ಬ್ರೇಕಿಂಗ್ ನ್ಯೂಸ್
13-12-23 04:39 pm Mangalore Correspondent ಕ್ರೈಂ
ಉಳ್ಳಾಲ, ಡಿ.13: ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಹರೇಕಳದ ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ಸಮೀಪದ ಮನೆಗಳಿಗೆ ಮರಳು ಪೂರೈಸುತ್ತಿದ್ದ ಎರಡು ನಾಡ ದೋಣಿಗಳನ್ನ ಕೊಣಾಜೆ ಠಾಣೆಗೆ ಪ್ರಭಾರಿಯಾಗಿರುವ ಉಳ್ಳಾಲ ಇನ್ಸ್ ಪೆಕ್ಟರ್ ಹೆಚ್.ಎನ್ ಬಾಲಕೃಷ್ಣ ನೇತೃತ್ವದ ತಂಡ ದಾಳಿ ನಡೆಸಿ ಗಣಿ, ಭೂವಿಜ್ಞಾನ ಅಧಿಕಾರಿಗಳ ವಶಕ್ಕೆ ನೀಡಿದೆ.
ಹರೇಕಳದ ಧಕ್ಕೆಯ ನೇತ್ರಾವತಿ ನದಿಯಲ್ಲಿ ನಾಡ ದೋಣಿಗಳಲ್ಲಿ ಮರಳು ಸಾಗಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಉಳ್ಳಾಲ ಠಾಣಾ ಪಿಐ ಬಾಲಕೃಷ್ಣ ನೇತೃತ್ವದ ತಂಡವು ದಾಳಿ ನಡೆಸಿ ಮರಳು ಮತ್ತು ದೋಣಿಗಳನ್ನು ವಶಕ್ಕೆ ಪಡೆದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಶಕ್ಕೆ ನೀಡಿದೆ.


ಹರೇಕಳ, ಪಾವೂರಿನಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೆ ನಿರಂತರವಾಗಿ ನಡೆಯುತ್ತಲೇ ಇದೆ. ಕೊಣಾಜೆ ಪೊಲೀಸರಿಗೆ ಇದೇನು ಗೊತ್ತಿಲ್ಲದ ಸಂಗತಿಯಲ್ಲ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕಳೆದ ಕೆಲ ತಿಂಗಳ ಹಿಂದೆ ತೆರವಾದ ಇನ್ಸ್ ಪೆಕ್ಟರ್ ಸ್ಥಾನಕ್ಕೆ ಪರ್ಯಾಯ ಅಧಿಕಾರಿ ನೇಮಕವಾಗಿಲ್ಲ. ಕೊಣಾಜೆಯಲ್ಲಿ ಪಿಎಸ್ ಐಗಳು ಮತ್ತು ಅನುಭವಿ ಪೊಲೀಸರ ಕಾರು ಬಾರು ನಡೆಯುತ್ತಿದೆ.
ಕೊಣಾಜೆ ಠಾಣೆಯ ಪ್ರಭಾರ ಉಸ್ತುವಾರಿಯನ್ನ ಉಳ್ಳಾಲ ಇನ್ಸ್ ಪೆಕ್ಟರ್ ಬಾಲಕೃಷ್ಣ ವಹಿಸಿದ್ದು, ಅವರ ನೇತೃತ್ವದಲ್ಲಿ ನಡೆದ ದಿಢೀರ್ ದಾಳಿಯಿಂದ ಹರೇಕಳದಲ್ಲಿ ಬೇರೂರಿರುವ ಮರಳು ಮಾಫಿಯಾಗಳು ದಿಕ್ಕೆಟ್ಟು ಹೋಗಿವೆ. ಕಾರ್ಯಾಚರಣೆಯಲ್ಲಿ ಪಿಎಸ್ ಐ ಪುನೀತ್ ಗಾಂವ್ಕರ್, ವಿನೋದ್, ಸಿಬ್ಬಂದಿಗಳಾದ ಶೈಲೇಂದ್ರ ಮೊದಲಾದವರು ಇದ್ದರು.
Mangalore Ullal Police inspector team raids illegal sand mining, two boats seized.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
24-03-26 09:29 pm
HK News Staffer
ಟ್ಯಾಕ್ಸಿ ಕಾರುಗಳಿಗೆ ಪ್ಯಾನಿಕ್ ಬಟನ್ ಹಣ ಮಾಡುವ ದಂಧ...
24-03-26 08:29 pm
ಲಕ್ಷ್ಮೀ ಲಾಕೆಟ್ ಸರ ಎಂದು ನಂಬಿಸಿ ಮಹಿಳೆಯಿಂದ ಅಸಲಿ...
24-03-26 05:34 pm
ಸಜಿಪನಡು ತಲೆಮೊಗರು ಮಸೀದಿಯಲ್ಲಿ ಗಲಾಟೆ ; ಆಡಳಿತ ವಿಚ...
24-03-26 11:55 am
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm