ಬ್ರೇಕಿಂಗ್ ನ್ಯೂಸ್
11-12-23 11:35 am Bangalore Correspondent ಕ್ರೈಂ
ಬೆಂಗಳೂರು, ಡಿ 11: ಮುಂಬೈ ಸೈಬರ್ ಕ್ರೈಂ ಪೊಲೀಸರ ಸೋಗಿನಲ್ಲಿ ಉದ್ಯಮಿಗೆ ಕರೆ ಮಾಡಿದ ವಂಚಕರು “ನಿಮ್ಮ ಹೆಸರಿನಲ್ಲಿ ವಿದೇಶಕ್ಕೆ ಡ್ರಗ್ಸ್ ಕೊರಿಯರ್ ಮೂಲಕ ಕಳುಹಿಸುತ್ತಿರುವ ಬಗ್ಗೆ ದೂರು ಬಂದಿದೆ.
ಈ ಬಗ್ಗೆ ದೂರು ದಾಖಲಿಸದಿರಲು ಹಣ ನೀಡುವಂತೆ ಬೆದರಿಸಿ ಬರೋಬರಿ 1.98 ಕೋಟಿ ರೂ. ಸುಲಿಗೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಎಚ್ಎಸ್ ಆರ್ ಲೇಔಟ್ ನಿವಾಸಿ ತಾರಕ್ ಶಾ(53) ಎಂಬವರು ಆಗ್ನೇಯ ವಿಭಾಗದ ಸೆನ್ ಠಾಣೆಯಲ್ಲಿ ರಾಹುಲ್ ಕುಮಾರ್ ಮತ್ತು ಬಲ್ಸಿಂಗ್ ರಜಪೂತ್ ಎಂಬವರ ವಿರುದ್ಧ ದೂರು ನೀಡಿದ್ದಾರೆ.
ಡಿ.2ರಂದು ತಾರಕ್ ಶಾಗೆ ಸ್ಕೈಪ್ನಲ್ಲಿ ಅಪರಿಚಿತ ನಂಬರ್ನಿಂದ ಕರೆ ಮಾಡಿದ ವಂಚಕರು, ಫೆಡೆಕ್ಸ್ ಕೊರಿಯರ್ನಿಂದ ಕರೆ ಮಾಡುತ್ತಿದ್ದು, ನಿಮ್ಮ ಆಧಾರ್ ಸಂಖ್ಯೆ ಬಳಸಿಕೊಂಡು ಅಕ್ರಮವಾಗಿ ಮುಂಬೈ ನಿಂದ ತೈವಾನ್ ದೇಶಕ್ಕೆ ಎಂಡಿಎಂಎ ಮಾದಕ ವಸ್ತುಗಳನ್ನು ಕೊರಿಯರ್ ಮೂಲಕ ಕಳುಹಿಸ ಲಾಗುತ್ತಿದೆ. ಈ ಸಂಬಂಧ ಮುಂಬೈ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೀಗಾಗಿ ನಿಮ್ಮನ್ನು ವಿಚಾರಣೆ ಮಾಡಬೇಕು ಎಂದಿದ್ದಾನೆ. ಅದರಿಂದ ಆತಂಕಗೊಂಡ ತಾರಕ್, ತಮಗೂ ಕೋರಿಯರ್ಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.
ಈ ವೇಳೆ ದುಷ್ಕರ್ಮಿಗಳು, ಈ ಸಂಬಂಧ ಪರಿಶೀಲಿಸುವ ಅಗತ್ಯವಿದ್ದು, ನಾವು ನೀಡುವ ಖಾತೆಗೆ ಹಣ ಹಾಕುವಂತೆ ಸೂಚಿಸಿದ್ದಾರೆ. ಪರಿಶೀಲನೆ ಬಳಿಕ ಆ ಹಣವನ್ನು ವಾಪಾಸ್ ನೀಡುವುದಾಗಿ ತಿಳಿಸಿದ್ದಾರೆ.
ಇವರ ಮಾತು ನಂಬಿದ ತಾರಕ್ ಅವರು, ದುಷ್ಕರ್ಮಿಗಳು ನೀಡಿದ ಬ್ಯಾಂಕ್ ಖಾತೆಗಳಿಗೆ ವಿವಿಧ ಹಂತಗಳಲ್ಲಿ 1.98 ಕೋಟಿ ರು. ಹಣ ವರ್ಗಾಯಿಸಿದ್ದಾರೆ. ಹಣ ವರ್ಗಾವಣೆಯಾದ ಬಳಿಕ ದುಷ್ಕರ್ಮಿಗಳು, ತಾರಕ್ ಅವರ ಸಂಪರ್ಕಕ್ಕೆ ಸಿಕ್ಕಿಲ್ಲ. ಹತ್ತಾರು ಬಾರಿ ಕರೆ ಮಾಡಿದರೂ ಯಾವುದೇ ಪ್ರಯೋಜವಾಗಿಲ್ಲ. ಬಳಿಕ ತಾನು ಸೈಬರ್ ವಂಚಕರ ಬಲೆ ಬಿದ್ದಿರುವುದು ತಾರಕ್ ಅವರಿಗೆ ಅರಿವಾಗಿದೆ. ಬಳಿಕ ಆಗ್ನೇಯ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.
ಈ ದೂರಿನ ಮೇರೆಗೆ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Fake drug Courier fraud, Bangalore businessman loses Rs 2 crore to scammers posing as Mumbai police.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm