ಬ್ರೇಕಿಂಗ್ ನ್ಯೂಸ್
11-12-23 06:58 pm Mangalore Correspondent ಕ್ರೈಂ
ಉಳ್ಳಾಲ, ಡಿ.11: ಕಳೆದ ವಾರವಷ್ಟೆ ಉಳ್ಳಾಲದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಹೆಡೆಮುರಿ ಕಟ್ಟಿದ್ದ ಎಸಿಪಿ ನೇತೃತ್ವದ ಆಂಟಿ ಡ್ರಗ್ ತಂಡವು ಮತ್ತೆ ಜಾಲವನ್ನ ಬೆನ್ನಟ್ಟಿದ್ದು ಡ್ರಗ್ ಪೂರೈಸುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರನ್ನ ಬಂಧಿಸಿ ಮತ್ತೆ ಆರು ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನ ವಶಪಡಿಸಿದೆ.
ಕಳೆದ ಡಿ.4 ರಂದು ಉಳ್ಳಾಲದ ಸಂತೋಷನಗರ ಎಂಬಲ್ಲಿ ಕಾರಿನಲ್ಲಿ ನಿಷೇಧಿತ ಸುಮಾರು 132 ಗ್ರಾಂ ತೂಕದ Methamphetamine ಮತ್ತು 250 LSD ಸ್ಟ್ಯಾಂಪ್ ಡ್ರಗ್ಗನ್ನ ಅಕ್ರಮವಾಗಿ ಮಾರಾಟ ಮಾಡಲು ಬಂದಿದ್ದ ಶಿಶಿರ್ ದೇವಾಡಿಗ ಮತ್ತು ಸುಶಾನ್ ಎಲ್ ಎಂಬವರನ್ನ ಎಸಿಪಿ ಧನ್ಯ ನಾಯಕ್ ನೇತೃತ್ವದ ಆಂಟಿ ಡ್ರಗ್ಸ್ ತಂಡವು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಮಾದಕ ವಸ್ತು ಮತ್ತು ಮಾರಕಾಯುಧಗಳನ್ನ ವಶಪಡಿಸಿಕೊಂಡಿತ್ತು. ಬಂಧಿತ ಆರೋಪಿಗಳಿಗೆ ಮಾದಕ ವಸ್ತುವನ್ನು ಸರಬರಾಜು ಮಾಡಿ ತಲೆಮರೆಸಿಕೊಂಡಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಆಶಿತ್ ಯಾನೆ ಅಶ್ವಿತ್ ಅಲಿಯಾಸ್ ಆಶು ಎಂಬವರನ್ನು ಬಂಧಿಸಲಾಗಿದೆ. ಕೋಟೆಕಾರು ಗ್ರಾಮದ ಮಾಡೂರು ಸಾಯಿ ಮಂದಿರದ ಸಮೀಪದ ಗ್ರೌಂಡ್ ಬಳಿ ಅವಿತಿದ್ದ ಆಶಿತನ್ನು ಎಸಿಪಿ ನೇತೃತ್ವದ ತಂಡ ಬಂಧಿಸಿದ್ದು, ಆತನಲ್ಲಿದ್ದ ಸುಮಾರು 6 ಲಕ್ಷ ರೂಪಾಯಿ ಮೌಲ್ಯದ 100 ಗ್ರಾಂ ತೂಕದ ಎಂ.ಡಿ.ಎಂ.ಎ, 30,000 ರೂಪಾಯಿ ಮೌಲ್ಯದ 600 ಗ್ರಾಂ ತೂಕದ ಗಾಂಜಾ ಮತ್ತು ಮೋಟಾರ್ ಬೈಕೊಂದನ್ನ ವಶ ಪಡಿಸಿಕೊಳ್ಳಲಾಗಿದೆ.


ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ನಿರ್ದೇಶನದಂತೆ ನಡೆದ ಕಾರ್ಯಾಚರಣೆಯಲ್ಲಿ ಎಸಿಪಿ ಧನ್ಯ ನಾಯಕ್, ಉಳ್ಳಾಲ ಠಾಣಾ ಪೊಲೀಸ್ ನಿರೀಕ್ಷಕರಾದ ಬಾಲಕೃಷ್ಣ ಹೆಚ್.ಎನ್, ಪಿಎಸ್ಐಗಳಾದ ಶೀತಲ್ ಅಲಗೂರ, ಸಂತೋಷ ಕುಮಾರ್ ಡಿ, ಪಿಎಸ್ಐ ಪುನೀತ್ ಗಾಂವ್ಕರ್, ಸಿಬ್ಬಂದಿಗಳಾದ ಸಾಜು ನಾಯರ್, ಮಹೇಶ್, ಶಿವಕುಮಾರ್ ಇದ್ದರು.
Ullal drug peddler arrested by ACP team in Mangalore.
13-08-26 08:09 pm
HK News Staffer
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm