ಬ್ರೇಕಿಂಗ್ ನ್ಯೂಸ್
12-12-23 10:59 pm Mangalore Correspondent ಕ್ರೈಂ
ಮಂಗಳೂರು, ಡಿ.12: ಅಬಕಾರಿ ಅಧಿಕಾರಿಗಳ ಮಹತ್ವದ ಕಾರ್ಯಾಚರಣೆಯಲ್ಲಿ ಕೇರಳ ಗಡಿಭಾಗ ತಲಪಾಡಿಯಲ್ಲಿ ನಡೆಯುತ್ತಿದ್ದ ಅಂತರಾಜ್ಯ ಮಟ್ಟದ ಬೃಹತ್ ಸ್ಪಿರಿಟ್ ತಯಾರಿ ಮತ್ತು ಮಾರಾಟ ದಂಧೆ ಪತ್ತೆಯಾಗಿದ್ದು ಎರಡು ಸಾವಿರಕ್ಕೂ ಹೆಚ್ಚು ಲೀಟರ್ ಸಾರಾಯಿ ಸ್ಪಿರಿಟ್ ವಶಕ್ಕೆ ಪಡೆಯಲಾಗಿದೆ.
ಕೇರಳ ಗಡಿಭಾಗ ಕಿನ್ಯಾ ಗ್ರಾಮದ ಸಾಂತ್ಯ ಎಂಬಲ್ಲಿ ಅಕ್ರಮ ಸಾರಾಯಿ ತಯಾರಿಸುತ್ತಿದ್ದ ಮನೆಗೆ ಅಬಕಾರಿ ಪೊಲೀಸರು ಮಂಗಳವಾರ ಸಂಜೆ ದಾಳಿ ನಡೆಸಿದ್ದಾರೆ. ಬೃಹತ್ ಮಟ್ಟದಲ್ಲಿ ಸಾರಾಯಿ ತಯಾರಿಸುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದು ಈ ವೇಳೆ, ಪ್ರಮುಖ ಆರೋಪಿ ನಿತ್ಯಾನಂದ ಭಂಡಾರಿ ಸ್ಥಳದಿಂದ ಪರಾರಿಯಾಗಿದ್ದಾನೆ.



ಪೊಲೀಸರು 2240 ಲೀಟರ್ ಮದ್ಯ ಸ್ಪಿರಿಟ್, 222 ಲೀಟರ್ ನಕಲಿ ಬ್ರಾಂಡಿ ಸೇರಿದಂತೆ ಮದ್ಯ ತಯಾರಿಕೆಗೆ ಬಳಸಿದ ಯಂತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಮದ್ಯವನ್ನು ತಯಾರಿಸಿ ಕೇರಳ ರಾಜ್ಯಕ್ಕೆ ಸಾಗಿಸಿ ಮಾರಾಟ ನಡೆಸುತ್ತಿದ್ದರು ಎನ್ನಲಾಗಿದೆ. ಅಬಕಾರಿ ದಳದ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ 25 ಕ್ಕೂ ಅಧಿಕ ಸಿಬಂದಿ ಭಾಗಿಯಾಗಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿತ್ತು.
2240 litres of liquor seized at Talapdy border by Police in Mangalore.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm