ಬ್ರೇಕಿಂಗ್ ನ್ಯೂಸ್
11-12-23 06:58 pm Mangalore Correspondent ಕ್ರೈಂ
ಉಳ್ಳಾಲ, ಡಿ.11: ಕಳೆದ ವಾರವಷ್ಟೆ ಉಳ್ಳಾಲದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಹೆಡೆಮುರಿ ಕಟ್ಟಿದ್ದ ಎಸಿಪಿ ನೇತೃತ್ವದ ಆಂಟಿ ಡ್ರಗ್ ತಂಡವು ಮತ್ತೆ ಜಾಲವನ್ನ ಬೆನ್ನಟ್ಟಿದ್ದು ಡ್ರಗ್ ಪೂರೈಸುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರನ್ನ ಬಂಧಿಸಿ ಮತ್ತೆ ಆರು ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನ ವಶಪಡಿಸಿದೆ.
ಕಳೆದ ಡಿ.4 ರಂದು ಉಳ್ಳಾಲದ ಸಂತೋಷನಗರ ಎಂಬಲ್ಲಿ ಕಾರಿನಲ್ಲಿ ನಿಷೇಧಿತ ಸುಮಾರು 132 ಗ್ರಾಂ ತೂಕದ Methamphetamine ಮತ್ತು 250 LSD ಸ್ಟ್ಯಾಂಪ್ ಡ್ರಗ್ಗನ್ನ ಅಕ್ರಮವಾಗಿ ಮಾರಾಟ ಮಾಡಲು ಬಂದಿದ್ದ ಶಿಶಿರ್ ದೇವಾಡಿಗ ಮತ್ತು ಸುಶಾನ್ ಎಲ್ ಎಂಬವರನ್ನ ಎಸಿಪಿ ಧನ್ಯ ನಾಯಕ್ ನೇತೃತ್ವದ ಆಂಟಿ ಡ್ರಗ್ಸ್ ತಂಡವು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಮಾದಕ ವಸ್ತು ಮತ್ತು ಮಾರಕಾಯುಧಗಳನ್ನ ವಶಪಡಿಸಿಕೊಂಡಿತ್ತು. ಬಂಧಿತ ಆರೋಪಿಗಳಿಗೆ ಮಾದಕ ವಸ್ತುವನ್ನು ಸರಬರಾಜು ಮಾಡಿ ತಲೆಮರೆಸಿಕೊಂಡಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಆಶಿತ್ ಯಾನೆ ಅಶ್ವಿತ್ ಅಲಿಯಾಸ್ ಆಶು ಎಂಬವರನ್ನು ಬಂಧಿಸಲಾಗಿದೆ. ಕೋಟೆಕಾರು ಗ್ರಾಮದ ಮಾಡೂರು ಸಾಯಿ ಮಂದಿರದ ಸಮೀಪದ ಗ್ರೌಂಡ್ ಬಳಿ ಅವಿತಿದ್ದ ಆಶಿತನ್ನು ಎಸಿಪಿ ನೇತೃತ್ವದ ತಂಡ ಬಂಧಿಸಿದ್ದು, ಆತನಲ್ಲಿದ್ದ ಸುಮಾರು 6 ಲಕ್ಷ ರೂಪಾಯಿ ಮೌಲ್ಯದ 100 ಗ್ರಾಂ ತೂಕದ ಎಂ.ಡಿ.ಎಂ.ಎ, 30,000 ರೂಪಾಯಿ ಮೌಲ್ಯದ 600 ಗ್ರಾಂ ತೂಕದ ಗಾಂಜಾ ಮತ್ತು ಮೋಟಾರ್ ಬೈಕೊಂದನ್ನ ವಶ ಪಡಿಸಿಕೊಳ್ಳಲಾಗಿದೆ.


ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ನಿರ್ದೇಶನದಂತೆ ನಡೆದ ಕಾರ್ಯಾಚರಣೆಯಲ್ಲಿ ಎಸಿಪಿ ಧನ್ಯ ನಾಯಕ್, ಉಳ್ಳಾಲ ಠಾಣಾ ಪೊಲೀಸ್ ನಿರೀಕ್ಷಕರಾದ ಬಾಲಕೃಷ್ಣ ಹೆಚ್.ಎನ್, ಪಿಎಸ್ಐಗಳಾದ ಶೀತಲ್ ಅಲಗೂರ, ಸಂತೋಷ ಕುಮಾರ್ ಡಿ, ಪಿಎಸ್ಐ ಪುನೀತ್ ಗಾಂವ್ಕರ್, ಸಿಬ್ಬಂದಿಗಳಾದ ಸಾಜು ನಾಯರ್, ಮಹೇಶ್, ಶಿವಕುಮಾರ್ ಇದ್ದರು.
Ullal drug peddler arrested by ACP team in Mangalore.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm