ಬ್ರೇಕಿಂಗ್ ನ್ಯೂಸ್
11-12-23 11:35 am Bangalore Correspondent ಕ್ರೈಂ
ಬೆಂಗಳೂರು, ಡಿ 11: ಮುಂಬೈ ಸೈಬರ್ ಕ್ರೈಂ ಪೊಲೀಸರ ಸೋಗಿನಲ್ಲಿ ಉದ್ಯಮಿಗೆ ಕರೆ ಮಾಡಿದ ವಂಚಕರು “ನಿಮ್ಮ ಹೆಸರಿನಲ್ಲಿ ವಿದೇಶಕ್ಕೆ ಡ್ರಗ್ಸ್ ಕೊರಿಯರ್ ಮೂಲಕ ಕಳುಹಿಸುತ್ತಿರುವ ಬಗ್ಗೆ ದೂರು ಬಂದಿದೆ.
ಈ ಬಗ್ಗೆ ದೂರು ದಾಖಲಿಸದಿರಲು ಹಣ ನೀಡುವಂತೆ ಬೆದರಿಸಿ ಬರೋಬರಿ 1.98 ಕೋಟಿ ರೂ. ಸುಲಿಗೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಎಚ್ಎಸ್ ಆರ್ ಲೇಔಟ್ ನಿವಾಸಿ ತಾರಕ್ ಶಾ(53) ಎಂಬವರು ಆಗ್ನೇಯ ವಿಭಾಗದ ಸೆನ್ ಠಾಣೆಯಲ್ಲಿ ರಾಹುಲ್ ಕುಮಾರ್ ಮತ್ತು ಬಲ್ಸಿಂಗ್ ರಜಪೂತ್ ಎಂಬವರ ವಿರುದ್ಧ ದೂರು ನೀಡಿದ್ದಾರೆ.
ಡಿ.2ರಂದು ತಾರಕ್ ಶಾಗೆ ಸ್ಕೈಪ್ನಲ್ಲಿ ಅಪರಿಚಿತ ನಂಬರ್ನಿಂದ ಕರೆ ಮಾಡಿದ ವಂಚಕರು, ಫೆಡೆಕ್ಸ್ ಕೊರಿಯರ್ನಿಂದ ಕರೆ ಮಾಡುತ್ತಿದ್ದು, ನಿಮ್ಮ ಆಧಾರ್ ಸಂಖ್ಯೆ ಬಳಸಿಕೊಂಡು ಅಕ್ರಮವಾಗಿ ಮುಂಬೈ ನಿಂದ ತೈವಾನ್ ದೇಶಕ್ಕೆ ಎಂಡಿಎಂಎ ಮಾದಕ ವಸ್ತುಗಳನ್ನು ಕೊರಿಯರ್ ಮೂಲಕ ಕಳುಹಿಸ ಲಾಗುತ್ತಿದೆ. ಈ ಸಂಬಂಧ ಮುಂಬೈ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೀಗಾಗಿ ನಿಮ್ಮನ್ನು ವಿಚಾರಣೆ ಮಾಡಬೇಕು ಎಂದಿದ್ದಾನೆ. ಅದರಿಂದ ಆತಂಕಗೊಂಡ ತಾರಕ್, ತಮಗೂ ಕೋರಿಯರ್ಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.
ಈ ವೇಳೆ ದುಷ್ಕರ್ಮಿಗಳು, ಈ ಸಂಬಂಧ ಪರಿಶೀಲಿಸುವ ಅಗತ್ಯವಿದ್ದು, ನಾವು ನೀಡುವ ಖಾತೆಗೆ ಹಣ ಹಾಕುವಂತೆ ಸೂಚಿಸಿದ್ದಾರೆ. ಪರಿಶೀಲನೆ ಬಳಿಕ ಆ ಹಣವನ್ನು ವಾಪಾಸ್ ನೀಡುವುದಾಗಿ ತಿಳಿಸಿದ್ದಾರೆ.
ಇವರ ಮಾತು ನಂಬಿದ ತಾರಕ್ ಅವರು, ದುಷ್ಕರ್ಮಿಗಳು ನೀಡಿದ ಬ್ಯಾಂಕ್ ಖಾತೆಗಳಿಗೆ ವಿವಿಧ ಹಂತಗಳಲ್ಲಿ 1.98 ಕೋಟಿ ರು. ಹಣ ವರ್ಗಾಯಿಸಿದ್ದಾರೆ. ಹಣ ವರ್ಗಾವಣೆಯಾದ ಬಳಿಕ ದುಷ್ಕರ್ಮಿಗಳು, ತಾರಕ್ ಅವರ ಸಂಪರ್ಕಕ್ಕೆ ಸಿಕ್ಕಿಲ್ಲ. ಹತ್ತಾರು ಬಾರಿ ಕರೆ ಮಾಡಿದರೂ ಯಾವುದೇ ಪ್ರಯೋಜವಾಗಿಲ್ಲ. ಬಳಿಕ ತಾನು ಸೈಬರ್ ವಂಚಕರ ಬಲೆ ಬಿದ್ದಿರುವುದು ತಾರಕ್ ಅವರಿಗೆ ಅರಿವಾಗಿದೆ. ಬಳಿಕ ಆಗ್ನೇಯ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.
ಈ ದೂರಿನ ಮೇರೆಗೆ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Fake drug Courier fraud, Bangalore businessman loses Rs 2 crore to scammers posing as Mumbai police.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm