಂತೆ ಬೆದರಿಸಿ ಬರೋಬರಿ 1.98 ಕೋಟಿ ರೂ. ಸುಲಿಗೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಎಚ್ಎಸ್ ಆರ್ ಲೇಔಟ್ ನಿವಾಸಿ ತಾರಕ್ ಶಾ(53) ಎಂಬವರು ಆಗ್ನೇಯ ವಿಭಾಗದ ಸೆನ್ ಠಾಣೆಯಲ್ಲಿ ರಾಹುಲ್ ಕುಮಾರ್ ಮತ್ತು ಬಲ್ಸಿಂಗ್ ರಜಪೂತ್ ಎಂಬವರ ವಿರುದ್ಧ ದೂರು ನೀಡಿದ್ದಾರೆ.
ಡಿ.2ರಂದು ತಾರಕ್ ಶಾಗೆ ಸ್ಕೈಪ್ನಲ್ಲಿ ಅಪರಿಚಿತ ನಂಬರ್ನಿಂದ ಕರೆ ಮಾಡಿದ ವಂಚಕರು, ಫೆಡೆಕ್ಸ್ ಕೊರಿಯರ್ನಿಂದ ಕರೆ ಮಾಡುತ್ತಿದ್ದು, ನಿಮ್ಮ ಆಧಾರ್ ಸಂಖ್ಯೆ ಬಳಸಿಕೊಂಡು ಅಕ್ರಮವಾಗಿ ಮುಂಬೈ ನಿಂದ ತೈವಾನ್ ದೇಶಕ್ಕೆ ಎಂಡಿಎಂಎ ಮಾದಕ ವಸ್ತುಗಳನ್ನು ಕೊರಿಯರ್ ಮೂಲಕ ಕಳುಹಿಸ ಲಾಗುತ್ತಿದೆ. ಈ ಸಂಬಂಧ ಮುಂಬೈ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೀಗಾಗಿ ನಿಮ್ಮನ್ನು ವಿಚಾರಣೆ ಮಾಡಬೇಕು ಎಂದಿದ್ದಾನೆ. ಅದರಿಂದ ಆತಂಕಗೊಂಡ ತಾರಕ್, ತಮಗೂ ಕೋರಿಯರ್ಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.
ಈ ವೇಳೆ ದುಷ್ಕರ್ಮಿಗಳು, ಈ ಸಂಬಂಧ ಪರಿಶೀಲಿಸುವ ಅಗತ್ಯವಿದ್ದು, ನಾವು ನೀಡುವ ಖಾತೆಗೆ ಹಣ ಹಾಕುವಂತೆ ಸೂಚಿಸಿದ್ದಾರೆ. ಪರಿಶೀಲನೆ ಬಳಿಕ ಆ ಹಣವನ್ನು ವಾಪಾಸ್ ನೀಡುವುದಾಗಿ ತಿಳಿಸಿದ್ದಾರೆ.
ಇವರ ಮಾತು ನಂಬಿದ ತಾರಕ್ ಅವರು, ದುಷ್ಕರ್ಮಿಗಳು ನೀಡಿದ ಬ್ಯಾಂಕ್ ಖಾತೆಗಳಿಗೆ ವಿವಿಧ ಹಂತಗಳಲ್ಲಿ 1.98 ಕೋಟಿ ರು. ಹಣ ವರ್ಗಾಯಿಸಿದ್ದಾರೆ. ಹಣ ವರ್ಗಾವಣೆಯಾದ ಬಳಿಕ ದುಷ್ಕರ್ಮಿಗಳು, ತಾರಕ್ ಅವರ ಸಂಪರ್ಕಕ್ಕೆ ಸಿಕ್ಕಿಲ್ಲ. ಹತ್ತಾರು ಬಾರಿ ಕರೆ ಮಾಡಿದರೂ ಯಾವುದೇ ಪ್ರಯೋಜವಾಗಿಲ್ಲ. ಬಳಿಕ ತಾನು ಸೈಬರ್ ವಂಚಕರ ಬಲೆ ಬಿದ್ದಿರುವುದು ತಾರಕ್ ಅವರಿಗೆ ಅರಿವಾಗಿದೆ. ಬಳಿಕ ಆಗ್ನೇಯ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.
ಈ ದೂರಿನ ಮೇರೆಗೆ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Fake drug Courier fraud, Bangalore businessman loses Rs 2 crore to scammers posing as Mumbai police.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm